Breaking News

ಶ್ರೀರಾಮನಗರದಲ್ಲಿ ಬೂದುನೀರುನಿರ್ವಹಣೆ ಚರಂಡಿ ಕಾಮಗಾರಿಗಳ ಪರಿಶೀಲನೆ

Inspection of gray water drainage works at Sri Ramanagara

ಜಾಹೀರಾತು

ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ಜಿಪಂ ಸಿಇಓ ರಾಹುಲ್ ರತ್ನಂ ಪಾಂಡೆಯ ಸೂಚನೆ

ಗಂಗಾವತಿ : ತಾಲೂಕಿನ ಶ್ರೀರಾಮನಗರ ಗ್ರಾಮ ಪಂಚಾಯತ್ ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಶುಕ್ರವಾರ ಭೇಟಿ ನೀಡಿ ಬೂದು ನೀರು ನಿರ್ವಹಣೆ ಚರಂಡಿ ಕಾಮಗಾರಿಗಳನ್ನು ಪರಿಶೀಲಿಸಿದರು.

ಶ್ರೀರಾಮನಗರದ 4 ಮತ್ತು 5ನೇ ವಾರ್ಡ್ ಗಳಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಬೂದು ನೀರು ನಿರ್ವಹಣೆ ಚರಂಡಿ ಕಾಮಗಾರಿಗಳನ್ನು ಜಿಪಂ ಸಿಇಓ ರಾಹುಲ್ ರತ್ನಂ ಪಾಂಡೆಯ ಅವರು ಪರಿಶೀಲಿಸಿ, ನಿಗದಿತ ಅವಧಿಯಲ್ಲಿ ಗುಣಮಟ್ಟದ ಕಾಮಗಾರಿ ಕೈಗೊಂಡು, ಮಾದರಿ ಗ್ರಾಮವನ್ನಾಗಿ ಮಾಡುವಂತೆ ಅಧಿಕಾರಿಗಳಿಗೆ ಜಿಪಂ ಸಿಇಓ ಅವರು ಸೂಚಿಸಿದರು.

ಆರ್ ಡಬ್ಲ್ಯು ಎಸ್ ಇಇ ಮಹೇಶ ಶಾಸ್ತ್ರಿ,
ಎಇಇ ವಿಜಯ ಕುಮಾರ್, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ನಾಗೇಶ ಕುರಡಿ, ತಾಂತ್ರಿಕ ಸಹಾಯಕ ಮಹೇಶ ಸೇರಿ ಗ್ರಾಪಂ ಸಿಬ್ಬಂದಿಗಳು ಇದ್ದರು.

About Mallikarjun

Check Also

ಕಮಲ್ ಹಾಸನ್ ಕ್ಷಮೆ ಕೇಳುವವರೆಗೂಅವರ ಚಿತ್ರಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕು: ಬಳ್ಳಾರಿ ರಾಮಣ್ಣ ನಾಯಕ

Kamal Haasan’s films should be banned in the state until he apologizes: Ballari Ramanna Nayak …

Leave a Reply

Your email address will not be published. Required fields are marked *