Breaking News

ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಸಿಗಲಿ‌- ಮಹಾದೇವ ಶ್ರೀ

ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಸಿಗಲಿ‌- ಮಹಾದೇವ ಶ್ರೀ

ಜಾಹೀರಾತು

May Panchamasali community get justice – Mahadeva Shri

ವರದಿ : ಪಂಚಯ್ಯ ಹಿರೇಮಠ. *


ಕುಕನೂರ, ಡಿ. 17 : ಈ ನಾಡಿನ ಬಹುತೇಕ ಮಠ ಮಾನ್ಯಗಳಲ್ಲಿ ತಮ್ಮದೇ ಆದ ಸೇವೆ ಸಲ್ಲಿಸಿದ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ನೀಡಬೇಕು ಎಂದು ಕುಕನೂರಿನ ಪೂಜ್ಯ ಡಾ ಮಹಾದೇವ ಸ್ವಾಮೀಜಿ ಹೇಳಿದರು.

ಅವರು ಕುಕನೂರ ಪಟ್ಟಣದ ಅನ್ನದಾನೀಶ್ವರ ಶಾಖಾಮಠ ಮತ್ತು ವೀರಶೈವ ಲಿಂಗಾಯತ ಮಹಾಸಭಾ ಕುಕನೂರ ವತಿಯಿಂದ ಬೆಳಗಾವಿ ಅಧಿವೇಶನ ಸಂಧರ್ಭದಲ್ಲಿ ಪಂಚಮಸಾಲಿ ಸಮುದಾಯದ ಮೇಲೆ ಲಾಠಿ ಜಾರ್ಜ್ ಮಾಡಿದ್ದನ್ನು ಖಂಡಿಸಿ ಕುಕನೂರ ತಹಶಿಲ್ದಾರರಗೆ ಮನವಿ ಸಲ್ಲಿಸಿ ಮಾತನಾಡಿ ಪಂಚಮಸಾಲಿ ಸಮುದಾಯದ ಹೋರಾಟ ಹತ್ತಿಕ್ಕುವ ಕಾರ್ಯದ ಜೊತೆಗೆ ಸಮಾಜದ ಬಂಧುಗಳ ಮೇಲೆ ಲಾಠಿ ಜಾರ್ಜ್ ಮಾಡಿದ್ದು ಖಂಡನೀಯವಾಗಿದೆ ಎಂದರು.

ಘನ ಸರ್ಕಾರ ಅನ್ಯಾಯಕ್ಕೆ ಒಳಗಾದ ಜನರಿಗೆ ಸೂಕ್ತ ಚಿಕಿತ್ಸೆ ನೀಡಿ ಆ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.

ನಂತರ ಮಾತನಾಡಿದ ಸಮಾಜದ ಮುಖಂಡ ಈರಣ್ಣ ಅಣ್ಣಿಗೇರಿ ನಮ್ಮ ಸಮಾಜದ ಬಂಧುಗಳಿಗೆ ಲಾಠಿ ಜಾರ್ಜ್ ಮಾಡಿದ್ದು ಲಿಂಗಾಯತ ಸಮುದಾಯಕ್ಕೆ ನೋವುಂಟು ಮಾಡಿದೆ ಸರ್ಕಾರ ಈ ಕೂಡಲೇ ಸಮಾಜದ ಕ್ಷಮೇ ಕೇಳಬೇಕು ಎಂದರು.

ನಂತರದಲ್ಲಿ ಕುಕನೂರಿನ ಗ್ರೇಡ್ 2 ತಹಸಿಲ್ದಾರ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗದಿಗೆಪ್ಪ ಪವಾಡಶೆಟ್ಟಿ, ಶರಣಪ್ಪ ಗುತ್ತಿ, ಯಲ್ಲಪ್ಪ ಗೌಡ್ರ, ಬಸವರಾಜ ಹುಂಡಿ, ಎಮ್ ಸಿ ಹೀರೇಮಠ, ಸಂಗಮೇಶ ಕಲ್ಮಠ, ರಾಮನಗೌಡ ಹುಚನೂರು, ಚಂದ್ರಶೇಖರಯ್ಯ ಗಣಚಾರಿ ಮತ್ತು ಇತರರು ಇದ್ದರು

About Mallikarjun

Check Also

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಘಟನೆಯಿಂದ ಎಐಡಿಎಸ್‌ಓ ಕೊಪ್ಪಳ ಜಿಲ್ಲಾ  ಸಮಿತಿಯು  ತೀವ್ರ ಆಘಾತ ಮತ್ತು ಆಕ್ರೋಶ ವ್ಯಕ್ತಪಡಿಸಿದೆ.

The AIDSSO Koppal District Committee has expressed deep shock and outrage over the recent incident …

Leave a Reply

Your email address will not be published. Required fields are marked *