ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಸಿಗಲಿ- ಮಹಾದೇವ ಶ್ರೀ
May Panchamasali community get justice – Mahadeva Shri
ವರದಿ : ಪಂಚಯ್ಯ ಹಿರೇಮಠ. *
ಕುಕನೂರ, ಡಿ. 17 : ಈ ನಾಡಿನ ಬಹುತೇಕ ಮಠ ಮಾನ್ಯಗಳಲ್ಲಿ ತಮ್ಮದೇ ಆದ ಸೇವೆ ಸಲ್ಲಿಸಿದ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ನೀಡಬೇಕು ಎಂದು ಕುಕನೂರಿನ ಪೂಜ್ಯ ಡಾ ಮಹಾದೇವ ಸ್ವಾಮೀಜಿ ಹೇಳಿದರು.
ಅವರು ಕುಕನೂರ ಪಟ್ಟಣದ ಅನ್ನದಾನೀಶ್ವರ ಶಾಖಾಮಠ ಮತ್ತು ವೀರಶೈವ ಲಿಂಗಾಯತ ಮಹಾಸಭಾ ಕುಕನೂರ ವತಿಯಿಂದ ಬೆಳಗಾವಿ ಅಧಿವೇಶನ ಸಂಧರ್ಭದಲ್ಲಿ ಪಂಚಮಸಾಲಿ ಸಮುದಾಯದ ಮೇಲೆ ಲಾಠಿ ಜಾರ್ಜ್ ಮಾಡಿದ್ದನ್ನು ಖಂಡಿಸಿ ಕುಕನೂರ ತಹಶಿಲ್ದಾರರಗೆ ಮನವಿ ಸಲ್ಲಿಸಿ ಮಾತನಾಡಿ ಪಂಚಮಸಾಲಿ ಸಮುದಾಯದ ಹೋರಾಟ ಹತ್ತಿಕ್ಕುವ ಕಾರ್ಯದ ಜೊತೆಗೆ ಸಮಾಜದ ಬಂಧುಗಳ ಮೇಲೆ ಲಾಠಿ ಜಾರ್ಜ್ ಮಾಡಿದ್ದು ಖಂಡನೀಯವಾಗಿದೆ ಎಂದರು.
ಘನ ಸರ್ಕಾರ ಅನ್ಯಾಯಕ್ಕೆ ಒಳಗಾದ ಜನರಿಗೆ ಸೂಕ್ತ ಚಿಕಿತ್ಸೆ ನೀಡಿ ಆ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.
ನಂತರ ಮಾತನಾಡಿದ ಸಮಾಜದ ಮುಖಂಡ ಈರಣ್ಣ ಅಣ್ಣಿಗೇರಿ ನಮ್ಮ ಸಮಾಜದ ಬಂಧುಗಳಿಗೆ ಲಾಠಿ ಜಾರ್ಜ್ ಮಾಡಿದ್ದು ಲಿಂಗಾಯತ ಸಮುದಾಯಕ್ಕೆ ನೋವುಂಟು ಮಾಡಿದೆ ಸರ್ಕಾರ ಈ ಕೂಡಲೇ ಸಮಾಜದ ಕ್ಷಮೇ ಕೇಳಬೇಕು ಎಂದರು.
ನಂತರದಲ್ಲಿ ಕುಕನೂರಿನ ಗ್ರೇಡ್ 2 ತಹಸಿಲ್ದಾರ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗದಿಗೆಪ್ಪ ಪವಾಡಶೆಟ್ಟಿ, ಶರಣಪ್ಪ ಗುತ್ತಿ, ಯಲ್ಲಪ್ಪ ಗೌಡ್ರ, ಬಸವರಾಜ ಹುಂಡಿ, ಎಮ್ ಸಿ ಹೀರೇಮಠ, ಸಂಗಮೇಶ ಕಲ್ಮಠ, ರಾಮನಗೌಡ ಹುಚನೂರು, ಚಂದ್ರಶೇಖರಯ್ಯ ಗಣಚಾರಿ ಮತ್ತು ಇತರರು ಇದ್ದರು
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…