Breaking News

ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ

Students should take care of their health at home

ಜಾಹೀರಾತು
WhatsApp Image 2025 01 02 At 1.35.18 PM

ಗಂಗಾವತಿ,ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಕ್ಷಯ ರೋಗದ ಲಕ್ಷಣಗಳು ಕಂಡು ಬಂದಾಗ ಸರ್ಕಾರಿ ಆಸ್ಪತ್ರೆಗೆ ಪರೀಕ್ಷೆಗಳಿಗಾಗಿ ಕಳುಹಿಸಿಕೊಡಬೇಕು ಎಂದು ವೈದ್ಯಾಧಿಕಾರಿ ಡಾ. ಸಂತೋಷ್ ಕುಮಾರ್ ರವರು ತಿಳಿಸಿದರು. ಅವರು ಜಿಲ್ಲಾ ಕ್ಷಯ ರೋಗ ನಿರ್ಮೂಲನ ಕಾರ್ಯಾಲಯ, ಕೊಪ್ಪಳ, ತಾಲೂಕ ಆರೋಗ್ಯ ಅಧಿಕಾರಿಗಳ ಕಚೇರಿ, ಉಪ ವಿಭಾಗ ಆಸ್ಪತ್ರೆ ಗಂಗಾವತಿ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಂಗಾಪುರ ಸಹಯೋಗದೊಂದಿಗೆ ಶಾಲಾ ವಿದ್ಯಾರ್ಥಿಗಳಿಗೆ 100 ದಿನಗಳ ಕ್ಷಯ ಮುಕ್ತ ಕೊಪ್ಪಳ ಅಭಿಯಾನ ದ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಷ್ಟ್ರದಾದ್ಯಂತ ನಡೆಯುತ್ತಿರುವ 100 ದಿನಗಳ ಕ್ಷಯ ಮುಕ್ತ ಅಭಯಾನದ ಅಡಿಯಲ್ಲಿ ಸಮುದಾಯದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
6, 7 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ, ಕ್ಷಯ ರೋಗದ ಕುರಿತು ಸವಿಸ್ತಾರವಾಗಿ ತಮ್ಮ ವಿಚಾರಗಳನ್ನು ಮಂಡಿಸಿದರು.
ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಕ್ಷಯ ಘಟಕ ಗಂಗಾವತಿಯ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಶ್ರೀ ಹುಸೇನ್ ಭಾಷಾ, ಕ್ಷಯ ರೋಗ ಆರೋಗ್ಯ ಪರಿವೀಕ್ಷಕ ಶ್ರೀ ಮಲ್ಲಿಕಾರ್ಜುನ್ ಇವರುಗಳು ಕ್ಷಯ ರೋಗದ ತೀವ್ರತೆ, ರೋಗ ಹರಡುವ ರೀತಿ, ಪರೀಕ್ಷಾ ವಿಧಾನಗಳು ಚಿಕಿತ್ಸಾ ಪದ್ಧತಿ ತಡೆಗಟ್ಟುವ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.
ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಮಲ್ಲಿಕಾ, ದ್ವಿತೀಯ ಬಹುಮಾನ ಗೋವಿಂದರಾಜು ಹಾಗೂ ತೃತೀಯ ಬಹುಮಾನ ಕಾವೇರಿ ಪಡೆದರು.
ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಸಿಬ್ಬಂದಿಗಳಾದ ವೆಂಕಟೇಶ್ ಲಕ್ಷ್ಮಿ ಪ್ರಸನ್ನ ಸುನಿತಾ ಸೌಭಾಗ್ಯ ನಾಗವೇಣಿ ಹಾಗೂ ಶಾಲೆಯ ಮುಖ್ಯ ಗುರುಗಳು ಹಾಗೂ ಶಿಕ್ಷಕರಾದ ಶ್ರೀ ಮೈಲಾರಪ್ಪ ಶ್ರೀಮತಿ ಖುತಿಜ ಶ್ರೀ ಚಂದ್ರಶೇಖರ್ ಶ್ರೀ ರಮೇಶ್ ಬಂಡಿ ಶ್ರೀಮತಿ ಅಕ್ಕಮಹಾದೇವಿ ಕುಮಾರಿ ಕಾವ್ಯ ಶ್ರೀಮತಿ ಲಕ್ಷ್ಮಿ ಇದ್ದರು.

About Mallikarjun

Check Also

unnamed

ಕಟ್ಟಡ ಇತರೆ ನರ‍್ಮಾಣ ಕರ‍್ಮಿಕರ ಆನ್ಲೈನ್ ರ‍್ಜಿ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಿ. ರ‍್ಕಾರ ಘೋಷಿಸಿದ ಎಲ್ಲಾ ಸೌಲಭ್ಯಗಳನ್ನು ಕೂಡಲೇ ಜಾರಿ ಮಾಡಿ

ಕಟ್ಟಡ ಇತರೆ ನರ‍್ಮಾಣ ಕರ‍್ಮಿಕರ ಆನ್ಲೈನ್ ರ‍್ಜಿ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಿ. ರ‍್ಕಾರ ಘೋಷಿಸಿದ ಎಲ್ಲಾ ಸೌಲಭ್ಯಗಳನ್ನು ಕೂಡಲೇ ಜಾರಿ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.