ಕಲ್ಯಾಣಸಿರಿ ವಿಶೇಷ

ಚಿರಿಬಿ ಗ್ರಾಮದಲ್ಲಿ ನಡೆದ ಅಸ್ಪೃಶ್ಯತಾ ನಿವಾರಣ ಜಾಗೃತಿ ಕಾರ್ಯಕ್ರಮ

Untouchability awareness program held in Chiribi village

ಕೊಟ್ಟೂರು ತಾಲ್ಲೂಕು ಚಿರಿಬಿ ಗ್ರಾಮದಲ್ಲಿ ಶುಕ್ರವಾರ ಅಸ್ಪೃಶ್ಯತಾ ನಿವಾರಣ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಉಪತಹಶೀಲ್ದಾರ ಅನ್ನದಾನೇಶ್ ಮಾತನಾಡಿ ಈ ಕಾರ್ಯಕ್ರಮಗಳು ಎಲ್ಲರಿಗೂ ತಲುಪಿ ಅಸ್ಪೃಶ್ಯತೆ ನಿವಾರಣೆ ಆಗಬೇಕು ಎಂದು ಹೇಳಿದರು. ಡಿ.ಎಸ್.ಎಸ್. ಮುಖಂಡರು ಮತ್ತು ವಕೀಲರಾದ ಹನುಮಂತಪ್ಪ ಮಾತನಾಡಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳ ಬಗ್ಗೆ ಮಾತನಾಡಿ, ಮನುಷ್ಯ ಮನುಷ್ಯರಾಗಿ ಬಾಳಬೇಕು, ಕಾನೂನಿನ ಪ್ರಕಾರ ಎಲ್ಲರೂ ಒಂದೇ ಎಂದು ಹೇಳಿದರು. ಸಂವಿಧಾನದ ಅನುಚ್ಛೇದ ೧೭ ರ ಬಗ್ಗೆ ಹೇಳಿದರು ೧೯೮೯ ಪರಿಶಿಷ್ಟ ಜಾತಿ ಕಾಯ್ದೆ ಬಗ್ಗೆ ವಿವರವಾಗಿ ಮಾತನಾಡಿದರು.
ಡಿ.ಎಸ್.ಎಸ್. ಮುಖಂಡರಾದ ಬಿ.ಮರಿಸ್ವಾಮಿ ಮಾತನಾಡಿ ಇಂತಹ ಕಾರ್ಯಕ್ರಮ ಜನರಿಗೆ ತಲುಪಬೇಕು. ಎಲ್ಲ ಇಲಾಖೆಯವರು ಭಾಗವಹಿಸಲು ಜಾಗೃತಿ ಮೂಡಿಸಬೇಕು. ಜಾತಿ ವ್ಯವಸ್ಥೆ ವಿರೋಧ ಮಾಡಬೇಕು, ಎಲ್ಲರಿಗೂ ಬುದ್ಧ, ಬಸವ, ಅಂಬೇಡ್ಕರ್ ಆದರ್ಶ ಆಗಬೇಕು ಎಂದರು. ಜಾತಿ ವ್ಯವಸ್ಥೆ ವಿರೋಧಿಸಿದವರು ಚರಿತ್ರೆಯಲ್ಲಿ ಉಳಿಯುತ್ತಾರೆ ಎಂದರು. ಶ್ರಮಿಕ ವರ್ಗ ಇರುವುದರಿಂದ ನಾವೆಲ್ಲರೂ ಬದುಕುತ್ತಿದ್ದೇವೆ ಎಂದರು. ಕೊಪ್ಪಳ ಜಿಲ್ಲೆ ಮರುಕುಂಬಿ ಘಟನೆ ಮನುಷ್ಯ ಸಮಾಜ ತಲೆತಗ್ಗಿಸುವ ಘಟನೆ ಎಂದರು. ರಾಮ ಸೀತೆಯನ್ನು ಪರಿಚಯಿಸಿದ ವಾಲ್ಮೀಕಿ ಮಂದಿರ ಕಟ್ಟಬೇಕು ಎಂದು ತಿಳಿಸಿದರು. ಕನಕದಾಸರು ಅಸ್ಪೃಶ್ಯತೆ ದೇಶಕ್ಕೆ ದೊಡ್ಡ ಕಳಂಕ ಹಾಗೂ ಮೂಢನಂಬಿಕೆ ತೊಲಗಬೇಕು. ದೇವಸ್ಥಾನದ ಮುಂದೆ ನಿಲ್ಲುವ ಬದಲು ಗ್ರಂಥಾಲಯ ಮುಂದೆ ನಿಲ್ಲಬೇಕು, ಬಸವಣ್ಣನ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು ಎ.ಡಿ. ನರೇಗಾ ವಿಜಯಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಎ.ಡಿ. ಶಾಹಿಕ ಅಹವದಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಪ್ರೌಢಶಾಲೆಯ ಮುಖ್ಯ ಗುರುಗಳಾದ ಜಿತೇಂದ್ರನಾಥ, ಮಾತನಾಡಿದರು. ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸ್ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

7 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

7 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

7 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

7 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

7 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

7 hours ago