Sunday: Anil Gunnapur’s Survey No.97 story anthology release event
ಬೆಂಗಳೂರು: ಜ.04: ಅನಿಲ್ ಗುನ್ನಾಪೂರ ಅವರು ಬರೆದ ‘ಸರ್ವೇ ನಂಬರ್-97’ ಎಂಬ ಕಥಾಸಂಕಲನವನ್ನು ಹೊಗಿರಣ ಪ್ರಕಾಶನ, ಬುಕ್ ಬ್ರಹ್ಮ ಹಾಗೂ ನ್ಯಾಯ ಸ್ಪಂದನ ಬೆಂಗಳೂರು, ಓದು ಗೆಳೆಯರ ಬಳಗ, ಬಾಗಲಕೋಟೆ ಇವರ ಸಹಯೋಗದಲ್ಲಿ ಇದೇ ಭಾನುವಾರ ಬೆಳಗ್ಗೆ 10.30 ಗಂಟೆಗೆ
ಕನ್ನಡ ಸಾಹಿತ್ಯ ಪರಿಷತ್ (ಶ್ರೀ ಕೃಷ್ಣರಾಜ ಪರಿಷತ್ತು ಮಂದಿರ, ಪಂಪಮಹಾಕವಿ ರಸ್ತೆ, ಚಾಮರಾಜಪೇಟೆಯಲ್ಲಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ ಎoದು ಹೈಕೋರ್ಟ್ ವಕೀಲರಾದ ಸುನಿಲಕುಮಾರ್ ಗುನ್ನಾಪೂರರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅನಿಲ್ ಗುನ್ನಾಪೂರ ಅವರ ‘ಸರ್ವೇ ನಂಬರ್-97’ ಎಂಬ ಕಥಾಸಂಕಲನವನ್ನು ಹಿರಿಯ ಕವಿ ಹಾಗೂ ಚಿಂತಕರಾದ
ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ಇದರ ಅಧ್ಯಕ್ಷತೆಯನ್ನು ಲೇಖಕ ಮತ್ತು ಹಿರಿಯ ಪತ್ರಕರ್ತರಾದ ಶ್ರೀ ರಘುನಾಥ ಚ.ಹ ಅವರು ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಬಿಬಿಎಂಪಿ ವಲಯ ಆಯುಕ್ತರು ಮತ್ತು ಯಲಹಂಕ ವಲಯದ ಕರೀಗೌಡ (ಐಎಎಸ್) ಹಾಗೂ ಕವಯಿತ್ರಿ, ಅನುವಾದಕಿ ಮತ್ತು ಕತೆಗಾರ್ತಿಯಾದ ಜ.ನಾ.ವೇಜಶ್ರೀ, ನಡೆದಾಡುವ ದೇವರ ಪ್ರತಿಷ್ಠಾನ, ಕನ್ನಡ ಮನಸುಗಳು, ಚಾರಣ ಬಳಗ, ಎಂ.ಇ ಅಸೋಸಿಯೇಷನ್ ನ ಗಣ್ಯರು, ಮತಿತರು ಭಾಗವಹಿಸಲಿದ್ದಾರೆ ಹಾಗೂ ಕಾರ್ಯಕ್ರಮದ ನಿರ್ವಹಣೆಯನ್ನು ಶೃತಿ.ಬಿ.ಆರ್, ಸ್ವಾಗತವನ್ನು ಸುನಿಲಕುಮಾರ್ ಗುನ್ನಾಪೂರ ನೆರವೇರಿಸಲಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…