ರಾಜಕೀಯ

ಪೌರಾಯುಕ್ತರಿಂದ ಎ.ಐ.ಸಿ.ಸಿ.ಟಿ.ಯು ಮುಖಂಡರಿಗೆ ಅಪಮಾನ ಖಂಡನೆ: ವಿಜಯ್ ದೊರೆರಾಜು

Condemns insult to AICCT leaders by Municipal Commissioner: Vijay Doreraju

ಗಂಗಾವತಿ: ದಿನಾಂಕ: ೦೪.೦೧.೨೦೨೫ ರಂದು ನಗರಸಭೆ ಪೌರಾಯುಕ್ತರೊಂದಿಗೆ ಭೇಟಿಯಾಗಿ ಪೌರಕಾರ್ಮಿಕರ ಬಾಕಿ ವೇತನಗಳ ಬಗ್ಗೆ ಚರ್ಚಿಸುವಾಗ, ಪೌರಾಯುಕ್ತರು ನಮ್ಮೊಂದಿಗೆ ಅನುಚಿತವಾಗಿ ವರ್ತಿಸಿ, ಎ.ಐ.ಸಿ.ಸಿ.ಟಿ.ಯು ಮುಖಂಡರಿಗೆ ಬೈಯ್ದಿರಿವುದು ಖಂಡನೀಯವಾಗಿದೆ ಎಂದು ಎ.ಐ.ಸಿ.ಸಿ.ಟಿ.ಯು ಜಿಲ್ಲಾಧ್ಯಕ್ಷ ವಿಜಯ್ ದೊರೆರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೌರಾಯುಕ್ತರು ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸದೇ ನಿರ್ಲಕ್ಷö್ಯ ಮಾಡುತ್ತಿದ್ದನ್ನು ಪ್ರಶ್ನಿಸಿದಾಗ ಪೌರಾಯುಕ್ತರು ನಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ೮-೧೦ ಜನ ಮಹಿಳೆಯರು ಸೇರಿ ಪೌರಕಾರ್ಮಿಕರು ಪೌರಾಯುಕ್ತರನ್ನು ಭೇಟಿಯಾದಾಗ ಅವರು ಪೌರಕಾರ್ಮಿಕರನ್ನು ಹೀನಾಯವಾಗಿ ನಿಂದಿಸಿದ್ದಾರೆ. ಜಿಲ್ಲಾಡಳಿತ ಕೂಡಲೇ ಪೌರಾಯುಕ್ತರು ಕಾರ್ಮಿಕರನ್ನು ನಿಂದಿಸಿರುವುದನ್ನು ಪರಿಶೀಲಿಸಿ, ಅವರ ವಿರುದ್ಧ ಕೂಡಲೇ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ. ಇಲ್ಲದಿದ್ದಲ್ಲಿ ಎ.ಐ.ಸಿ.ಸಿ.ಟಿ.ಯು ಸಂಘಟನೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ತಿಳಿಸಿದ್ದಾರೆ

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

3 hours ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

22 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

22 hours ago