Breaking News

ನಗರಾಭಿವೃದ್ಧಿಪ್ರಾಧಿಕಾರದ ಆಯುಕ್ತರಾಗಿ ಡಾ.ಕೆ.ಆರ್.ದುರುಗೇಶ್ ಅಧಿಕಾರ ಸ್ವೀಕಾರ

Dr. KR Durugesh assumed office as Commissioner of Urban Development Authority

ಜಾಹೀರಾತು


ರಾಯಚೂರು ಜನವರಿ 08 (ಕರ್ನಾಟಕ ವಾರ್ತೆ): ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಡಾ.ಕೆ.ಆರ್.ದುರುಗೇಶ್ ಅವರು ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿರುವ ದುರುಗೇಶ್ ಅವರಿಗೆ ಇದೀಗ
ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹುದ್ದೆಯ ಹೆಚ್ಚುವರಿ ಪ್ರಭಾರ ವಹಿಸಿ ಆದೇಶಿಸಲಾಗಿದೆ.
ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ವೈಯಕ್ತಿಕ ಗಮನಕ್ಕೆ ತರುವಂತಹ ಪತ್ರಗಳು ಹಾಗೂ ಅರೆ ಸರಕಾರಿ ಪತ್ರಗಳನ್ನು ಡಾ.ಕೆ.ಆರ್.ದುರುಗೇಶ್ ಆಯುಕ್ತರು, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರ, ರಾಯಚೂರು ಐ.ಡಿ.ಎಸ್.ಎಮ್.ಟಿ ಬಡವಾಣೆ, ಮಂತ್ರಾಲಯ ರೋಡ್, ರಾಯಚೂರಿಗೆ ಕಳುಹಿಸಿಕೊಡುವಂತೆ ಪ್ರಕಟಣೆ ತಿಳಿಸಿದೆ.

About Mallikarjun

Check Also

ಗುರುಪೌರ್ಣಮಿ ನಿಮಿತ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ: ಟಿ.ರಾಮಕೃಷ್ಣ

Special religious program on the occasion of Gurupournami: T. Ramakrishna ಗಂಗಾವತಿ, ಜು.08: ಹೊರವಲಯದ ಆನೆಗೊಂದಿ ರಸ್ತೆಯಲ್ಲಿರುವ …

Leave a Reply

Your email address will not be published. Required fields are marked *