ಕಲ್ಯಾಣಸಿರಿ ವಿಶೇಷ

ಭೂ-ದಾಖಲೆಗಳ ಡಿಜಿಟಲೀಕರಣಕ್ಕೆ ಚಾಲನೆ : ಮಾನ್ಯ ಶಾಸಕರು ಕೆ ನೇಮಿರಾಜ ನಾಯ್ಕ

Drive for Digitization of Land Records : Honorable MLA K Nemiraja Nayka

ಕೊಟ್ಟೂರು ತಾಲೂಕು ಕಛೇರಿಯಲ್ಲಿ “ಭೂ-ಸುರಕ್ಷಾ ಯೋಜನೆ” ಕಾರ್ಯದ ಉದ್ಘಾಟನೆಯನ್ನು ಸನ್ಮಾನ್ಯ ಶ್ರೀ ನೇಮಿರಾಜ ನಾಯ್ಕ, ಮಾನ್ಯ ಶಾಸಕರು, ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ಇವರು ನೆರವೇರಿಸಿದರು.

ಭೂ-ದಾಖಲೆಗಳ ಡಿಜಿಟಲೀಕರಣಕ್ಕೆ ಚಾಲನೆ
ತಾಲೂಕು ಕಛೇರಿಗಳ ಭೂ-ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲ್ ರೂಪಕ್ಕೆ ಪರಿವರ್ತಿಸಿ ಶಾಶ್ವತವಾಗಿ ಸಂಗ್ರಹಿಸಿ ಸಾರ್ವಜನಿಕರಿಗೆ ಸುಲಭ ಮತ್ತು ಶೀಘ್ರವಾಗಿ ಲಭ್ಯವಾಗುವಂತೆ ಮಾಡಲು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ತಾಲೂಕು ಕಛೇರಿಗಳ ಅಭಿಲೇಖಾಲಯದ ಭೂದಾಖಲೆಗಳ ಡಿಜಿಟಲೀಕರಣಕ್ಕಾಗಿ ಕರ್ನಾಟಕ ಸರ್ಕಾರ ಆರಂಭಿಸಿರುವ ಮಹತ್ವಕಾಂಕ್ಷಿ ಯೋಜನೆಯಾದ “ಭೂ ಸುರಕ್ಷಾ ಯೋಜನೆ” ಪ್ರಾರಂಭಿಸಲಾಗಿದೆ. ಸದರಿ ವ್ಯವಸ್ಥೆಯಿಂದ ಹಳೆಯ ದುಸ್ಥಿತಿಯಲ್ಲಿರುವ ದಾಖಲೆಗಳ ಸಂರಕ್ಷಣೆ ಮಾಡುವುದರ ಜೊತೆಗೆ ದಾಖಲೆಗಳು ಕಳವಾಗಲು, ತಿದ್ದಲು ಅಸಾಧ್ಯವಾಗುವುದರ ಜೊತೆಗೆ ರೆಕಾರ್ಡ್ ರೂಂ ಗಳಿಂದ ಪಡೆದುಕೊಳ್ಳಲು ಇರುವ ತೊಂದರೆಗಳ ನಿವಾರಣೆಯಾಗಲಿದೆ.
ಇಂತಹ “ಭೂ-ಸುರಕ್ಷಾ ಯೋಜನೆ”ಯಾದ ರೆಕಾರ್ಡ್ ರೂಂನ ಭೂದಾಖಲೆಗಳ ಡಿಜಿಟಲೀಕರಣ ಕಾರ್ಯವನ್ನು ಕೊಟ್ಟೂರು ತಾಲೂಕು ಕಛೇರಿಯಲ್ಲಿ ಇಂದು ೦೯.೦೧.೨೦೨೫ರಂದು ಪ್ರಾರಂಭಿಸಲಾಗಿದ್ದು, ಈ ಕಾರ್ಯದ ಉದ್ಘಾಟನೆಯನ್ನು ಸನ್ಮಾನ್ಯ ಶ್ರೀ ನೇಮಿರಾಜ ನಾಯ್ಕ, ಮಾನ್ಯ ಶಾಸಕರು, ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ಇವರು ನೆರವೇರಿಸಿದರು.
ಈ ಸಮಯದಲ್ಲಿ ನಂದಿಪುರ ಪುಣ್ಯ ಕ್ಷೇತ್ರದ ಪೂಜ್ಯರಾದ ಡಾ. ಮಹೇಶ್ವರ ಸ್ವಾಮೀಜಿಯವರು, ಸ್ಥಳೀಯ ಜನಪ್ರತಿನಿಧಿಗಳು, ಮಾಜಿ ಜಿ ಪಂ ಸದಸ್ಯರಾದ ಎಂ.ಎA.ಜೆ.ಹರ್ಷವರ್ಧನ್, ತಹಶೀಲ್ದಾರರಾದ ಅಮರೇಶ್ ಜಿ.ಕೆ. ಗ್ರೇಡ್-೨ ತಹಶೀಲ್ದಾರ್ ಪ್ರತಿಭಾ ಎಂ, ಶಿರಸ್ತೇದಾರ್ ರೇಖಾ. ಉಪತಹಶೀಲ್ದಾರ್ ಅನ್ನದಾನೇಶ ಬಿ ಪತ್ತಾರ್, ಸಿಬ್ಬಂದಿ ದೇವರಾಜ ಅರಸು ಹಾಗೂ ಸಾರ್ವಜನಿಕರು ಹಾಜರಿದ್ದರು. ಸಿ.ಮ.ಗುರುಬಸವರಾಜ ನಿರ್ವಹಿಸಿದರು.

Mallikarjun

Share
Published by
Mallikarjun

Recent Posts

ಕೇಂದ್ರ ಸರ್ಕಾರ ಯೋಜನೆಗಳನ್ನು ಪಡೆಯಲು ರೈತರ ಸೆಂಟ್ರಲ್ ಐಡಿ ಕಡ್ಡಾಯ

ಕೇಂದ್ರ ಸರ್ಕಾರ ಯೋಜನೆಗಳನ್ನು ಪಡೆಯಲು ರೈತರ ಸೆಂಟ್ರಲ್ ಐಡಿ ಕಡ್ಡಾಯ Farmers' Central ID mandatory to avail central…

5 minutes ago

2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

2022 State Level Book Selection List Published: Objection Invited 2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ…

26 minutes ago

ವಿಶ್ವ ಶ್ರವಣ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ

Awareness program as part of World Hearing Day ವಿಶ್ವ ಶ್ರವಣ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ ಕೊಪ್ಪಳ…

30 minutes ago