Breaking News

ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆ:68.30 ಕೋಟಿ ರೂ.ಮೊತ್ತದ ಬಂಡವಾಳ ಹೂಡಿಕೆಯ ಹೊಸ ಯೋಜನೆಗಳ ಮಂಜೂರಾತಿಗೆ ಅನುಮೋದನೆ

District level single window committee meeting: Approval for sanction of new projects worth Rs. 68.30 crore

ಜಾಹೀರಾತು
WhatsApp Image 2025 01 09 At 6.32.26 PM

ರಾಯಚೂರು ಜ.09 (ಕರ್ನಾಟಕ ವಾರ್ತೆ): ಜಿಲ್ಲಾಮಟ್ಟದ ಏಕಗವಾಂಕ್ಷಿ ಸಮಿತಿ ಸಭೆಯು ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನವರಿ 9ರಂದ ನಡೆಯಿತು.
100 ಲಕ್ಷ ರೂ ವೆಚ್ಚದಲ್ಲಿ ಕ್ಯಾಟಲ್ ಫೀಡ್ ಹೆಚ್ಚುವರಿಯಾಗಿ ಕ್ಯಾಟಲ್ ಫೀಡ್ ಹಾಗೂ ಆಯಿಲ್ ಮಿಲ್ಲಿಂಗ್ ಚಟುವಟಿಕೆ, 55 ಲಕ್ಷ ರೂ ವೆಚ್ಚದಲ್ಲಿ ವೇರ್‌ಹೌಸ್ ಹೆಚ್ಚುವರಿಯಾಗಿ ಫ್ಲೆಯಾಸ್ ಬ್ರಿಕ್ಸ್ ತಯಾರಿಕೆ ಚಟುವಟಿಕೆ, 540 ಲಕ್ಷ ರೂ. ವೆಚ್ಚದಲ್ಲಿ ಕಾಟನ್ ಜಿನ್ನಿಂಗ್ ಅಂಡ್ ಸೀಡ್ಸ್ ಪ್ರೊಸಸ್ಸಿಂಗ್ ಚಟುವಟಿಕೆ, 1446 ಲಕ್ಷ ರೂ ವೆಚ್ಚದಲ್ಲಿ ರೈಸ್ ಮಿಲ್ಲಿಂಗ್ ಚಟುವಟಿಕೆ, 1481 ಲಕ್ಷ ರೂ. ವೆಚ್ಚದಲ್ಲಿ ಆಯಿಲ್ ರಿಫೈನರಿ ಚಟುವಟಿಕೆ, 1050 ಲಕ್ಷ ರೂ ವೆಚ್ಚದಲ್ಲಿ ರೈಸ್ ಮಿಲ್ಲಿಂಗ್ ಚಟುವಟಿಕೆ, 303 ಲಕ್ಷ ರೂ ವೆಚ್ಚದಲ್ಲಿ ವೇಸ್ಟ್ ಆಯಿಲ್ ರಿಸೈಕ್ಲಿಂಗ್ ಚಟುವಟಿಕೆ, 400 ಲಕ್ಷ ರೂ ವೆಚ್ಚದಲ್ಲಿ ಗ್ರೌನ್ ನೆಟ್ ಡಿಕಾರ್ಟಿಕೇಟಿಂಗ್ ಚಟುವಟಿಕೆ, 1455 ಲಕ್ಷ ರೂ ವೆಚ್ಚದಲ್ಲಿ ರೈಸ್ ಮಿಲ್ಲಿಂಗ್ ಚಟುವಟಿಕೆ ಸೇರಿದಂತೆ ಹೊಸ ಯೋಜನೆಯ ಮಂಜೂರಾತಿಯ ಬಗ್ಗೆ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಆಗಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಸಭೆಗೆ ವಿವರಿಸಿದರು. ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಒಟ್ಟು 68.30 ಕೋಟಿ ರೂ.ಗಳ ಬಂಡವಾಳ ಹೂಡಿಕೆಯ ಹೊಸ ಯೋಜನೆಗಳ ಮಂಜೂರಾತಿಗೆ ಸಭೆಯಲ್ಲಿ ಅನುಮೋದಿಸಲಾಯಿತು.
ಸಭೆಯಲ್ಲಿ ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶಕ್ಕಾಗಿ ಗುರುತಿಸಿರುವ ಜಮೀನು ಸ್ವಾಧೀನಕ್ಕಾಗಿ ಶೀಫಾರಸ್ಸು ಮಾಡುವ ಬಗ್ಗೆ, ಕೆಐಎಡಿಬಿಯಿಂದ ನಿರ್ಮಿಸಲಾದ ವಸತಿ ಗೃಹ ಮತ್ತು ನಿವೇಶನಗಳ ಹಂಚಿಕೆ, ದೇವದುರ್ಗ ವಿಶ್ವ ಮಳಿಗೆಗಳ ಹಂಚಿಕೆ, ರಾಯಚೂರು ಇಂಡಸ್ಟ್ರಿಯಲ್ ಏರಿಯಾ ಮತ್ತು ಗ್ರೋಥ್ ಸೆಂಟರನಲ್ಲಿರುವ ಘಟಕಗಳಿಗೆ ನೀರು ಸರಬರಾಜು ಮಾಡುವ ಬಗ್ಗೆ, ಕೆಎಸ್‌ಎಸ್‌ಐಡಿಸಿ ನಿವೇಶನಗಳ ಹಂಚಿಕೆ, ಮೆಗಾ ಪಾರ್ಕ್ ಸ್ಥಾಪನೆ, ರೈಸ್ ಕ್ಲಸ್ಟರ್ ಸ್ಥಾಪನೆಯ ಸಲುವಾಗಿ ಸುಮಾರು 10 ಎಕರೆ ಜಮೀನು ಒದಗಿಸುವ ಕುರಿತು, ಮೇ:ವಿಕಾಸ್ ಇಂಡಸ್ಟ್ರಿಸ್
ಕೈಗಾರಿಕಾ ಪ್ರದೇಶ ಮಾನವಿ ಇವರಿಗೆ ರೆಡಿಪ್ಲಾಸ್ಟ್ ತಯಾರಿಕೆಯ ಸಲುವಾಗಿ ಸರ್ಕಾರದ ನಿಯಮಗಳ ಪ್ರಕಾರ ಮರಳು ಹಂಚಿಕೆಯ ಕುರಿತು, ಯೋಜನಾ ಮಂಜೂರಾತಿ ಮತ್ತು ಚಟುವಟಿಕೆಯ ಬದಲಾವಣೆಯ ಬಗ್ಗೆ, ರಾಯಚೂರು ಕಾಟನ್ ಮಿಲ್ರ‍್ಸ ಅಸೋಸಿಯನ್ ರಾಯಚೂರು ಅವರ ಪತ್ರ, ಮೇ:ರಾಜೇಂದ್ರ ಇಂಡಸ್ಟ್ರಿಸ್ ಪ್ಲಾಟ್ ನಂ.6 ಯರಮರಸ್ ಇಂಡಸ್ಟಿçಯಲ್ ಏರಿಯಾ ರಾಯಚೂರು ಅವರ ಪತ್ರ, ಕೆಐಎಡಿಬಿಯಲ್ಲಿ ಖಾಲಿ ಇರುವ ನಿವೇಶನದ ಹಂಚಿಕೆ ಸೇರಿದಂತೆ ನಾನಾ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ದೇವದುರ್ಗ ಕೈಗಾರಿಕಾ ಪ್ರದೇಶದ ಬಗ್ಗೆ ಜಮೀನಿನ ಚಕ್‌ಬಂದಿ ಹಾಗೂ ಹಂಚಿಕೆಗೆ ಲಭ್ಯವಾಗುವ ಜಮೀನು ಮತ್ತು ರಾಯಚೂರು ಗ್ರೋಥ್ ಸೆಂಟರನಲ್ಲಿರುವ ಜಮೀನು ಒತ್ತುವರಿಯ ಬಗ್ಗೆ ಸಹ ಸಭೆಯಲ್ಲಿ ಚರ್ಚಿಸಲಾಯಿತು. ಹಂತಹಂತವಾಗಿ ಸರ್ವೆ ಕಾರ್ಯಕೈಗೊಂಡು ಯಾವ ಕಡೆಗಳಲ್ಲಿ ಜಮೀನು ಒತ್ತುವರಿಯಾಗಿದೆ ಎಂಬುದನ್ನು ಸರಿಯಾಗಿ ಗುರುತಿಸಬೇಕು. ಕೆಐಎಡಿಬಿಯಿಂದ ನಿರ್ಮಿಸಲಾದ ನಿವೇಶನಗಳ ಹಂಚಿಕೆ ಪ್ರಕ್ರಿಯೆಗಾಗಿ ಸ್ಕ್ರಿನಿಂಗ್ ಕಮೀಟಿ ರಚಿಸಿ ಅಧಿಸೂಚನೆ ಹೊರಡಿಸಿ ಕೆಐಎಡಿಬಿಯಿಂದ ನಿರ್ಮಿಸಲಾದ ನಿವೇಶನಗಳ ಹಂಚಿಕೆ ಪ್ರಕ್ರಿಯೆಯನ್ನು ತುರ್ತಾಗಿ ನಡೆಸಲು ಜಿಲ್ಲಾಧಿಕಾರಿಗಳು ಇದೆ ವೇಳೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪೂರೆ, ರಾಯಚೂರು ಜಿಲ್ಲಾ ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷರು, ರಾಯಚೂರು ಜಿಲ್ಲಾ ಕಾಟನ್ ಜಿನ್ನರ್ಸ್ ಅಸೋಸಿಯೇಶನ್ ಅಧ್ಯಕ್ಷರು, ರೈಸ್ ಮಿಲ್ಲರ್ಸ ಓನರ್ಸ್ ಅಸೋಶಿಯೇಶನ್ ಅಧ್ಯಕ್ಷರು, ಕೆಐಎಡಿಬಿಯ ಬಳ್ಳಾರಿ ಮತ್ತು ರಾಯಚೂರು ಕಾರ್ಯನಿರ್ವಾಹಕ ಅಭಿಯಂತರರು, ಕೆಎಸ್‌ಎಸ್‌ಐಡಿಸಿಯ ಸಹಾಯಕ ಪ್ರಧಾನ ವ್ಯವಸ್ಥಾಪಕರು, ರಾಯಚೂರು ಜಿಲ್ಲಾ ಕೆಎಸ್‌ಪಿಸಿಬಿಯ ಪರಿಸರ ಅಭಿಯಂತರರು, ರಾಯಚೂರು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರು, ಕೆಎಸ್‌ಎಫ್‌ಸಿಯ ಸಹಾಯಕ ಪ್ರಧಾನ ವ್ಯವಸ್ಥಾಪಕರು, ಕೃಷಿ ಇಲಾಖೆಯ ಜಂಟಿ ನಿರ್ದೇಶಕರು, ಕಾರ್ಖಾನೆಯ ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಜಿಲ್ಲಾ ಅಧಿಕಾರಿಗಳು, ಕೆಯುಡಬ್ಲೂö್ಯಎಸ್‌ಎಸ್‌ಬಿಯ ಕಾರ್ಯನಿರ್ವಾಹಕ ಅಭಿಯಂತರರು, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಸೇರಿದಂತೆ ಇತರರು ಇದ್ದರು

About Mallikarjun

Check Also

screenshot 2025 10 09 18 49 33 65 e307a3f9df9f380ebaf106e1dc980bb6.jpg

2005ರಪೂರ್ವಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು : ಮುಖ್ಯಮಂತ್ರಿ ಸಿದ್ದರಾಮಯ್ಯ 

Those who made a living in forest land before 2005 have the right to land: …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.