ಕಲ್ಯಾಣಸಿರಿ ವಿಶೇಷ

ಗಂಗಾವತಿ-ದರೋಜಿ-ಬಾಗಲಕೋಟ ರೇಲ್ವೆ ಲೈನ್ ನಿರ್ಮಾಣಕ್ಕೆ ಮನವಿ ಸಲ್ಲಿಕೆ.

Petition submitted for construction of Gangavathi-Daroji-Bagalkot railway line

ಗಂಗಾವತಿ:ದರೋಜಿ-ಗಂಗಾವತಿ ಮತ್ತು ಗಂಗಾವತಿ ಬಾಗಲಕೋಟ ಬ್ರಾಡಗೇಜ್ ರೇಲ್ವೆ ಲೈನ್ ಕಾಮಗಾರಿ ಆರಂಭಿಸಲು ಒತ್ತಾಯಿಸಿ ಕೊಪ್ಪಳ ಜಿಲ್ಲಾ ವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಸಂಸ್ಥೆಯಿಂದ ರೇಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣನವರಿಗೆ ಕೊಪ್ಪಳದಲ್ಲಿ ಮಂಗಳವಾರ ಮನವಿ ಸಲ್ಲಿಸಲಾಯಿತು.

ಕೊಪ್ಪಳದ ಕುಷ್ಟಗಿ ರಸ್ತೆಯ ರೇಲ್ವೆ ಮೇಲ್ಸೇತುವೆಯನ್ನು ಮಂಗಳವಾರ ಉದ್ಘಾಟಿಸಲು ಆಗಮಿಸಿದ್ದ ಸಚಿವ ವಿ.ಸೋಮಣ್ಣ ,ಮನವಿಗೆ ಸ್ಪಂದಿಸಿ ದರೋಜಿ-ಗಂಗಾವತಿ ಮತ್ತು ಗಂಗಾವತಿ-ಬಾಗಲಕೋಟ್ ಈ ಎರಡು ಬ್ರಾಡಗೇಜ್ ಲೈನ್ ನಿರ್ಮಾಣಕ್ಕಾಗಿ ಡಿ.ಪಿ.ಆರ್. ತಯಾರಿಸುವಲ್ಲಿ ಇಲಾಖೆ ನಿರತವಾಗಿದ್ದು ,ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ, ಮಾಜಿ ಸಂಸದ ಶಿವರಾಮಗೌಡ,ಕುಷ್ಟಗಿ ಶಾಸಕ ದೊಡ್ಡನಗೌಡ,ಮಾಜಿ ಶಾಸಕ ಶರಣಪ್ಪ ಕ್ಯಾವಟರ್,ಗಂಗಾವತಿ ನಗರಸಭಾ ಸದಸ್ಯ ಮನೋಹರ ಸ್ವಾಮಿ ಮುದೇನೂರ ಹಿರೇಮಠ, ವಾಣಿಜ್ಯೊಧ್ಯಮಿ ಉಗಮರಾಜ,ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ,ಶಾಸಕ ರಾಘವೇಂದ್ರ ಹಿಟ್ಣಾಳ,ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ, ನೈರುತ್ಯ ರೇಲ್ವೆ ಜನರಲ್ ಮ್ಯಾನೇಜರ್ ಮತ್ತು ರೇಲ್ವೆ ಇಲಾಖೆಯ ಬಹುತೇಕ ಅಧಿಕಾರಿಗಳು ಸೇರಿದಂತೆ ಹಲವರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.

ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ ,ಧಡೆಸಗೂರು ಬಸವರಾಜ,ಮಾಜಿ ಸಚಿವ ಹಾಲಪ್ಪ ಆಚಾರ್,ಕಂಪ್ಲಿ ರೇಲ್ವೆ ಹೋರಾಟ ಸಮಿತಿಯ ಹೇಮಯ್ಯ ಸ್ವಾಮಿ, ಕಾರ್ಯದರ್ಶಿ ಕಾಳಿಂಗ ವರ್ಧನ,ಇಂಗಳಗಿ ನಾರಾಯಣಪ್ಪ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

19 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

19 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

19 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

19 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

19 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

19 hours ago