ಕಲ್ಯಾಣಸಿರಿ ವಿಶೇಷ

ಪೋಲಿಸರಿಗೆ ಅಥಿತಿಗಳಾದ ಆನೆ ದಂತ ಸಾಗಣೆದಾರರು.

Elephant tusk transporters who are guests of the police.


ವರದಿ : ಬಂಗಾರಪ್ಪ .ಸಿ.
ಹನೂರು : ಕ್ಷೇತ್ತ ವ್ಯಾಪ್ತಿಯಲ್ಲಿಆನೆ ದಂತ ಸಾಗಾಣಿಕೆಮಾಡುತ್ತಿದ್ದ ಇಬ್ಬರನ್ನು ರಾಮಾಪುರ ಪೊಲೀಸರ ಬಂದಿಸಿರುವ ಘಟನೆ ನಡೆದಿದೆ,
ತಮಿಳುನಾಡಿನ ಪೆರುಮಾಳ ಎಂಬುವವರ ಮಗ ಶಕ್ತಿವೇಲು(45)ಹಾಗೂ ಹನೂರಿನ ಶಂಕರ ನಾರಯಣ್ ರವರ ಮಗ ನಾಗೇಂದ್ರಬಾಬು (63)ಎಂಬುವವರಾಗಿದ್ದಾರೆ.
ಮಹದೇಶ್ವರ ಬೆಟ್ಟ ಕೌದಳ್ಳಿ ಮಾರ್ಗದ ರಸ್ತೆಯಲ್ಲಿ
ಆನೆ ದಂತವನ್ನು ತೆಗೆದುಕೊಂಡು ಮಾರಾಟ ಮಾಡಲು ಬೈಕ್ ನಲ್ಲಿ ಸಾಗುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ರಾಮಾಪುರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಎಸೈ ಲೋಕೇಶ್, ಹೆಡ್ ಕಾನ್ಸ್‌ಟೇಬಲ್ ಗಿರೀಶ್, ಪೇದೆಗಳಾದ ಮಹೇಂದ್ರ ಲಿಯಾಖತ್ ಖಾನ್, ಪರಶುರಾಮ್, ಮಕಂದರ್ ಇವರುಗಳ ತಂಡ ಕೌದಳ್ಳಿ ಮಹದೇಶ್ವರಬೆಟ್ಟ ಮುಖ್ಯರಸ್ತೆಯಲ್ಲಿ ಬೈಕನ್ನು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಆನೆ ದಂತವನ ಚೀಲದಲ್ಲಿಟ್ಟಿರುವುದು ಪತ್ತೆಯಾಗಿದೆ.
ಆರೋಪಿಗಳನ್ನ ವಶಕ್ಕೆ ಪಡೆದು ತನಿಖೆ ನಡೆಸಿದಾಗ ಪಾಲಾರ್ ಅರಣ್ಯ ಪ್ರದೇಶದಲ್ಲಿ ಆನೆದಂತ ಸಿಕ್ಕಿದ್ದು, ಇದನ್ನು
ಹನೂರು ಕಡೆ ಮಾರಾಟ ಮಾಡಲು ಹೋಗುತ್ತಿದ್ದೇವೆಂದು ಆರೋಪಿಗಳು ತಿಳಿಸಿದ್ದಾರೆ ಎನ್ನಲಾಗಿದೆ
ನಂತರ ರಾಮಾಪುರ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ..

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

10 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

10 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

10 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

10 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

11 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

11 hours ago