It is the responsibility of all of us to protect the environment: Padma Shri Jadhav Payang
ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಪದ್ಮಶ್ರೀ ವಿಜೇತ ಜಾದವ್ ಪಾಯಂಗ್ ಹೇಳಿದರು. ಇಂದು ದಿನಾಂಕ ೧೭.೦೧.೨೫ರಂದು ಗವಿಸಿದ್ದೇಶ್ವರ ಪದವಿ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಅವರು ವಿದ್ಯಾರ್ಥಿಗಳು ಕೇವಲ ನಾಲ್ಕು ಗೋಡೆಯ ಒಳಗಡೆ ಕೂತು ಶಿಕ್ಷಣ ಕಲಿಯಬಾರದು, ಪ್ರಾಯೋಗಿಕವಾಗಿ ಕಲಿಯಬೇಕು ಎಂದು ಕರೆ ನೀಡಿದರು ಇದರ ಜೊತೆಗೆ ವಿದ್ಯಾರ್ಥಿಗಳು ಹೆಚ್ಚಾಗಿ ಗಿಡವನ್ನು ನೆಟ್ಟುವುದರ ಬಗ್ಗೆ ಗಮನಹರಿಸಬೇಕೆಂದು ಕರೆ ನೀಡಿದರು. ಕಾಲೇಜಿನ ಪ್ರಚಾರದ ಡಾ. ಚನ್ನಬಸವ ಎ. ಮಾತನಾಡಿ ವಿದ್ಯಾರ್ಥಿಗಳು ಭವ್ಯ ಭಾರತದ ನಿರ್ಮಾಣ ಮಾಡುವ ಕೆಲಸದಲ್ಲಿ ತೊಡಗಬೇಕು ಎಂದು ಹೇಳಿದರು.
ನಂತರ ಮಹಾವಿದ್ಯಾಲಯದ ಆವರಣದಲ್ಲಿ ಜಾದವ್ ಪಾಯಂಗ್ ಅವರು ಸಸಿ ನಟ್ಟು ನಿರುಣಿಸಿದರು. ಈ ಕಾರ್ಯಕ್ರಮದಲ್ಲಿ ಏನ್.ಸಿ.ಸಿ ಅಧಿಕಾರಿ ದಯಾನಂದ ಸಾಳವಂಕಿ, ಎನ್.ಎಸ್.ಎಸ್ ಅಧಿಕಾರಿಗಳಾದ ಡಾ. ಜಾಲಿಹಾಳ ಶರಣಪ್ಪ ಮತ್ತು ಶರಣಪ್ಪ ಚೌಹಾಣ್, ಐಕ್ಯೂಎಸಿ ಸಂಯೋಜಕರಾದ ಡಾ. ಅರುಣ್ ಕುಮಾರ್ ಮತ್ತು ಕಾಲೇಜಿನ ಪ್ರಾಧ್ಯಾಪಕರಾದ ವೆಂಕಟೇಶ್ ಬೋವಿ, ಮಂಜುನಾಥ್ ಹಿರೇಮಠ್ ಅಮರೇಶ್ ತಳುವಗೇರಿ, ಕನಕರಾಯ ಗೊಂಡಬಾಳ್, ಮಂಜುನಾಥ ಹಿರೇಮಠ ಹಾಜರಿದ್ದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಎನ್.ಎಸ್.ಎಸ್ ಎನ್ಸಿಸಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…