Foundation-Laying- Inauguration of various development works

ಯಲಬುರ್ಗಾ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಒತ್ತು : ಶಾಸಕ ರಾಯರೆಡ್ಡಿ ಹೇಳಿಕೆ
ಯಲಬುರ್ಗಾ ಪಟ್ಟಣದ ನೂತನ ಸರ್ಕಾರಿ ಉರ್ದು ಪ್ರೌಢ ಕಟ್ಟಡ ಹಾಗೂ ಪಶುಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ನಿರ್ಮಾಣಗೊಂಡಿರುವ ವಸತಿ ನಿಲಯ ಕಟ್ಟಡವನ್ನು ಸಿಎಂ ಆರ್ಥಿಕ ಸಲಹೆಗಾರ ಹಾಗೂ ಶಾಸಕರಾದ ಶ್ರೀ ಬಸವರಾಜ ರಾಯರೆಡ್ಡಿ ಅವರು ಉದ್ಘಾಟಿಸಿದರು.
ಬಳಕ ಶಾಸಕರು ಮಾತನಾಡಿ, ನನ್ನ ಅವಧಿಯಲ್ಲಿ ಯಲಬುರ್ಗಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೆಚ್ಚು ಆದ್ಯತೆ ಕೊಟ್ಟಿದ್ದು ಅಭಿವೃದ್ಧಿ ಕೆಲಸಕ್ಕೆ ಎಲ್ಲರೂ ಸಹಕಾರ ನೀಡಬೇಕು, ಶಿಕ್ಷಣ ಕ್ಷೇತ್ರಕ್ಕೆ ಬಹಳ ಮಹತ್ವದ ನೀಡಿದ್ದು ಕ್ಷೇತ್ರದ ಪ್ರತಿಯೊಬ್ಬ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವ ಉದ್ದೇಶದಿಂದ ಶಿಕ್ಷಣ ಹೆಚ್ಚು ಒತ್ತು ನೀಡಲಾಗಿದೆ ಎಂದು ಶಾಸಕರಾದ ಬಸವರಾಜ ರಾಯರೆಡ್ಡಿಯವರು ಹೇಳಿದರು.
ಈ ವೇಳೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಗಣ್ಯರು, ಪಕ್ಷದ ಮುಖಂಡರು ಇದ್ದರು.