Breaking News
ಗಂಗಾವತಿ ತಾಲೂಕ ಆರಾಳ ಗ್ರಾಮದಲ್ಲಿ ಎರಡು ಪ್ರತ್ಯೇಕ ಕಳ್ಳತನ,,ಹಣ ಮತ್ತು ಒಡವೆ ದೋಚಿದ ಕಳ್ಳರು

Two separate thefts in Arala village of Gangavati taluk. Thieves who stole money and goods

ವರದಿ : ಪಂಚಯ್ಯ ಹಿರೇಮಠ.
ಗಂಗಾವತಿ : ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿದ ಕಳ್ಳರು ಮನೆ ಬೀಗಿ ಮುರಿದು ಅಲಮಾರದಲ್ಲಿದ್ದ 2.15 ಲಕ್ಷ ರೂಪಾಯಿ ಮತ್ತು 3.45 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ತಾಲೂಕಿನ ಆರಾಳ ಗ್ರಾಮದಲ್ಲಿ ಬುಧವಾರ ನಡೆದಿದೆ.

ಗ್ರಾಮದ ವೀರೇಶ ಅಡಿವೆಪ್ಪ ಪಟ್ಟಣ ಶೆಟ್ಟಿ ಎನ್ನುವರ ಮನೆಯಲ್ಲಿ ಕಳ್ಳತನ ನಡೆದಿದೆ.

ಉಡಮಕಲ್ ರಸ್ತೆಯ ಮಾರ್ಗದಲ್ಲಿರುವ ವೀರೇಶ ಮನೆಗೆ ಬೀಗ ಹಾಕಿ ಕೆಲಸಕ್ಕೆ ಹೋಗಿದ್ದಾರೆ. ಪತ್ನಿ ಮತ್ತು ಮಗಳು ಹೊಲದ ಕೆಲಸಕ್ಕೆ ಹೋಗಿದ್ದ ಸಂದರ್ಭ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಮೆನೆಯ ಬೀಗ ಮುರಿದು ಮನೆಯ ಅಲಮಾರದಲ್ಲಿದ್ದ ಹಣ, ಚಿನ್ನದ ಆಭರಣವನ್ನು ದೋಚಿ ಪರಾರಿಯಾಗಿದ್ದಾರೆ. ವೀರೇಶ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಣೆಗೆ ವಿಭೂತಿ ಹಚ್ಚಿ 12 ಸಾವಿರ ಅಪಹರಣ,,

ಆರಾಳ ಗ್ರಾಮದಲ್ಲಿ ಮತ್ತೋಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವಿ ಬಟ್ಟೆ ಧರಿಸಿ ಬಂದ ಪೂಜಾರಿಗಳು ವ್ಯಕ್ತಿಯ ಹಣೆಗೆ ವಿಭೂತಿ ಹಚ್ಚಿ 12 ಸಾವಿರ ರೂಪಾಯಿ ಅಪಹರಿಸಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

ಗ್ರಾಮದ ಮನೆಯೊಂದಕ್ಕೆ ಹೋಗಿದ್ದ ನಾಲ್ವರು ಕಾವಿಧಾರಿಗಳು ಕಾಣಿಕೆ ಕೊಡುವಂತೆ ಕೋರಿದ್ದಾರೆ. ಆಗ ಮನೆಯಲ್ಲಿದ್ದ ವ್ಯಕ್ತಿ 20 ರೂಪಾಯಿ ನೀಡಲು ಮುಂದಾಗಿದ್ದಾರೆ. ಅದನ್ನು ನಿರಾಕರಿಸಿದ ಕಾವಿಧಾರಿಗಳು ದೇವಸ್ಥಾನಕ್ಕೆ 2 ಚೀಲ ಸಿಮೇಂಟ್ ಕೇಳಿದ್ದಾರೆ. ಅಲ್ಲದೆ ಕುಡಿಯಲು ನೀರು ಕೇಳಿದ್ದಾರೆ. ನೀರು ಕೊಟ್ಟು 100ರೂಪಾಯಿ ಕಾಣಿಕೆ ನೀಡಿ ನಮಸ್ಕರಿಸುತ್ತಿದ್ದಾಗ ಹಣೆಗೆ ವಿಭೂತಿ ಹಚ್ಚಿದ್ದಾರೆ. ಕೆಲವೇ ಕ್ಷಣದಲ್ಲಿ ವ್ಯಕ್ತಿ 12 ಸಾವಿರ ನೀಡಿದ್ದಾರೆ.

ಆ ಸಂದರ್ಭ ವಿಭೂತಿ ಹಚ್ಚಿಸಿಕೊಂಡಿದ್ದ ವ್ಯಕ್ತಿಗೆ ಪ್ರಜ್ಞೆ ಇಲ್ಲದಂತಾಗಿದೆ. ಎಚ್ಚರವಾಗಿ ನೋಡಿದಾಗ ಕಾವಿಧಾರಿಗಳು ಇರಲಿಲ್ಲ. ಮನೆಯಲ್ಲಿದ್ದ 12 ಸಾವಿರ ಕೊಟ್ಟಿದ್ದು ನೆನಪಿಲ್ಲ ಎಂದು ಹೇಳುತ್ತಿದ್ದಾರೆ. ಈ ಕುರಿತು ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ನಾಯಿ ಹಾವಳಿಗೆ ವಯೋ ವೃದ್ಧರು ರಸ್ತೆಗಳಲ್ಲಿಓಡಾಡುವಾಗ ಜೀವ ಕೈಯಲ್ಲಿ ಹಿಡಿದು ಓಡಾಡುವಂತಹ ಸ್ಥಿತಿ ನಿರ್ಮಾಣ”

ಪಟ್ಟಣದಲ್ಲಿ ಎಲ್ಲೆಡೆ ಸ್ವಾನಗಳ. ಹಾವಳಿ ,ಅಧಿಕಾರಿಗಳು ಜಾಣ ಕುರುಡು ಪ್ರದರ್ಶನ

ಕೊಟ್ಟೂರು ಪಟ್ಟಣದ ವಿಚಾರಕ್ಕೆ ಬಂದರೆ ಇತ್ತೀಚಿನ ದಿನಗಳಲ್ಲಿ ಎಲ್ಲೆಡೆ ಸ್ನಾನಗಳ ಹಾವಳಿ ಹೆಚ್ಚಾಗುತ್ತಿದೆ ಆದರೆ ಪಟ್ಟಣ ಪಂಚಾಯಿತಿ ಯಿಂದ ಜಾಣ ಕುರುಡು ಪ್ರದರ್ಶನ ಮುಂದುವರಿದಿದೆ.

ಮುಖ್ಯವಾಗಿ ಪುಟ್ಟರಾಜು ಬಡಾವಣೆ, ಲಾಲ್ ಬಹದ್ದೂರ್ ಶಾಸ್ತ್ರಿ ಬಡಾವಣೆ, ಬಸವೇಶ್ವರ ಬಡಾವಣೆ, ಮುದುಕನ ಕಟ್ಟೆ, ಕೆಳಗೇರಿ ರಾಜೀವ ನಗರ ನಾಯಿ ಗಳ ಹಾವಳಿ ಬಹಳವಾಗಿದೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.

ಪಟ್ಟಣದ ಎಲ್ಲಾ ಬಡಾವಣೆಗಳಲ್ಲಿ ಎಲ್ಲೆಂದರಲ್ಲಿ ನಾಯಿಗಳು ಹಿಂಡು ಹಿಂಡಾಗಿ ಓಡಾಡುತ್ತಿದ್ದು ಸಣ್ಣ ಮಕ್ಕಳು ರಸ್ತೆಯಲ್ಲಿ ಆಟ ಆಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಿರಿಯ ನಾಗರಿಕರು ವಯೋ ವೃದ್ಧರು ರಸ್ತೆಗಳಲ್ಲಿ ಓಡಾಡುವಾಗ ಜೀವವನ್ನು ಕೈಯಲ್ಲಿ ಹಿಡಿದು ಓಡಾಡುವಂತಹ ಸ್ಥಿತಿ ಬಂದೊದಗಿದೆ.

ನಾಯಿಗಳ ಹಾವಳಿಯ ಬಗ್ಗೆ ಸಾರ್ವಜನಿಕರು ಹಲವಾರು ಸಂಘ ಸಂಸ್ಥೆಗಳು ಪಟ್ಟಣ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದಿದ್ದರು ಯಾವುದೇ ಪ್ರಯೋಜನವಾಗಿಲ್ಲ.

ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಾದ ವಾಟ್ಸಪ್‌ಗಳ ಮೂಲಕ ಅಲ್ಲಲ್ಲಿ ನಾಯಿಗಳು ಆಟವಾಡುತ್ತಿರುವ ಮಕ್ಕಳ ಮೇಲೆ. ಬೆಳಗ್ಗೆ ವಾಯು ವಿಹಾರಕ್ಕೆಂದು ತೆರಳುವ ಮಹಿಳೆಯರು, ಹಿರಿಯ ನಾಗರಿಕರಿಗೆ ತೊಂದರೆ ಕೊಡುತ್ತಾ ಹಲ್ಲೆ ಆಗಿರುವ ಘಟನೆಗಳು ಈ ಹಿಂದೆ ನಡೆದಿವೆ ಮುಂದಿನ ದಿನಗಳಲ್ಲಿ ನಡೆದಂತೆ ಕ್ರಮವಹಿಸುವಂತೆ. ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಸಾರ್ವಜನಿಕರಾದ ಹಿರಿಯ ನಾಗರಿಕರ ಮಹಾಂತೇಪ್ಪ, ಮಂಜುನಾಥ್ ,  ಮಂಡಕ್ಕಿ ಪ್ರಕಾಶ್,ಶಫೀ ಪತ್ರಿಕೆಗೆ ತಿಳಿಯಪಡಿಸಿದ್ದಾರೆ.

ಕೊಟ್ -1
ಕೊಟ್ಟೂರು ಪಟ್ಟಣದ್ಯಂತ ಒಂದು ಅಂದಾಜನ ಪ್ರಕಾರ  500 ರಿಂದ 600ಕ್ಕೂ ಹೆಚ್ಚು ನಾಯಿಗಳಿದ್ದು ಹಲವಾರು ಬಡಾವಣೆಗಳಲ್ಲಿ ಇವುಗಳ ತೊಂದರೆ ಬಹಳ ಮಿತಿಮೀರಿ ಹೋಗಿದೆ ಈ ಹಿಂದೆ ಹಲವಾರು ಮಕ್ಕಳಿಗೆ. ಯುವಕರಿಗೆ ವೃದ್ಧರಿಗೆ ಕಚ್ಚಿ ಬಹಳಷ್ಟು ತೊಂದರೆ ಕೊಡುತ್ತಿವೆ ಕೆಲವರು ಪಟ್ಟಣ ಪಂಚಾಯಿತಿ ಸದಸ್ಯರ ಬಳಿ ದೂರುತ್ತಾರೆ.ಕೆಲವರು ದೂರಿದರೂ ಪ್ರಯೋಜನ ವಿಲ್ಲ ಎಂದು ತಮ್ಮ ಪಾಡಿಗೆ ತಾವು ಚಿಕಿತ್ಸೆಯನ್ನ ಮಾಡಿಸಿಕೊಳ್ಳುತ್ತಾರೆ.

ಪಟ್ಟಣ ಪಂಚಾಯಿತಿ ಸದಸ್ಯರುಗಳು ತಮ್ಮ ವಾರ್ಡ್ಗಳಲ್ಲಿ ಓಡಾಡುವುದೇ ತೊಂದರೆಯಾಗಿದೆ ಹಲವಾರು ರೀತಿಯಲ್ಲಿ ಬೈಗುಳ ತಿನ್ನಬೇಕಾಗಿದೆ .ಪಟ್ಟಣ ಪಂಚಾಯಿತಿ  ದೂರಿದರೆ ಅಧಿಕಾರಿಗಳಿಂದ ಯಾವುದೇ ಕ್ರಮ ಇಲ್ಲ ಇದರಿಂದ ಸಾರ್ವಜನಿಕರು ಹಾಗೂ ಋಷಿ ಹೋಗಿದ್ದೇವೆ ಕೂಡಲೇ ಇದಕ್ಕೊಂದು ಪರಿಹಾರ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.ಎಂದು ಹೆಸರು ಇಚ್ಛೆಸದ ಪಟ್ಟಣ ಪಂಚಾಯಿತಿ ಸದಸ್ಯರು

ಕೊಟ್ -2
ಪಟ್ಟಣದ ಎಲ್ಲಾ ಬಡಾವಣೆಗಳಲ್ಲಿ ಎಲ್ಲೆಂದರಲ್ಲಿ ನಾಯಿಗಳು ಹಾವಳಿ ಹೆಚ್ಚಾಗಿದ್ದು .ಸಾರ್ವಜನಿಕರಿಗೆ ತೊಂದರೆ ಆಗದಂತೆ ಈ ವಿಷಯದ ಬಗ್ಗೆ ಸಭೆಯಲ್ಲಿ ಅಧಿಕಾರಿಗಳು ಗಮನಕ್ಕೆ ತಂದು ಸರಿಪಡಿಸಲು ತಿಳಿಸುತ್ತೇವೆ. ಎಂದು ಪಟ್ಟಣ ಪಂಚಾಯತಿ ಸದಸ್ಯೆ ಲಕ್ಷ್ಮಿ ಚನ್ನಪ್ಪ ಅವರು ತಿಳಿಸಿದರು