Breaking News

ರಾಜಿಕ್ ಸಿಂಡ್ರೋಮ್ ನಿಂದ ಗೋವುಗಳ ಕರುಳಿನಲ್ಲಿ ರಕ್ತಸ್ರಾವ: ತಕ್ಷಣಕ್ರಮಕೈಗೊಳ್ಳುವಂತೆ ವಿಎಪಿಎಸ್ ಅಕ್ಷಯಾ ಫೌಂಡೇಶನ್ ಟ್ರಸ್ಟ್ ಪುಣ್ಯಕೋಟಿ ಗೋಶಾಲೆ ಒತ್ತಾಯ

Intestinal bleeding in cows due to Rajik syndrome: VAPS urges Akshaya Foundation Trust Punyakoti Goshala to take immediate action

ಜಾಹೀರಾತು
IMG 20250208 WA0249 1024x826

ಬೆಂಗಳೂರು; ಇತ್ತೀಚೆಗೆ ಗೋವುಗಳಿಗೆ ಹೆಮರಾಜಿಕ್ ಸಿಂಡ್ರೋ ಮ್ ಎಂಬ ಮಾರಣಾಂತಿಕ ರೋಗ ವ್ಯಾಪಿಸಿದ್ದು, ಹಸುಗಳು ಹಠಾತ್ ಸಾವೀಗೀಡಾಗುತ್ತಿವೆ. ರಾಜ್ಯ ಸರ್ಕಾರದ ನಿಷ್ಕಾಳಜಿಯಿಂದಾಗಿ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಂಡಿದೆ ಎಂದು ವಿಎಪಿಎಸ್ ಅಕ್ಷಯಾ ಫೌಂಡೇಶನ್ ಟ್ರಸ್ಟ್ ಪುಣ್ಯಕೋಟಿ ಗೋಶಾಲೆ ಆರೋಪಿಸಿದೆ.

20250208 195835 COLLAGE Scaled

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಎಪಿಎಸ್ ಅಕ್ಷಯ ಫೌಂಡೇಷನ್ ಟ್ರಸ್ಟ್ ಸಂಘಟನಾ ಕಾರ್ಯದರ್ಶಿಗಳಾದ ಸಿದ್ದೇಶ್ ಕುಮಾರ್ ಆರ್, ಸ್ವರ್ಣಭೂಮಿ ಗೋಶಾಲೆಯ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ, ಐಸಿಎಆರ್ – ಎನ್.ಡಿ.ಆರ್.ಐ ಡಾ. ಕೆ. ಪಿ ರಮೇಶ್. ಮಾಗಡಿ, ತೀರ್ಥಹಳ್ಳಿ, ಚಿತ್ರದುರ್ಗ ಮತ್ತು ಕೋಡಿಹಳ್ಳಿ ಮತ್ತಿತರೆ ಪ್ರದೇಶಗಳಲ್ಲಿ ವಿಶೇಷವಾಗಿ ನಾಟಿ ಹಸುಗಳು ರೋಗದಿಂದ ಸಾವಿಗೀಡಾಗುತ್ತಿವೆ. ಈ ಸಂಬಂಧ ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ಅವರಿಗೆ ಪತ್ರ ಬರೆದು ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಡೈರಿ ವಲಯ, ರೈತರು ಮತ್ತು ಗೋವುಗಳಿಗೆ ಇದರಿಂದ ತೀವ್ರ ಸಂಕಷ್ಟ ಎದುರಾಗಿದೆ. ಹೆಮರಾಜಿಕ್ ಸಿಂಡ್ರೋ ಮ್ ನಿಂದಾಗಿ ಹೆಚ್ಚಿನ ಸಂಖ್ಯೆಯ ಹಸುಗಳು ಸಾವನ್ನಪ್ಪುತ್ತಿವೆ. ಇದರಿಂದ ಹೈನೋತ್ಪಾದನೆ ಮತ್ತು ಕೃಷಿ ಚಟುವಟಿಕೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದರು.

ಪುಣ್ಯಕೋಟಿ ಗೋಶಾಲೆ ಸರ್ಕಾರದ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯ ಪಶುವೈದ್ಯರ ಸಹಾಯದಿಂದ ಡೈರಿ ಹಸುಗಳನ್ನು ವೈಜ್ಞಾನಿಕವಾಗಿ ನಿರ್ವಹಿಸುತ್ತಿದೆ. ಐಸಿಎಆರ್ ಎನ್.ಡಿ.ಆರ್.ಐ ಬೆಂಗಳೂರು ಮತ್ತು ಸಂಶೋಧನಾ ಸಂಸ್ಥೆಗಳು ಮತ್ತು ಪಶುವೈದ್ಯಕೀಯ ಕಾಲೇಜುಗಳಿಂದ ಇತರ ತಜ್ಞರು ಸಹ ಪರಿಶೀಲಿಸುತ್ತಿದ್ದಾರೆ. ಕಳೆದ 15 ದಿನಗಳಲ್ಲಿ, ನಮ್ಮ ಗೋಶಾಲೆ ಹಸುಗಳು ಗುರುತಿಸಲಾಗದ ಆರೋಗ್ಯ ಸಮಸ್ಯೆಗಳಿಂದ ನರಳುತ್ತಿದ್ದು, ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದೆ. 25 ಕ್ಕೂ ಹೆಚ್ಚು ಹಸುಗಳ ಸಾವಿಗೆ ಕಾರಣವಾಗಿದೆ. ಜನವರಿ 21 ರಂದು ಆರು ಹಸುಗಳು ರೋಗ ಕಾಣಿಸಿಕೊಂಡ 24 ರಿಂದ 48 ಗಂಟೆಗಳ ಒಳಗಾಗಿ ಮೃತಪಟ್ಟಿವೆ ಎಂದರು.

ಆಂಕ್ರೋ ಸಿಸ್ ನಿಂದಾಗಿ ತೀವ್ರವಾಗಿ ಕರುಳಿನ ರಕ್ತಸ್ರಾವ ಉಂಟಾಗಿದೆ. ಹೆಬ್ಬಾಳದ ಪಶು ಆರೋಗ್ಯ ಮತ್ತು ಪಶುವೈದ್ಯಕೀಯ ಮತ್ತು ಜೈವಿಕ ಉತ್ಪನ್ನಗಳ ಸಂಸ್ಥೆಗೂ ಸಹ ಸತ್ತ ಪ್ರಾಣಿಗಳು ಮಾದರಿಗಳನ್ನು ಕಳುಹಿಸಲಾಗಿತ್ತು. ಶಂಕಿತ “ಹೆಮ್ರಾ ಜಿಕಲ್ ಕರುಳಿನ ಸಿಂಡ್ರೋ ಮ್” ವಿವಿಧ ಕಾರಣಗಳಿಂದ ಉಂಟಾಗುವ ಖಾಯಿಲೆ. ಈ ಮಧ್ಯೆ, ಹೆಚ್ಚಿನ ಹಸುಗಳು ಇದೇ ರೀತಿಯ ರೋಗ ಚಿಹ್ನೆಗಳನ್ನು ಹೊಂದಿವೆ. ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೂ ಮತ್ತು ತಜ್ಞರು ನಿಗದಿಪಡಿಸಿದ ಎಲ್ಲಾ ಮಾರ್ಗಸೂಚಿ ಅನುಸರಣೆಯ ಹೊರತಾಗಿಯೂ, ಗುರುತಿಸಲಾಗದ ಕಾಯಿಲೆ ಕಾರಣದಿಂದಾಗಿ ಎರಡು ವಾರಗಳಲ್ಲಿ 25 ಹಸುಗಳು ಮರಣಗೊಂದಿವೆ ಎಂದರು.

ಮುಂತಾದ ಸ್ಥಳಗಳಲ್ಲಿ ಇಂತಹ ಸಮಸ್ಯೆಗಳು ಕಂಡು ಬಂದಿವೆ. ಹೆಮ್ರಾ ಮಿಕ್ ಎಂಟರಾನೆಲ್ ಸಿಂಡ್ರೋಮ್ ರಾಜ್ಯದ ತುರ್ತು ಸಮಸ್ಯೆಯಾಗಿ ಮಾರ್ಪಟ್ಟಿದೆ. ಈ ಮಾರಣಾಂತಿಕ ರೋಗವು ಮುಖ್ಯವಾಗಿ ವಯಸ್ಕ ಡೈರಿ ಹಸುಗಳ ಮೇಲೆ ಪರಿಣಾಮ ಬೀರಿ ರೈತರಿಗೆ ಗಮನಾರ್ಹ ಆರ್ಥಿಕ ನಷ್ಟ ಉಂಟುಮಾಡುತ್ತಿದೆ. ಡೈರಿ ಉದ್ಯಮಕ್ಕೆ ಗಂಭೀರ ಸವಾಲು ಎದುರಾಗುವಂತೆ ಮಾಡಿದೆ. ಹಠಾತ್ ಕರುಳಿನ ರಕ್ತಸ್ರಾವ ಮತ್ತು ಗುಳ್ಳೆ ರಚನೆಗೆ ಚಿಕಿತ್ಸೆ ನೀಡದಿದ್ದರೆ, ಗಂಟೆಗಳೊಳಗೆ ಹಸುಗಳು ಸಾವಿಗೀಡಾಗುತ್ತವೆ. 1991 ರಲ್ಲಿ ಮೊದಲು ಈ ಸಮಸ್ಯೆ ಕಂಡು ಬಂದಿತ್ತಾದರೂ ನಿಖರವಾದ ಕಾರಣ ಇನ್ನೂ ತಿಳಿದಿಲ್ಲ ಎಂದರು.

ರೋಗ ನಿಯಂತ್ರಣ ಕ್ರಮಗಳ ಮೇಲ್ವಿಚಾರಣೆಗೆ ತಜ್ಞರ ಸಮಿತಿ ರಚಿಸಿ ಪರಿಸ್ಥಿತಿ ನಿಭಾಯಿಸಬೇಕು. ರೈತರಿಗೆ ಹೆಚ್ಚಿನ ಪರಿಹಾರ ಒದಗಿಸುವ ಜೊತೆಗೆ ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಸುಧಾರಿಸಲು ಶಾಶ್ವತ ತಜ್ಞರ ಸಲಹಾ ಸಮಿತಿ ಅಸ್ಥಿತ್ವಕ್ಕೆ ತರಬೇಕು. ಪ್ರತ್ಯೇಕವಾಗಿ ಸ್ಥಳೀಯ ಡೈರಿ ಹಸುಗಳು ಮತ್ತು ಇತರ ಜಾನುವಾರುಗಳನ್ನು ಸುಧಾರಿಸಲು ಮತ್ತು ಅವರ ರೋಗಗಳ ಡೆಗಟ್ಟುವಿಕೆಗೆ 500 ಕೋಟಿ ರೂಪಾಯಿ ನಿಧಿ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.