“Koṭṭūrinalli phāraṁ 3 mēḷa”
“Form 3 Mela at Kottoor”
ಕೊಟ್ಟೂರು : ಮಾನ್ಯ ಜಿಲ್ಲಾಧಿಕಾರಿಗಳ ಹಾಗೂ ಮಾನ್ಯ ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ದಿ ಕೋಶ ಇವರ ಆದೇಶದ ಮೇರೆಗೆ ಮಂಗಳವಾರದಂದು ಪಟ್ಟಣದ ಗಚ್ಚಿನಮಠದ ಮುಂಭಾಗದಲ್ಲಿ ಪಟ್ಟಣ ಪಂಚಾಯತಿ ಫಾರಂ 3 ಮೇಳವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಫಾರಂ 3 ಮೇಳವನ್ನು ಕುರಿತು ಪಟ್ಟಡ ಪಂಚಾಯಿತಿ ಮುಖ್ಯಧಿಕಾರಿ ಎ ನಸ್ರುಲ್ ಅವರು ಮಾತನಾಡಿದರು ಜಿಲ್ಲಾಧಿಕಾರಿಗಳ ಆದೇಶ ಮನೆ ಬಾಗಿಲಿಗೆ ಫಾರಂ 3 ಯೋಜನಾ ಅಡಿಯಲ್ಲಿ ನಡೆಯುತ್ತಿದ್ದು ಸಾರ್ವಜನಿಕರು ತಮ್ಮ ಆಸ್ತಿಯ ಮಾಲಿಕತ್ವ ದೃಢೀಕರಿಸುವ ನೊಂದಾಯಿತ ದಾಖಲಾತಿಗಳನ್ನು ನೀಡಿ ಪಡೆದುಕೊಳ್ಳಬಹುದು ಈ ಯೋಜನೆಯನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ನಂತರ ಮಾತನಾಡಿದ ಡಿಎಸ್ಎಸ್ ಮುಖಂಡ ಬದ್ದಿ ಮರಿಸ್ವಾಮಿ ರವರು ಸಾರ್ವಜನಿಕರು ತಮ್ಮ ಕೆಲಸಗಳಿಗೆ ಮನೆಯಿಂದ ಕಚೇರಿ ಕಚೇರಿಯಿಂದ ಮನೆಗೆ ಅಲೆದಾಡುವ ಪರಿಸ್ಥಿತಿ ನೋಡಿದ್ದೇವೆ ಇದರಿಂದ ಮುಕ್ತಿ ಪಡೆಯಲು ಜಿಲ್ಲಾಧಿಕಾರಿಗಳವರು ನಿಮ್ಮ ಕೆಲಸವನ್ನು ಮನೆ ಬಾಗಿಲು ತಲುಪುವ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಇನ್ನು ಮುಂದೆ ಅಂತ್ಯಸಂಸ್ಕಾರ ಸೌಕರ್ಯವನ್ನು ಪಟ್ಟಣ ಪಂಚಾಯತಿ ಪಂಚಾಯಿತಿಯಿಂದ ಉಚಿತವಾಗಿ ನೀಡುತ್ತದೆ. ಸಾರ್ವಜನಿಕರು ತಮ್ಮ ವಾರ್ಡಿನಲ್ಲಿರುವ ಸಮಸ್ಯೆಯನ್ನು ಫೋನಿನ ಮುಖಾಂತರ ಅಧಿಕಾರಿಗಳೊಂದಿಗೆ ಸಂಪರ್ಕಿಸಿದರೆ ತಮ್ಮ ಕೆಲಸವನ್ನು ಮಾಡಿಕೊಡುತ್ತಾರೆ. ಆದ್ದರಿಂದ ಸಾರ್ವಜನಿಕರು ಈ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂ. ಅಧ್ಯಕ್ಷ ಬಿ.ರೇಖಾ ರಮೇಶ್, ಉಪಾಧ್ಯಕ್ಷರಾದ ಜಿ ಸಿದ್ದಯ್ಯ, ಸದಸ್ಯರುಗಳಾದ ಹೊಸಮನಿ ವಿನಯ್ ಕುಮಾರ್, ಕೆಂಗಪ್ಪ, ವಿದ್ಯಾ ಮೇಘರಾಜ್, ಸಫಿ, ತೋಟದ ರಾಮಣ್ಣ, ಇತರರು ಉಪಸ್ಥಿತರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…