ಕೊಪ್ಪಳ ಸುದ್ದಿ

ತಾಲೂಕಿನಲ್ಲಿ ಎಗ್ಗಿಲ್ಲದೆ ಸಾಗಿದೆ ಮಟ್ಕಾ ಇಸ್ಪೀಟ್ ದಂಧೆ. ಕಡಿವಾಣ ಯಾವಾಗ! ಬಗ್ಗುಬಡಿಯಬೇಕಿದೆ ಪೊಲೀಸ್ ಇಲಾಖೆಬಗ್ಗು ಬಡಿಯ ಬೇಕಾದ ಪೋಲೀಸ್‌ ಇಲಾಖೆ ಸುಮ್ಮನಿದೆ ಏಕೆ !!! ???

The Matka and Ispeet racket is running rampant in the taluk. When will it be curbed! The police department needs to be punished. The police department needs to be punished. Why is it silent!!! ?

ಗಂಗಾವತಿ: ಚೆನ್ನಾಗಿ ಮಳೆಯಾಗಿ, ಒಳ್ಳೆಯ ಬೆಳೆ ಬೆಳೆದರು, ಸರಿಯಾದ ಬೆಂಬಲ ಬೆಲೆ ಸಿಗದೇ ಬರ ಪರಿಸ್ಥಿತಿಯುಂಟಾಗುತ್ತಿರುವ ಈ ಸಂದರ್ಭದಲ್ಲಿ ಇಸ್ಪೀಟ್, ಮಟ್ಕಾ ಆಡಿಸುವವರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದೆ. ಜೂಜಾಟದಲ್ಲಿ ತೊಡಗುವ ಬಹುತೇಕರು ಇಸ್ಪೀಟ್, ಮಟ್ಕಾ ಚಟಕ್ಕೆ ಬಿದ್ದು ಮೈಕ್ರೋ ಫೈನಾನ್ಸ್ಗಳಲ್ಲಿ ಸಾಲ ಮಾಡಿ ಕುಟುಂಬಗಳನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದ್ದಾರೆ ಎಂದು ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆ ಸಂಘಟನೆಯ ಕೊಪ್ಪಳ ಜಿಲ್ಲಾಧ್ಯಕ್ಷರಾದ ಅಜಯಕುಮಾರ ಚಲುವಾದಿ ಪ್ರಕಟಣೆಯಲ್ಲಿ ಖೇದ ವ್ಯಕ್ತಪಡಿಸಿದರು.


ಅವರು ಅಕ್ರಮ ಜೂಜಾಟಗಳ ಕಡೆಗೆ ಪೊಲೀಸ್ ಇಲಾಖೆಯ ಮೇಲಾಧಿಕಾರಿಗಳು ಗಮನಹರಿಸಿ, ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಮಾತನಾಡಿದರು. ಗಂಗಾವತಿ ಕನಕಗಿರಿ ಮತ್ತು ಕಾರಟಗಿ ತಾಲೂಕುಗಳ ನಗರ, ಪಟ್ಟಣ, ಹಳ್ಳಿಗಳು ಸೇರಿದಂತೆ ಆಯಕಟ್ಟಿನ ಸ್ಥಳಗಳಲ್ಲಿ ಪ್ರಮುಖ ವ್ಯಕ್ತಿಗಳ ಕಣ್ಗಾವಲಲ್ಲಿ ಇಸ್ಪೀಟ್ ಜೂಜಾಟ ಆಡಿಸುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಗಂಗಾವತಿ ತಾಲೂಕಿನ ಕಲ್ಕುಡಿ, ಮರಳಿ, ಸಂಗಾಪುರ, ವೆಂಕಟಗಿರಿ, ಗಡ್ಡಿ, ಉಡುಮಕಲ್ಲು, ಸಿದ್ದಿಕೇರಿ, ಎಪಿಎಂಸಿ ಇಷ್ಟೇ ಅಲ್ಲದೆ ಆಯ್ದ ಹೊಲಗಳಲ್ಲಿ ಶೆಡ್ಡುಗಳನ್ನು ಹಾಕಿ ಅಂದರ್ ಬಾಹರ್ ಜೂಜಾಟ ಆಡಿಸುತ್ತಿರುವ ಆರೋಪ ಕೇಳಿಬರುತ್ತಿದೆ. ಪ್ರಮುಖ ಲಾಡ್ಜ್ಗಳನ್ನು ಸಹ ಇಸ್ಪೀಟ್ ಜೂಜಾಟಕ್ಕೆ ಬಳಕೆ ಮಾಡಿಕೊಂಡು ಪ್ರತಿದಿನವೂ ಲಕ್ಷಾಂತರ ಹಣ ಜೂಜಾಟ ನಡೆಯುತ್ತಿದೆ.

ಇಸ್ಪೀಟ್ ಆಟದ ಅಡ್ಡೆಗೆ ಪ್ರವೇಶಿಸುವವರಿಗೆ ಒಂದು ಸಾವಿರ ರೂಪಾಯಿ ಎಂಟ್ರಿ ಫೀಸ್ ನಿಗದಿ ಮಾಡಲಾಗಿದೆ. ಇತ್ತೀಚೆಗಷ್ಟೇ ಪೊಲೀಸ್ ಇಲಾಖೆಯ ದಾಳಿಯ ಭಯದಿಂದ ಕೆಲ ಇಸ್ಪೀಟ್ ಅಡ್ಡೆಗಳನ್ನು ಮುಚ್ಚಲಾಗಿದೆಯಾದರೂ, ಇನ್ನುಳಿದವರು ಯಾವ ಭಯವೂ ಇಲ್ಲದೇ ರಾಜಾರೋಷವಾಗಿ ಇಸ್ಪೀಟ್ ಆಡಿಸುತ್ತಿದ್ದಾರೆ. ನಗರದ ಪ್ರತಿಷ್ಠಿತ ವ್ಯಕ್ತಿಗಳು ಕೂಡ ಈ ದಂಧೆಯಲ್ಲಿ ತೊಡಗಿರುವುದು ಎಲ್ಲೆಡೆ ಅಚ್ಚರಿ ಮೂಡಿಸಿದೆ. ಪೊಲೀಸ್ ಇಲಾಖೆ ಅಧಿಕಾರಿಗಳ ಕಣ್ತಪ್ಪಿಸಿ ಮಟ್ಕಾ ಬುಕ್ಕಿಗಳು ಆಟ ನಡೆಸಿದ್ದಾರೆ. ಬಸಾಪಟ್ಟಣ, ದಾಸನಾಳ, ಸಂಗಾಪುರ, ಮುಸ್ಟೂರು, ಡಣಾಪುರ, ಆನೆಗುಂದಿ, ವಡ್ಡರಹಟ್ಟಿ, ಗಂಗಾವತಿಯಲ್ಲಿ ಮಟ್ಕಾ ಬುಕ್ಕಿಗಳು ಬರೆದ ಹಣವನ್ನು ಪಡೆಯುವ ದೊಡ್ಡ ಬುಕ್ಕಿಗಳು ಇದ್ದಾರೆ ಎನ್ನಲಾಗಿದೆ.

ಆನ್‌ಲೈನ್‌ನಲ್ಲಿ ಮಟ್ಕಾ ಕುರಿತ ಎಲ್ಲಾ ಮಾಹಿತಿ ಲಭ್ಯವಾಗುತ್ತಿರುವುದರಿಂದ ಕಲ್ಯಾಣಿ, ಶ್ರೀದೇವಿ, ಮಧುರೈ ಡೇ, ಮೇನ್‌ಬಜಾರ್, ಕಲ್ಯಾಣನೈಟ್ ಸೇರಿದಂತೆ ಬಗೆಬಗೆಯ ಜೂಜಾಟದಲ್ಲಿ ಜನತೆ ತೊಡಗಿದ್ದಾರೆ. ಇದರಿಂದ ಬಡ ಕುಟುಂಬಗಳು ಬೀದಿಗೆ ಬರುತ್ತಿವೆ. ಈ ಅಕ್ರಮಕ್ಕೆ ಕಡಿವಾಣ ಇಲ್ಲದಾಗಿದೆ. ಜೂಜಾಟ ನಡೆದಿರುವ ಕುರಿತಂತೆ ಸಂಬಂಧಿಸಿದ ಇಲಾಖೆಗಳು ಗಮನಹರಿಸಿ ಅಕ್ರಮಕ್ಕೆ ಮುಂದಾಗಬೇಕು ಎಂದು

ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆ ಕೊಪ್ಪಳ ಜಿಲ್ಲಾಧ್ಯಕ್ಷರು, ಅಜಯಕುಮಾರ ಚಲುವಾದಿ ಒತ್ತಾಯಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

9 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

10 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

10 hours ago