Awareness about skin diseases,
ಚರ್ಮರೋಗ ಕುರಿತು ಜನಜಾಗೃತಿ, ನಕಲಿ ವೈದ್ಯರ ಬಗ್ಗೆ ಎಚ್ಚರವಹಿಸಲು ಮಾ. 2 ರಂದು ನಗರದಲ್ಲಿ ಬೃಹತ್ “ಸ್ಕಿನ್ನಥಾನ್” : 10, 5 ಮತ್ತು 3 ಕಿಲೋಮೀಟರ್ ಓಟ ಆಯೋಜನೆ
ಬೆಂಗಳೂರು, ಫೆ, 27; ಬೆಂಗಳೂರು ಚರ್ಮ ರೋಗ ವೈದ್ಯರ ಸಂಘ, ಎಐಡಿವಿಎಲ್ ಕರ್ನಾಟಕ ಸಂಘ, ಇಂಡಿಯನ್ ಅಸೋಸಿಯೇಷನ್ ಆಫ್ ಡರ್ಮಟಾಲಜಿಸ್ಟ್, ವೆನರಿಯಾಲಜಿಸ್ಟ್ ಸಂಸ್ಥೆಗಳಿಂದ ಚರ್ಮದ ಆರೈಕೆಗಾಗಿ ಜನ ಜಾಗೃತಿ ಮತ್ತು ನಕಲಿ ವೈದ್ಯರ ಬಗ್ಗೆ ಎಚ್ಚರಿಕೆ ವಹಿಸುವಂತೆ ತಿಳಿವಳಿಕೆ ನೀಡಲು ಮಾ. 2 ರಂದು ನಗರದಲ್ಲಿ ಇದೇ ಮೊದಲ ಬಾರಿಗೆ ಚರ್ಮದ ಆರೈಕೆಗಾಗಿ ಬೃಹತ್ “ಸ್ಕಿನ್ನಥಾನ್” ಓಟ ಆಯೋಜಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಂಡಿಯನ್ ಅಸೋಸಿಯೇಷನ್ ಆಫ್ ಡರ್ಮಟಾಲಜಿಸ್ಟ್, ವೆನರಿಯಾಲಜಿಸ್ಟ್ ಅಧ್ಯಕ್ಷ ಡಾ. ಮಂಜುನಾಥ್ ಹುಲ್ಮನಿ, ಗೌರವ ಕಾರ್ಯದರ್ಶಿ ಡಾ. ಸಿ. ಮಹೇಶ್ ಕುಮಾರ್ ಮತ್ತು ಬೆಂಗಳೂರು ಚರ್ಮ ರೋಗ ವೈದ್ಯರ ಸಂಘದ ಅಧ್ಯಕ್ಷ ಡಾ. ಎಸ್. ಸಚ್ಚಿದಾನಂದ, ನಗರದ ಎಚ್.ಎಸ್.ಅರ್. ಬಡಾವಣೆಯ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಿಂದ ಬೆಳಿಗ್ಗೆ 6 ರಿಂದ 9 ಗಂಟೆವರೆಗೆ ನಡೆಯಲಿರುವ “ಸ್ಕಿನ್ನಥಾನ್” ನಲ್ಲಿ 10, 5 ಮತ್ತು 3 ಕಿಲೋಮೀಟರ್ ವಿಭಾಗಗಳಲ್ಲಿ ಓಟ ಆಯೋಜಿಸಲಾಗಿದೆ ಎಂದರು.
ಅತಿಯಾದ ಸ್ಟಿರಾಯ್ಡ್ ಬಳಕೆ, ಸ್ವಯಂ ಔಷಧೋಪಚಾರಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುತ್ತದೆ. ಜವಾಬ್ದಾರಿಯುತ ಚರ್ಮದ ಆರೈಕೆಗಾಗಿ ಉತ್ತಮ ಅಭ್ಯಾಸಗಳನ್ನು ರೂಢಿಸಿಕೊಳ್ಳುವ, ಸಾಮಾನ್ಯ ಚರ್ಮ ರೋಗದ ಬಗ್ಗೆ ಅರಿವು, ಚಿಕಿತ್ಸಾ ವಿಧಾನಗಳು, ನಕಲಿ ವೈದ್ಯರ ಬಗ್ಗೆ ಎಚ್ಚರಿಕೆ ವಹಿಸುವ ಮತ್ತು ಇದರಿಂದ ಎದುರಾಗುವ ಅಪಾಯಗಳ ಕುರಿತು ಜನ ಜಾಗೃತಿ ಮೂಡಿಸುವ ಉದ್ದೇಶ ಹೊಂದಲಾಗಿದೆ ಎಂದರು.
ವೃತ್ತಿಪರ ಚರ್ಮರೋಗ ಶಾಸ್ತ್ರದ ಬಗ್ಗೆ ಅರಿವು ಮೂಡಿಸುವ ಜೊತೆಗೆ ಚರ್ಮ ರೋಗಗಳ ಬಗ್ಗೆ ಇರುವು ತಪ್ಪು ಕಲ್ಪನೆಯನ್ನು ತೊಡೆದುಹಾಕುವ ಗುರಿ ಹೊಂದಲಾಗಿದೆ. ಅನಿಯಂತ್ರಿತ ಚರ್ಮದ ಚಿಕಿತ್ಸೆಗಳಿಂದ ಎದುರಾಗುವ ಅಪಾಯಗಳ ಕುರಿತು ಜನರಲ್ಲಿ ಅರಿವು ಉಂಟು ಮಾಡಲಾಗುವುದು ಎಂದರು.
ಖ್ಯಾತ ಚರ್ಮರೋಗ ತಜ್ಞರಾದ ಡಾಕ್ಟರ್ ಬಿ.ಎಸ್ ಚಂದ್ರಶೇಖರ್,
ಬೆಂಗಳೂರು ಚರ್ಮ ರೋಗ ವೈದ್ಯರ ಸಂಘದ ಗೌರವ ಕಾರ್ಯದರ್ಶಿ ಡಾ. ಸುಜಲ ಎಸ್ ಆರಾಧ್ಯ, ಸ್ಕಿನ್ನಥಾನ್ ಮುಖ್ಯ ಸಮನ್ವಯಕಾರರಾದ ಡಾ. ಪಿ. ಜಗದೀಶ್, ಇ ಎಸ್ ಐ ಸಿ, ಎಚ್.ಓ.ಡಿ ಡಾ. ಎಂ. ಎಸ್. ಗಿರೀಶ್ ಉಪಸ್ಥಿತರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…