Madappa’s big chariot festival was celebrated with great pomp.
ವರದಿ : ಬಂಗಾರಪ್ಪ .ಸಿ.
ಹನೂರು :ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವವು ಬಹಳ ಅಚ್ಚುಕಟ್ಟಾಗಿ ಪ್ರಾಧಿಕಾರದ ವತಿಯಿಂದ ಹಾಗೂ ಜಿಲ್ಲಾಡಳಿತದಿಂದ ಸಕಲ ಸೌಲಭ್ಯಗಳೊಂದಿಗೆ ನೆರೆವೆರಿತು ಎಂದು ಶಾಸಕರಾದ ಎಮ್ ಆರ್ ಮಂಜುನಾಥ್ ತಿಳಿಸಿದರು .
ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿನ ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಅಂಗವಾಗಿ ಶ್ರೀ ಸಾಲೂರು ಬೃಹನ್ಮಠದ ಪೀಠಾಧಿಪತಿಗಳಾದ ಪೂಜ್ಯ ಡಾ. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಜೀಯವರ ನೇತೃತ್ವದಲ್ಲಿ ಮಹಾರಥೋತ್ಸವು ವಿಜೃಂಭಣೆಯಿಂದ ಜರುಗಿತು .
ಮಹಾರಥವನ್ನು ವಿವಿಧ ಪುಷ್ಪಗಳಿಂದ ಸಿಂಗಾರ ಮಾಡಲಾಗಿತ್ತು, ದೇಗುಲವನ್ನು ತಳಿರು ತೋರಣದಿಂದ ಸಿಂಗಾರ ಮಾಡಲಾಗಿತ್ತು. ಬೆಳಗಿನ ಜಾವತಿ ಗಂಟೆಯಿಂದ 6.30ರವರೆಗೆ ಸ್ವಾಮಿಗೆ ಪ್ರಥಮ ಹಾಗೂ ದ್ವಿತೀಯ ವಿಶೇಷ ಪೂಜೆ ನೆರವೇರಿನ ಲಾಯಿತು. ಸ್ವಾಮೀಜಿಗಳ ಸಮ್ಮುಖದಲ್ಲಿ ಬೆಳಗಿನ ಜಾವ ಪ್ರಥಮ ಹಾಗೂ ದ್ವಿತೀಯ ವಿಶೇಷ ಪೂಜೆ ನೆರವೇರಿಸಿ ನಂತರ ಉಪವಾಸವಿದ್ದ ಬೇಡಗಂಪಣ ಸರದಿ ಅರ್ಚಕರು ಉಪಸ್ಥಿತಿಯಲ್ಲಿ ಛತ್ರಿ, ಚಾಮರ, ವಾದ್ಯ ಮೇಳದೊಂದಿಗೆ ದೇಗುಲ ಪ್ರದಕ್ಷಿಣೆ ಹಾಕಿ ವಿಶೇಷ ಪೂಜೆಯನ್ನು ಸಲ್ಲಿಸಿ ಮೆರವಣಿಗೆಯ ಮೂಲಕ ಉತ್ಸವ ಮೂರ್ತಿಯನ್ನು ಮಹಾರಥೋತ್ಸವವಕ್ಕೆ ತರಲಾಯಿತು . ಶ್ರೀ ಸ್ವಾಮಿಗೆ ಸಂಕಲ್ಪಮಾಡಿ, ಅಷ್ಟೋತ್ತರ. ಬಿಲ್ವಾರ್ಚನೆ, ದೋಪ ದೀಪ ನೈವೇದ್ಯ ಮಹಾಮಂಗಳಾರತಿ ನೆರವೇರಿಸಿದರು. ಈ ವೇಳೆ ಭಕ್ತರು ಉಘೇ ಉಘೇ ಮಹಂತ ಮಲ್ಲಯ್ಯಾ, ಉಘೇ ಮಾದಪ್ಪ ಉಘೇ, ಸಾಲೂರುಮಠದೊಡೆನಿಗೆ ಉಘೇ ಉಘೇ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿದರು. ಭಕ್ತಿ ಭಾವದ ಸಂಗಮದಲ್ಲಿ ಭಕ್ತರು ಮುಳುಗಿದರು.
ಮಹಾರಥೋತ್ಸವದ
ಶ್ರೀ ಸ್ವಾಮಿಯ ಉತ್ಸವ ಮೂರ್ತಿಯ ಜೋತೆ ಸಾಲೂರು ಶ್ರೀಗಳ ಗುರು ಬ್ರಹ್ಮೋತ್ಸವವು ಜರುಗಿತು. ಇದೇ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಎ ಇ ರಘು . ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಗೂ ಭಕ್ತರು ಹಾಜರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…