ಕಲ್ಯಾಣಸಿರಿ ವಿಶೇಷ

ಹಾನಿಕಾರಕ ಕೈಗಾರಿಕೆ ಸ್ಥಾಪಿಸ ಬೇಡಿ: ರಾಜ್ಯ ಸರಕಾರಕ್ಕೆ ಹೆಚ್ ಡಿ ಕೆ ಕಿವಿಮಾತು

Don’t set up harmful industries: HDK appeals to the state government

ಕೊಪ್ಪಳ: ಪರಿಸರಕ್ಕೆ ಹಾಗೂ ಸಾಮಾನ್ಯ ಜನರಿಗೆ ಹಾನಿಕಾರಕ ಕೈಗಾರಿಕಾ ಘಟಕಗಳನ್ನು ಸ್ಥಾಪಿಸುವುದು ಉಚಿತವಲ್ಲ ಎಂದು ರಾಜ್ಯ ಸರಕಾರಕ್ಕೆ ಹೇಳಿದ್ದೇನೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಶ್ರೀ ಹೆಚ್ ಡಿ ಕುಮಾರಸ್ವಾಮಿ ಅವರು ರವಿವಾರ ಹೇಳಿದರು.
ಖಾಸಗಿ ಕಾರ್ಯಕ್ರಮಕ್ಕೆ ನಗರಕ್ಕೆ ಆಗಮಿಸಿದ್ದ ಸಚಿವರು ಮಾಧ್ಯಮದವರ ಜೊತೆಗೆ ಮಾತನಾಡಿದರು.
ಕೊಪ್ಪಳ ನಗರದಲ್ಲಿ ಬಲ್ದೋಟ ಸಮೂಹದ ಉದ್ದೇಶಿತ ಉಕ್ಕು ಕಾರ್ಖಾನೆ ಸ್ಥಾಪನೆಗೆ ವ್ಯಕ್ತವಾಗಿರುವ ವಿರೋಧ ಹಾಗೂ ಶ್ರೀ ಗವಿಮಠದ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿಯವರ ನಿಲುವಿನ ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಹೇಳಿದ್ದಿಷ್ಟು:” ರಾಜ್ಯ ಸರಕಾರ ಹಾಗೂ ಸ್ಥಳೀಯ ಕಂಪನಿಯೊಂದು ಒಪ್ಪಂದ ಮಾಡಿಕೊಂಡಿವೆ. ಅದು ಕೇಂದ್ರದ ಯೋಜನೆ ಅಲ್ಲ. ಈ ಒಪ್ಪಂದದ ಕುರಿತು ವ್ಯಾಪಕವಾದ ವಿರೋಧ ವ್ಯಕ್ತವಾಗಿದೆ. ಗವಿಸಿದ್ದೇಶ್ವರ ಸ್ವಾಮೀಜಿಯವರು ವಿರೋಧಿಸಿದ್ದಾರೆ. ಪರಿಸರ ಹಾಗೂ ಜನರಿಗೆ ಹಾನಿ ಉಂಟು ಮಾಡುವ ಘಟಕಗಳನ್ನು ಸ್ಥಾಪಿಸಬಾರದು.‌ ಇದನ್ನು ರಾಜ್ಯ ಸರ್ಕಾರಕ್ಕೆ ಸ್ಪಷ್ಟವಾಗಿ ಹೇಳಿದ್ದೇನೆ.‌ ಕೊಪ್ಪಳದಲ್ಲಿ ಕೈಗಾರಿಕಾ ಘಟಕದ ಸ್ಥಾಪನೆಯ ವಿರೋಧಕ್ಕೆ ನಮ್ಮ ಪಕ್ಷದ ಸಹಮತವೂ ಇದೆ.‌ ರಾಜ್ಯ ಸರ್ಕಾರ ಕೊಪ್ಪಳದ ಜನತೆ ಹಾಗೂ ಸ್ವಾಮೀಜಿಯವರ ಜೊತೆ ಸಭೆ ನಡೆಸಿ ಈ ವಿಷಯದ ಕುರಿತಂತೆ ಮುಂದುವರೆಯಬೇಕು.”
ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡುತ್ತಾ ಕೇಂದ್ರ ಸರಕಾರವನ್ನು ಟೀಕಿಸುತ್ತಾ ಒಂದುವರೆ ವರ್ಷ ಹಾಳು ಮಾಡಿದೆ. ಈ ಸರ್ಕಾರದಿಂದ ಹೆಚ್ಚಿನ ನಿರೀಕ್ಷೆ ಇಲ್ಲ. ರಾಜ್ಯ ಸರಕಾರದ ಬೊಕ್ಕಸದಲ್ಲಿ ಹಣವಿದೆ. ಆದರೆ ವ್ಯಾಪಕ ಪ್ರಮಾಣದ ದುರ್ಬಳಕೆಯಿಂದಾಗಿ ಅಭಿವೃದ್ಧಿ ಕೆಲಸಗಳಿಗೆ ಅನುದಾನವೇ ಇಲ್ಲ. ಕಲ್ಯಾಣ ಕರ್ನಾಟಕ ಭಾಗಕ್ಕೆ 5000 ಕೋಟಿ ರೂಪಾಯಿ ಮೀಸಲಿಡಲಾಗಿತ್ತು.‌ ಅದರಲ್ಲಿ ಒಂದು ನಯಾ ಪೈಸಾ ಬಿಡುಗಡೆಯಾಗಿಲ್ಲ. ಕಾಂಗ್ರೆಸ್ ಸರಕಾರ ಗುತ್ತಿಗೆದಾರರಿಂದ ಹೆಚ್ಚಿನ ಕಮಿಷನ್ ವಸೂಲಿ ಮಾಡುತ್ತಿದೆ ಎಂಬ ಆರೋಪಗಳು ಇವೆ‌ ಎಂದು ಟೀಕಿಸಿದರು.
ಮೇಕೆದಾಟು ಯೋಜನೆ ಹಾಗೂ ಚಿತ್ರ ನಗರಿ ಯೋಜನೆಗಳ ಕುರಿತಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಹೇಳಿಕೆಗಳನ್ನು ಪ್ರಸ್ತಾಪಿಸಿದಾಗ, ರಾಜ್ಯದ ಜನತೆ ಅವರ ಪಕ್ಷಕ್ಕೆ ಅಧಿಕಾರ ನೀಡಿದ್ದಾರೆ. ಜನರ ಆಶಯದಂತೆ ಅವರು ಕೆಲಸ ಮಾಡಲಿ. ನಟ್ ಹಾಗೂ ಬೋಲ್ಟ್ ರಿಪೇರಿ ಮಾಡಲು ತಜ್ಞರಿದ್ದಾರೆ.‌ ಅದು ಶಿವಕುಮಾರ್ ಅವರ ಕೆಲಸವಲ್ಲ ಎಂದು ವ್ಯಂಗ್ಯವಾಡಿದರು.
ಅಕ್ಟೋಬರ್ ವೇಳೆಗೆ ರಾಜ್ಯ ಸರಕಾರದಲ್ಲಿ ಬದಲಾವಣೆಯಾಗಲಿದೆ ಎಂಬ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಿ ವೈ ವಿಜಯೇಂದ್ರ ಹೇಳಿಕೆ ಕುರಿತಂತೆ ಸಚಿವರು ಹೇಳಿದ್ದು: “ಅವರು ಯಾವ ಅರ್ಥದಲ್ಲಿ ಆ ಹೇಳಿಕೆ ನೀಡಿದ್ದಾರೆಯೋ ನನಗೆ ಗೊತ್ತಿಲ್ಲ.”
ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್, ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ, ಪಕ್ಷದ ರಾಜ್ಯ ಕಾರ್ಯದರ್ಶಿ ವೀರೇಶ್ ಮಹಾಂತಯ್ಯನಮಠ, ಬಿಜೆಪಿಯ ವಿಧಾನಪರಿಷತ್ ಸದಸ್ಯರಾದ ಶ್ರೀಮತಿ ಹೇಮಲತಾ ನಾಯಕ್, ಬಿಜೆಪಿ ನಾಯಕರಾದ ಡಾ. ಬಸವರಾಜ್ ಕ್ಯಾವಟರ್ ಹಾಗೂ ಎರಡು ಪಕ್ಷಗಳ ಮುಖಂಡರು ಹಾಜರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago