Breaking News
ಪಿಡಿಓ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ಜರುಗಿಸಿ ಕ್ಷೇಮಾಭಿವೃದ್ಧಿ ಸಂಘ ಒತ್ತಾಯ

Welfare association demands strict action against those who attacked PDO

ಗಂಗಾವತಿ : ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಪಂ ಪಿಡಿಓ ರತ್ನಮ್ಮ ಗುಂಡಣ್ಣನವರ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವವರ ವಿರುದ್ಧ ಸೂಕ್ತ ಕ್ರಮಜರುಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಘಟಕ ಹಾಗೂ ತಾಲೂಕು ನೌಕರರ ಸಂಘದವರು ತಹಸೀಲ್ದಾರ್ ಕಚೇರಿ ಹಾಗೂ
ತಾ.ಪಂ. ಸಹಾಯಕ ನಿರ್ದೇಶಕರಾದ ಮಹಾಂತಗೌಡ ಪಾಟೀಲ್ ಅವರ ಮೂಲಕ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಶನಿವಾರ
ಮನವಿ ಸಲ್ಲಿಸಿದರು.

ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷರಾದ ನಾಗೇಶ ಕುರಡಿ ಅವರು ಮಾತನಾಡಿ, ಹಿರೇಮ್ಯಾಗೇರಿ ಗ್ರಾಪಂ ಮಹಿಳಾ ಪಿಡಿಓ ರತ್ನಮ್ಮ ಗುಂಡಣ್ಣನವರ್ ಅವರ ಮೇಲೆ ಅದೇ ಗ್ರಾಪಂ ಸದಸ್ಯೆ ಶಾಂತಮ್ಮ ಬಂಡಿವಡ್ಡರ್ ಹಾಗೂ ಅವರ ಮಗ ಹಲ್ಲೆ ಮಾಡಿದ್ದಾರೆ. ನಮೂನೆ 9-11ಎ ವಿಷಯವಾಗಿ ಪಿಡಿಓ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ದೈಹಿಕ ಹಲ್ಲೆ ಮಾಡಿದ್ದಾರೆ. ಇಂಥ ಘಟನೆಯಿಂದ ಗ್ರಾಪಂ ಪಿಡಿಓಗಳು ಹಾಗೂ ಅಧಿಕಾರಿಗಳ ಆತ್ಮಸ್ಥೈರ್ಯ ಕುಗ್ಗಿದೆ. ಎಲ್ಲ ಅಧಿಕಾರಿಗಳು ಹಾಗೂ ನೌಕರರಿಗೆ ಕಚೇರಿ ಸಮಯದಲ್ಲಿ ಸೂಕ್ತ ಭದ್ರತೆ ಮತ್ತು ರಕ್ಷಣೆ ವ್ಯವಸ್ಥೆ ಕಲ್ಪಿಸಬೇಕು. ಹಲ್ಲೆ ಮಾಡಿದವರ ಸದಸ್ಯತ್ವ ರದ್ದುಗೊಳಿಸಬೇಕು. ಹಲ್ಲೆಗೈದ ಇತರ ವ್ಯಕ್ತಿಗಳ ಮೇಲೆ ರೌಡಿಶೀಟರ್ ಓಪನ್ ಮಾಡಬೇಕು. ಇವರು ಜೀವಿತಾವಧಿಯಲ್ಲಿ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸಬೇಕು. ಸಂತ್ರಸ್ತ ಪಿಡಿಓ ವಿರುದ್ಧ ಕೌಂಟರ್ ಕೇಸ್ ದಾಖಲಿಸದಂತೆ ಮುನ್ನೆಚ್ಚರಿಕೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

ಆರ್ ಡಿಪಿಆರ್ ಇಲಾಖೆಯ ಎಲ್ಲ ಅಧಿಕಾರಿಗಳು ಮತ್ತು ನೌಕರರಿಗೆ ಕಚೇರಿ ಕೆಲಸಗಳನ್ನು ನೆಮ್ಮದಿಯಿಂದ ನಿರ್ವಹಿಸಲು ಸೂಕ್ತ ವಾತಾವರಣ ನಿರ್ಮಿಸುವಂತೆ ಒತ್ತಾಯಿಸಿದರು.

ವಿವಿಧ ಗ್ರಾ.ಪಂ.ಗಳ ಪಿಡಿಓಗಳಾದ ಸುರೇಶ ಚಲವಾದಿ, ಶಂಷೀರ್ ಅಲಿ, ವಿದ್ಯಾವತಿ, ಇಂದಿರಾ, ವತ್ಸಲಾ, ಕಾರ್ಯದರ್ಶಿಗಳಾದ ರವಿಶಾಸ್ತ್ರಿ, ರವೀಂದ್ರ ಕುಲಕರ್ಣಿ, ಈಶಪ್ಪ, ಕರ್ನಾಟಕ ಸರಕಾರಿ ನೌಕರರ ಸಂಘದ ತಾಲೂಕು ಖಜಾಂಚಿಗಳಾದ ಶ್ರೀನಿವಾಸ್,
ದ್ವಿ.ದ.ಲೆ.ಸ‌. ಪ್ರಶಾಂತ ಹಾಗೂ ತಾಪಂ ಸಿಬ್ಬಂದಿಗಳಾದ ಶಿವಮೂರ್ತಿ ಹಿರೇಮಠ, ಹನುಮೇಶ, ನರೇಗಾ ಸಿಬ್ಬಂದಿಗಳು, ತಾಪಂ ಸಿಬ್ಬಂದಿಗಳು ಇದ್ದರು.

ಬಜೆಟ್ ನಲ್ಲಿ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ,ಗ್ರಾಪಂ ಅಧ್ಯಕ್ಷರಾದ ಮಂಜುಳಾ ಶಿವಪ್ಪ ಹತ್ತಿಮರದ ಮಾಹಿತಿ

Emphasis on all-round development in the budget, Manjula Shivappa Khattimara, president of the village

ವಡ್ಡರಹಟ್ಟಿಯಲ್ಲಿ 2025-26ನೇ ಸಾಲಿನ ಆಯ್ಯವ್ಯಯ ಮಂಡನೆ

ಗಂಗಾವತಿ : ತಾಲೂಕಿನ ವಡ್ಡರಹಟ್ಟಿ ಗ್ರಾಮ ಪಂಚಾಯತ್ ನಲ್ಲಿ ಬುಧವಾರ ನಡೆದ 2025-26ನೇ ಸಾಲಿನ ಆಯ್ಯವ್ಯಯ ಮಂಡನೆ ಮತ್ತು ಅನುಮೋಧನೆ ಸಭೆಯಲ್ಲಿ ಗ್ರಾಪಂ ಅಧ್ಯಕ್ಷರಾದ ಮಂಜುಳಾ ಶಿವಪ್ಪ ಹತ್ತಿಮರದ ಅವರು ಒಟ್ಟು 8 ಕೋಟಿ 90 ಲಕ್ಷ ರೂ. ಬಜೆಟ್ ಮಂಡನೆ ಮಾಡಿದರು.

ಉದ್ಯೋಗ ಖಾತರಿ ಯೋಜನೆಯ (ಮಾನವ ದಿನಗಳ ಸೃಜನೆ ಮತ್ತು ಸಮುದಾಯ ಆಸ್ತಿಗಳ ಸೃಜನೆ) ಸೇರಿ 7 ಕೋಟಿ 30 ಲಕ್ಷ ರೂ., ಸ್ಥಳೀಯ ಸಂಪನ್ಮೂಲ ಸಂಗ್ರಹಣೆಯಾದ 96 ಲಕ್ಷ ರೂ., 15 ನೇ ಹಣಕಾಸು ಅನುದಾನದ 64 ಲಕ್ಷ ರೂ. ಹೀಗೆ ಎಲ್ಲ ಅನುದಾನ ಸೇರಿ ಒಟ್ಟು 8 ಕೋಟಿ 90 ಲಕ್ಷ ರೂ. ಬಜೆಟ್ ಮಂಡನೆ ಮಾಡಲಾಗಿದೆ ಎಂದರು.

ಈ ಬಜೆಟ್ ನ ನಿರೀಕ್ಷಿತ ಅನುದಾನದಲ್ಲಿ ಬಡತನ ನಿರ್ಮೂಲನೆಗೆ ಆಧ್ಯತೆ, ಮಹಿಳಾ ಅಭಿವೃದ್ಧಿ ಮತ್ತು ಸಬಲೀಕರಣ, ಮಕ್ಕಳ ಕಾಳಜಿ ಮತ್ತು ವಿವಿಧ ಜಾಗೃತಿ ಕಾರ್ಯಕ್ರಮಗಳು, ಶಿಕ್ಷಣ ಮತ್ತು ಕ್ರೀಡಾಭಿವೃದ್ಧಿ, ಪರಿಶಿಷ್ಟ ಜಾತಿ. ಪರಿಶಿಷ್ಟ ಪಂಗಡಗಳ ಅಭಿವೃದ್ಧಿ, ಸ್ವಚ್ಛತೆ-ಗ್ರಾಮ ನೈರ್ಮಲಿಕರಣ, ಸುಸ್ಥಿರತೆ, ಕುಡಿಯುವ ನೀರು ಮತ್ತು ನಿರ್ವಹಣೆ, ನಾಗರಿಕ ಸೌಲಭ್ಯಗಳ ಕಾಮಗಾರಿಗಳು, ಉದ್ಯಾನವನಗಳ ಅಭಿವೃದ್ಧಿ ಪಡಿಸುವುದು, ವಿಕಲಚೇನತರ ಅಭಿವೃದ್ಧಿ ಕಾರ್ಯಕ್ರಮ, ಬೀದಿದೀಪ ಅಳವಡಿಕೆ ಮತ್ತು ನಿರ್ವಹಣೆ, ಹಾಗೂ ಇತ್ಯಾದಿ ಕಾರ್ಯಕ್ರಮಗಳಾಗಿವೆ. ಈ ಎಲ್ಲ ವಿಭಾಗಗಳನ್ನು ವಿವಿಧ ಯೋಜನೆ ಹಾಗೂ ಅನುದಾನದಲ್ಲಿ ಹಂಚಿಕೆ ಮಾಡಿಕೊಂಡು ಕಾರ್ಯಕ್ರಮದ ಅನುಷ್ಠಾನಗೊಳಿಸುವ ಗುರಿ ಹೊಂದಲಾಗಿದೆ ಎಂದು ಗ್ರಾಪಂ ಅಧ್ಯಕ್ಷರಾದ ಮಂಜುಳಾ ಹತ್ತಿಮರದ ಅವರು ತಿಳಿಸಿದರು.

ಗ್ರಾಪಂ ಪಿಡಿಓ ಸುರೇಶ ಚಲವಾದಿ ಅವರು ಮಾತನಾಡಿ, ಬಜೆಟ್ ಗೆ ಪೂರಕಾಗಿ ನಿಗದಿತ ಕಾಲಾವಧಿಯಲ್ಲಿ ಸರ್ಕಾರದ ನಿಯಮ ಹಾಗೂ ಗ್ರಾಪಂ ಮಂಡಳಿಯ ತೀರ್ಮಾನದಂತೆ ಕಾರ್ಯಕ್ರಮ ಅನುಷ್ಠಾನ ಮಾಡಲಾಗುವುದು ಎಂದರು.
ಬೇಸಿಗೆ ಕಾಲ ಶುರುವಾಗಿದ್ದು, ಗ್ರಾಪಂ ವ್ಯಾಪ್ತಿಯಲ್ಲಿ ನೀರು ಪೂರೈಸಲು ಸಮಯ ನಿಗಧಿ ಮಾಡಲಾಗುವುದು. ಎಲ್ಲ ನಿವಾಸಿಗಳು ನೀರು ಪೋಲು ಆಗದಂತೆ ಅಗತ್ಯಕ್ಕೆ ತಕ್ಕಂತೆ ಬಳಕೆ ಮಾಡಬೇಕು. ನೀರು ಪೋಲು ಮಾಡುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

((ಬಾಕ್ಸ್ ))
ಸಭೆಯಲ್ಲಿ ವಿವಿಧ ವಿಷಯ ಚರ್ಚೆ
ಬಜೆಟ್ ಮಂಡನೆ ಜೊತೆಗೆ ಸಾಮಾನ್ಯ ಸಭೆಯಲ್ಲಿ ಕುಡಿಯುವ ನೀರಿನ ಚರ್ಚೆ, ಬೇಸಿಗೆ ಎದುರಿಸಲು ಮುಂಜಾಗ್ರತಾ ಕ್ರಮಗಳು, ವಸತಿ, ತೆರಿಗೆ ಪರಿಷ್ಕರಣೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಗ್ರಾಪಂ ಕಾರ್ಯದರ್ಶಿಗಳಾದ ಈಶಪ್ಪ, ಗ್ರಾಪಂ ಉಪಾಧ್ಯಕ್ಷರು, ಸರ್ವಸದಸ್ಯರು, ಎಲ್ಲ ಸಿಬ್ಬಂದಿಗಳು ಹಾಜರು ಇದ್ದರು.