ಕಲ್ಯಾಣಸಿರಿ ವಿಶೇಷ

ಐಐಎಚ್ಎಂಆರ್ ನ 20ನೇ ಸಂಸ್ಥಾಪನಾ ದಿನ : ಆಸ್ಪತ್ರೆ ಮತ್ತು ಆರೋಗ್ಯನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ ಕೋರ್ಸ್ ಆರಂಭ

IIHMR’s 20th Foundation Day: Postgraduate course in Hospital and Healthcare Management launched

ಬೆಂಗಳೂರು; ಪ್ರತಿಷ್ಠಿತ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಮ್ಯಾನೇಜ್‌ಮೆಂಟ್ ರಿಸರ್ಚ್ ನಿಂದ ಹಾರ್ಟ್ ಹೆಲ್ತ್ ಇಂಡಿಯಾ ಫೌಂಡೇಶನ್ ಸಹಯೋಗದಲ್ಲಿ ರೋಗಿ ನಿರ್ವಹಣಾ ವ್ಯವಸ್ಥೆಗೆ ಚಾಲನೆ ಮತ್ತು ಎಂಬಿಎಗೆ ಸರಿ ಸಮಾನವಾಗಿ ಆಸ್ಪತ್ರೆ ಮತ್ತು ಆರೋಗ್ಯ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ ಕೋರ್ಸ್ ಆರಂಭಿಸಲಾಗಿದೆ.
ಐಐಎಚ್ಎಂಆರ್ ನ 20ನೇ ಸಂಸ್ಥಾಪನಾ ದಿನ ಮತ್ತು ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮದಲ್ಲಿ ರೆಡ್ ಹೆಲ್ತ್ ಸಹಯೋಗದಲ್ಲಿ ಭಾರತದ ಪ್ರಥಮ ಮತ್ತು ಏಕೈಕ ಸ್ನಾತಕೋತ್ತರ ಪ್ರೋಗ್ರಾಮ್ ಪ್ರಿ-ಹಾಸ್ಪಿಟಲ್ ಕೇರ್‌ ಕೋರ್ಸ್ ಪ್ರಾರಂಭ ಮಾಡಲಾಗಿದೆ. ಆರೋಗ್ಯ ತಜ್ಞರು ಮತ್ತು ನಿರ್ವಾಹಕರಿಗೆ ಉದ್ಯೋಗಿಗಳ ಕೆಲಸದ ಒತ್ತಡವನ್ನು ಮೌಲ್ಯಮಾಪನ ಮಾಡಲು ಸಹಾಯ ಮಾಡುವ ಪ್ರಯೋಜನ್ ಅಪ್ಲಿಕೇಶನ್ ಗೂ ಸಹ ಚಾಲನೆ ನೀಡಲಾಯಿತು. ಎನ್.ಜಿ. ಎನ್. ಇಂಟರ್ ನ್ಯಾಶನಲ್ ನ ಕಾರ್ಯನಿರ್ವಾಹಕ ನಿರ್ದೇಶಕ
ಡಾ. ರಾಮ್ ಮಿಲನ್ ಶುಕ್ಲಾ, ಐಐಎಚ್ಎಂಆರ್ ನ ಹಿರಿಯ ಸಲಹೆಗಾರರಾದ ಡಾ. ಕೇದಾರ್ ಸಿ. ಎಸ್, ಐಐಎಚ್ಎಂಆರ್ ಸೊಸೈಟಿಯ ಟ್ರಸ್ಟಿ ಕಾರ್ಯದರ್ಶಿ, ಡಾ.ಎಸ್.ಡಿ.ಗುಪ್ತಾ, ಐಐಎಚ್ಎಂಆರ್ ಬೆಂಗಳೂರು ನಿರ್ದೇಶಕರಾದ ಡಾ.ಉಷಾ ಮಂಜುನಾಥ್, ಡೀನ್ ಡಾ. ಜೇಸನ್ ಡಿ. ಉಗರ್ಗೋಲ್, ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಡಾ. ದೀಪಶ್ರೀ ಎಂ.ಆರ್ ಸಮ್ಮುಖದಲ್ಲಿ ಹೊಸ ಕೋರ್ಸ್ ಗಳನ್ನು ಶುಭಾರಂಭ ಮಾಡಲಾಯಿತು.
ದಕ್ಷಿಣ ಭಾರತದಲ್ಲಿ ಆರೋಗ್ಯ, ಆಸ್ಪತ್ರೆ ನಿರ್ವಹಣೆ, ಸಂಶೋಧನೆ ಮತ್ತು ತರಬೇತಿಯಲ್ಲಿ ನೀಡಿದ ಕೊಡುಗೆಗಳಿಗೆ ಹೆಸರುವಾಸಿಯಾದ ಐಐಎಚ್ಎಂಆರ್ ನ್ಯಾಕ್ ಶ್ರೇಣಿಯ ಎ ಮಾನ್ಯತೆ ಪಡೆದುಕೊಂಡಿದೆ. ಆರೋಗ್ಯ ನಿರ್ವಹಣಾ ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಶ್ರೇಷ್ಠತೆಯನ್ನು ಸಾಧಿಸಿರುವ ಜೊತೆಗೆ ಬಿ-ಸ್ಕೂಲ್ ಎಂಬ ಮಾನ್ಯತೆಯನ್ನು ಪಡೆದುಕೊಂಡಿದೆ. ಈ ಕೋರ್ಸ್ ಗಳಿಗೆ ಎಐಸಿಟಿಇ ಮತ್ತು ಎನ್.ಬಿ.ಎ ಮಾನ್ಯತೆ ದೊರೆತಿದ್ದು, ಎನ್.ಎ.ಬಿ.ಇಟಿ ಮಾನ್ಯತೆ ಪಡೆದ ಭಾರತದ ಮೊದಲ ಶಿಕ್ಷಣ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
%%$

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

15 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

15 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

16 hours ago