Breaking News

ತುಂಬಳಮಂ ಬಳಿ ಸಾರಿಗೆ ಬಸ್ ಮತ್ತು ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಸ್ಥಳದಲ್ಲೇ ಮೃತ

Five people died on the spot in a head-on collision between a transport bus and two bikes near Thumbalaman.

Screenshot 2025 03 11 20 27 42 93 40deb401b9ffe8e1df2f1cc5ba480b12

ರಾಯಚೂರು : ಮಂಗಳವಾರ ಆದೊನಿ ಸಮೀಪ ಪೆದ್ದ ತುಂಬಳಮಂ ಬಳಿ ಸಾರಿಗೆ ಬಸ್ ಮತ್ತು ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ

ಮಂಗಳವಾರ (ಮಾ.11) ಗಂಗಾವತಿಯಿಂದ ಆಂಧ್ರದ ಕರ್ನೂಲ್ ಜಿಲ್ಲೆಯ ಆದೋನಿಗೆ ತೆರಳುವಾಗ ಎದುರಿಗೆ ಅದೋನಿಯಿಂದ ಬಂದ ಎರಡು ಬೈಕ್‌ಗಳು ಪೆದ್ದ ತುಂಬಳಮಂ ಬಳಿ ಡಿಕ್ಕಿ ಹೊಡೆದ ಪರಿಣಾಮವಾಗಿ ಈ ದುರ್ಘಟನೆ ಸಂಭವಿಸಿದೆ.

ಈ ಅಪಘಾತದಲ್ಲಿ ಎರಡು ಬೈಕ್‌ನಲ್ಲಿದ್ದ ಒಟ್ಟು 5 ಜನ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ ಎಂದು ವರದಿಯಾಗಿದೆ.

ಬಸ್‌ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ

ಈ ಅಪಘಾತದಲ್ಲಿ ಎರಡು ಬೈಕ್‌ನಲ್ಲಿದ್ದ ಒಟ್ಟು 5 ಜನ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ ಎಂದು ವರದಿಯಾಗಿದೆ.

ಬಸ್‌ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಈ ಅಪಘಾತದಲ್ಲಿ ರಾಯಚೂರು ಮೂಲದ ಇಬ್ಬರು ಹಾಗು ಕರ್ನುಲ್ ಜಿಲ್ಲೆಯ ಆದೋನಿ ಮೂಲದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ, ಮತ್ತೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾನೆ.

ಅಪಘಾತದ ಕುರಿತು ಆಂಧ್ರಪ್ರದೇಶದ ಆದೋನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About Mallikarjun

Check Also

ಡಿ. 10 ರಂದು ಎಸ್.ಸಿ.ಪಿ., ಟಿ.ಎಸ್.ಪಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಡಿ. 10 ರಂದು ಎಸ್.ಸಿ.ಪಿ., ಟಿ.ಎಸ್.ಪಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ Progress review meeting of SCP, TSP …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.