The Gangavathi Municipal Commissioner has not responded to the organization’s complaint even after months have passed.
ಗಂಗಾವತಿ: ಗಂಗಾವತಿ ನಗರದಲ್ಲಿ ಅನೇಕ ಜಾಗಗಳು ನಗರಸಭೆ ವ್ಯಾಪ್ತಿಗೆ ಒಳಪಡುತ್ತಿದ್ದು ಅಂತಹ ಜಾಗಗಳನ್ನು ಪ್ರಬಲ ವ್ಯಕ್ತಿಗಳು ತಮ್ಮ ಸ್ವಂತಕ್ಕಾಗಿ ಮತ್ತು ಖಾಸಗಿ ವ್ಯಾಪಾರಕ್ಕಾಗಿ ತಮ್ಮ ಸ್ವಾಧೀನದಲ್ಲಿ ತೆಗೆದುಕೊಂಡು ವ್ಯಾಪಾರ ವ್ಯವಹಾರ ನಡೆಸುತ್ತಿದ್ದು ನಗರಸಭೆಗೆ ಬರುವಂತಹ ದುಡ್ಡನ್ನು ತಮ್ಮ ಸ್ವಂತಕ್ಕೆ ಬಳಸುತ್ತಿದ್ದು ಇದಕ್ಕೆ ನಗರಸಭೆಗೆ ತುಂಬಾ ನಷ್ಟ ಉಂಟಾಗುತ್ತಿದೆ ಎಂದು ದಲಿತ ಸಂಘಟನಾ ಸಮಿತಿ ಭೀಮಘರ್ಜನೆ ಸಂಘಟನೆಯ ಜಿಲ್ಲಾಧ್ಯಕ್ಷ ಅಜಯಕುಮಾರ ಚಲುವಾದಿ ಆಕ್ರೋಶ ವ್ಯಕ್ತಪಡಿಸಿದರು.
ಗಂಗಾವತಿ ನಗರದಲ್ಲಿ ನಗರಸಭೆಗೆ ಒಳಪಡುವಂತಹ ಜಾಗಗಳು ಮತ್ತು ನಗರದಲ್ಲಿ ನಡೆಯುವ ಕೆಲವೊಂದು ದುರ್ಘಟನೆಗಳ ಬಗ್ಗೆ ನಮ್ಮ ದಲಿತ ಸಂಘಟನಾ ಸಮಿತಿ ಭೀಮಘರ್ಜನೆ ವತಿಯಿಂದ ಪೌರಾಯುಕ್ತರಿಗೆ ಅನೇಕ ಬಾರಿ ದೂರು ಸಲ್ಲಿಸಿದರೂ ಯಾವುದೇ ದೂರಿಗೆ ಸ್ಪಂದಿಸದೆ ಮತ್ತು ಯಾವುದೇ ಒಂದು ಹಿಂಬರಹವನ್ನು ನೀಡುತ್ತಿಲ್ಲ. ಗಂಗಾವತಿ ನಗರಸಭೆಗೆ ನಷ್ಟ ಉಂಟಾಗುತ್ತಿರುವ ಬಗ್ಗೆ ಪೌರಾಯುಕ್ತರ ಗಮನಕ್ಕೆ ತಂದರೂ ಸಹ ಯಾವುದೇ ಕ್ರಮ ಜರುಗಿಸದೆ ಸುಮ್ಮನಿರುವುದು ಕೆಲವೊಂದು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆ ಸಂಘಟನೆ ನೀಡಿದ ದೂರುಗಳಿಗೆ ಇನ್ನು ಒಂದು ವಾರದಲ್ಲಿ ಸ್ಪಂದಿಸದೆ ಹೋದಲ್ಲಿ ಗಂಗಾವತಿಯ ನಗರಸಭೆಯ ಪೌರಾಯುಕ್ತರ ವಿರುದ್ಧ ನಗರಸಭೆಯ ಮುಂದೆ ಉಗ್ರವಾದ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ದಲಿತ ಸಂಘಟನಾ ಸಮಿತಿ ಒತ್ತಾಯಿಸುತ್ತದೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…