ಕಲ್ಯಾಣಸಿರಿ ವಿಶೇಷ

ಕಿನ್ನಾಳ ಕಾಮನಕಟ್ಟೆ ಗೆಳೆಯರ ಬಳಗದಿಂದ ಅದ್ಧೂರಿ ಹೋಳಿ ರಂಗೋತ್ಸವ.!


A grand Holi performance by Kinna’s Kamanakatte friends

ವರದಿ : ಪಂಚಯ್ಯ ಹಿರೇಮಠ.
ಕಲ್ಯಾಣಸಿರಿ ವಾರ್ತೆ ಕೊಪ್ಪಳ.
ಕೊಪ್ಪಳ. ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಕಾಮನಕಟ್ಟೆ ಗೆಳೆಯರ ಬಳಗದಿಂದ ಹೋಳಿ ಹಬ್ಬದ ನಿಮಿತ್ಯ ಅದ್ಧೂರಿ ರಂಗೋತ್ಸವ ಆಯೋಜನೆ ಮಾಡಿದರು.

ಕೆಡುಕನ್ನು ಸುಡುವ ಬಣ್ಣದ ಹಬ್ಬ, ಹೋಳಿಯ ಮಹತ್ವವೇನು? ಬಿಳಿ ಬಣ್ಣದ ಬಟ್ಟೆ ಧರಿಸುವುದು ಏಕೆ?

ಎಂದು ಕಾಮನಕಟ್ಟೆ ಗೆಳೆಯರ ಬಳಗದ ಅಧ್ಯಕ್ಷ ವಿರೇಶ ನಾಯಕ (ಸಿದ್ದಾರೋಡ) ಮಾತನಾಡಿ ಹೋಳಿ ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದಾಗಿದ್ದು. ಇದನ್ನು ದೇಶಾದ್ಯಂತ ಬಹಳ ವಿಜೃಂಬಣೆಯಿಂದ ಆಚರಿಸಲಾಗುತ್ತದೆ. ಹೋಳಿ ಹಬ್ಬ ಬಣ್ಣಗಳಿಂದ ಕೂಡಿರುವುದರಿಂದ ಎಲ್ಲರೂ ಪ್ರೀತಿಸುತ್ತಾರೆ. ಈ ಬಣ್ಣದ ಹಬ್ಬವು ಚಿಕ್ಕವರಿಂದ ಹಿಡಿದು ದೊಡ್ಡವರವರೆಗೂ ಅಚ್ಚುಮೆಚ್ಚು. ಹಾಗಾಗಿ ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ ಎಂದರು.

ಬಣ್ಣಗಳ ಹಬ್ಬ ಎಂದೂ ಕರೆಯಲ್ಪಡುವ ಹೋಳಿಯನ್ನು ಸಾಂಪ್ರದಾಯಿಕವಾಗಿ ಫೆಬ್ರವರಿ ಕೊನೆಯಲ್ಲಿ ಅಥವಾ ಮಾರ್ಚ್ ಆರಂಭದಲ್ಲಿ ಆಚರಿಸಲಾಗುತ್ತದೆ.

ಹೋಳಿಯು ವಸಂತಕಾಲದ ಆಗಮನ ಮತ್ತು ಚಳಿಗಾಲದ ಅಂತ್ಯವನ್ನು ಸೂಚಿಸುತ್ತದೆ. ಇದು ಹಿಂದೂ ತಿಂಗಳ ಫಾಲ್ಗುಣದೊಂದಿಗೆ ಸಂಬಂಧವನ್ನು ಹೊಂದಿದೆ. ಈ ದಿನ ಜನರು ತಮ್ಮ ದುಃಖ, ನೋವುಗಳನ್ನು ಮರೆತು ಎಲ್ಲರೂ ಒಂದಾಗಿ ಬಣ್ಣಗಳಿಂದ ಹೋಳಿಯನ್ನು ಸಂಭ್ರಮಿಸುತ್ತಾರೆ.

ಹೋಳಿ ಹಬ್ಬವನ್ನು ಆಚರಿಸುವುದರಿಂದ ವಿವಿಧ ಭಯಗಳನ್ನು ದೂರ ಮಾಡಬಹುದು ಎಂಬ ನಂಬಿಕೆಯಿದೆ. ಹೋಳಿ ಹಬ್ಬದ ದಿನದಂದು ಬೆಳಿಗ್ಗೆ, ಜನರು ತೆರೆದ ಸ್ಥಳಗಳು, ಉದ್ಯಾನವನಗಳು ಮತ್ತು ಬೀದಿಗಳಲ್ಲಿ ಸ್ನೇಹಿತರನ್ನು, ಪ್ರೀತಿ ಪಾತ್ರರನ್ನು ಭೇಟಿ ಮಾಡುವ ಮೂಲಕ ಬಣ್ಣವನ್ನು ಎರಚಿಕೊಳ್ಳುತ್ತಾರೆ. ಹೋಳಿ ಹಬ್ಬದ ಪ್ರಮುಖ ಅಂಶವೆಂದರೆ ಅದು ಸೌಹಾರ್ದತೆಯಾಗಿದೆ. ಈ ದಿನದಂದು, ಎಲ್ಲಾ ವರ್ಗದ ಜನರು ಆಚರಣೆಗಳಲ್ಲಿ ಸೇರುವುದರಿಂದ ಸಾಮಾಜಿಕ ಅಡೆತಡೆಗಳು ದೂರಾಗುತ್ತದೆ ಎಂದು ಅದರ ಮಹತ್ವ ತಿಳಿಸಿದರು.

ಇದರಿಂದ ಪ್ರೀತಿಯು ಪರಸ್ಪರ ಹೆಚ್ಚಾಗುತ್ತದೆ. ಅಪರಿಚಿತರು ಸ್ನೇಹಿತರಾಗುತ್ತಾರೆ ಎಂದರು

ಈ ಸಂಧರ್ಭದಲ್ಲಿ ಕಾಮನಕಟ್ಟೆ ಗೆಳೆಯರ ಬಳಗದ ಪದಾಧಿಕಾರಿಗಳು ಉಪಾಧ್ಯಕ್ಷ ವೀರೇಶ್ ಪಾಂಡಪ್ಪ  ವಾಲ್ಮೀಕಿ ,ಸಚಿನ್ ಮೇಣದಾಳ , ರಾಜಶೇಖರ್, ವೀರೇಶ್ ದೇವಿ, ರೆಡ್ಡಿ ಪ್ರವೀಣ, ವಾಲ್ಮೀಕಿ ಸಂತೋಷ್, ಚಂಡಿ ಶಂಕರ್ ದೇವಿ, ಲಕ್ಷ್ಮಿಕಾಂತ್ ದೇವಿ, ನಾಗರಾಜ್ ಅರ್ತಿ, ಸಂತೋಷ್ ಅರೇರ್, ಪವನ್ ಆರೇರ್, ಪ್ರಶಾಂತ್ ಕುಲಕರ್ಣಿ, ಬಸವರಾಜ್ ಕುರಿ, ಅರುಣ್ ವಾಲ್ಮೀಕಿ, ನಾಗರಾಜ್ ಬಾಂಗಡಿ, ನಾಗರಾಜ್ ಗುಡ್ಲಾನೂರ್, ಮುತ್ತು ಬಂಕಾ, ಹಾಗೂ ಇತರರೆಲ್ಲರೂ ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

5 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

5 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

6 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

6 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

6 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

6 hours ago