ಕಲ್ಯಾಣಸಿರಿ ವಿಶೇಷ

ದಲಿತರ ಮೇಲಿನ ದೌರ್ಜನ್ಯಪ್ರಕರಣಗಳಲ್ಲಿ ದಲಿತರಿಗೆ ಸರ್ಕಾರದಿಂದ ಪರಿಹಾರಹಾಗೂಸೌಲಭ್ಯ ಒದಗಿಸಲುಒತ್ತಾಯ: ನಿರುಪಾದಿ ಬೆಣಕಲ್

Demand for government to provide compensation and facilities to Dalits in cases of atrocities against Dalits: Nirupadi Benakal

ಗಂಗಾವತಿ: ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು ಎಂದು ಹೆಳಿದ ಡಾ. ಬಾಬಾಸಾಹೇಬ ಅಂಬೇಡ್ಕರ್‌ರವರ ಮಾತು ಈಗ ಸರಿಯಾಗಿ ಜಾರಿಯಾಗುತ್ತಿಲ್ಲ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲುಕಿನ ಮರಕುಂಬಿ ಗ್ರಾಮದಲ್ಲಿ ೨೦೦೦ನೇ ಇಸ್ವಿಯಿಂದ ದಲಿತರ ಬದುಕು ನರಕವಾಗಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ದ ಕೊಪ್ಪಳ ಜಿಲ್ಲಾ ಕಾರ್ಯದರ್ಶಿ ನಿರುಪಾದಿ ಬೆಣಕಲ್ ಪ್ರಕಟಣೆಯಲ್ಲಿ ಖೇದ ವ್ಯಕ್ತಪಡಿಸಿದರು.
ಅವರು ಮಾರ್ಚ್-೧೪ ಶುಕ್ರವಾರ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳಲ್ಲಿ ದಲಿತರಿಗೆ ಪರಿಹಾರ ಹಾಗೂ ಇತರ ಬೇಡಿಕಗಳಿಗೆ ಒತ್ತಾಯಿಸಿ ಗಂಗಾವತಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು. ಈ ಹಿಂದೆ ೨೦೦೨ ರಲ್ಲಿ ದಲಿತರನ್ನು ಕಂಬಕ್ಕೆ ಕಟ್ಟಿ ಹಾಕಿ ರಾತ್ರಿ ಥಳಿಸಲಾಗಿತ್ತು. ಆಗ ಐದು ಜನರಿಗೆ ಅಲ್ಪ-ಸ್ವಲ್ಪ ಹಣ ಪರಿಹಾರವಾಗಿ ಬಂದಿತ್ತು. ದಲಿತರ ಮೂಲಭೂತ ಸಮಸ್ಯೆಯಾದ ಮನೆ, ನಿವೇಶನ ಯೋಜನೆ, ಭೂ ಒಡೆತನ ಯೋಜನೆ ಅಡಿಯಲ್ಲಿ ಸಾಗುವಳಿ ಮಾಡಲು ಭುಮಿ, ಉದ್ಯೊಗ ಇವು ಯಾವುದೂ ಸಿಗಲಿಲ್ಲ, ಹಲವಾರು ಸಲ ಹೋರಾಟ ನಡೆಸಿದರೂ ಯಾವುದೇ ಪ್ರಯೋಜನೆವಾಗಲಿಲ್ಲ. ಪುನಃ ೨೦೧೪ರಲ್ಲಿ ದಲಿತರ ಮೇಲೆ ಹಲ್ಲೆ, ದೌರ್ಜನ್ಯ, ದಬ್ಬಾಳಿಕೆ ನಡೆದು ಕೆಲವು ಮನೆಗಳನ್ನೇ ಬೆಂಕಿ ಹಚ್ಚಿ ಸುಟ್ಟರು, ದಲಿತರನ್ನು ಜೀವಂತ ಸುಡಬೇಕೆಂಬ ಹುನ್ನಾರ ನಡೆಸಿದ್ದರು. ಅದೃಷ್ಟವಶಾತ್ ಪ್ರಾಣ ಹಾನಿಯಾಗಲಿಲ್ಲ, ಯಾಕೆ ದಲಿತರ ಮೇಲೆ ಈ ರೀತಿ ದಬ್ಬಾಳಿಕೆ ಎಂದು ಕೇಳುವಂತಿಲ್ಲ. ದಲಿತರು ಕ್ಷೌರದ ಅಂಗಡಿ ಮತ್ತು ಹೋಟೆಲ್ ಪ್ರವೇಶವನ್ನು ಬಯಸಿದ್ದೇ ದೊಡ್ಡ ತಪ್ಪಾಗಿದೆ ಎನ್ನುವ ಹಾಗಾಗಿದೆ. ಈ ಹಿಂದೆ ಸವರ್ಣಿಯರು ದಲಿತರೊಂದಿಗೆ ಸೌಹಾರ್ದವಾಗಿ ಇರುವಂತೆ ನಾಟಕ ಮಾಡಿದ್ದರು. ಆದರೆ ಅವರ ಮನಸ್ಸಿನಲ್ಲಿ ದ್ವೇಷ ಕಡಿಮೆಯಾಗಿಲ್ಲ, ಎಲ್ಲರೊಂದಿಗೆ ಹೊಂದಾಣಿಕೆಯಾಗಿ ಬಾಳಬೇಕೆಂಬ ಸಂಘಟನೆಯ ಮತ್ತು ದಲಿತರ ಕನಸು ನನಸಾಗಿಲ್ಲ. ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಗಮನಹರಿಸಿ ಮರಕುಂಬಿಯ ದಲಿತರಿಗೆ ಮನೆ ನಿವೇಶನ ಕೊಡಬೇಕು, ಅಂಬೇಡ್ಕರ ವಸತಿ ಯೊಜನೆಯಡಿಯಲ್ಲಿ ಗುಂಪು ನಿರ್ಮಾಣ ಮಾಡಿ ದೌರ್ಜನ್ಯಕ್ಕೊಳಗಾದ ಎಲ್ಲಾ ದಲಿತ ಕುಟುಂಬಗಳಿಗೆ ಪರಿಹಾರ ನೀಡಬೇಕು, ಭೂ ಒಡೆತನ ಯೋಜನೆ ಅಡಿಯಲ್ಲಿ ಎಲ್ಲಾ ದಲಿತರಿಗೆ ಸಾಗುವಳಿ ಮಾಡಲು ನೀರಾವರಿ ಭೂಮಿಯನ್ನು ಮಂಜೂರು ಮಾಡಬೇಕು, ದಲಿತ ನಿರುದ್ಯೋಗ ಯುವಕ-ಯುವತಿಯರಿಗೆ ಸರ್ಕಾರಿ ನೌಕರಿ ಕೊಡಬೇಕು, ದಲಿತರ ಜೀವನ ನಿರ್ವಹಣೆಗೆ ಬಡ್ಡ ರಹಿತ ನೇರ ಸಾಲ ನೀಡಬೇಕು, ಮರಕುಂಬಿ ಗ್ರಾಮಕ್ಕೆ ಬಸ್ ಸೌಲಭ್ಯ ಒದಗಿಸಿ ಕೇಸರಹಟ್ಟಿ ಯಿಂದ ಮರಕುಂಬಿ ಗ್ರಾಮದವರೆಗೆ ರಸ್ತೆ ನಿರ್ಮಾಣ ಮಾಡಬೇಕು, ದೌರ್ಜನ್ಯಕ್ಕೊಳಗಾದ ದಲಿತ ಕುಟುಂಬಗಳ ಮಕ್ಕಳಿಗೆ ವಿದ್ಯಭ್ಯಾಸಕ್ಕಾಗಿ ಮುರಾರ್ಜಿ ವಸತಿ ಶಾಲೆಯಲ್ಲಿ ಮತ್ತು ಹಾಸ್ಟೇಲ್ ವ್ಯವಸ್ಥೆ ಮಾಡಬೇಕು, ದಲಿತರ ಕೇರಿಯಲ್ಲಿ ಅಂಬೇಡ್ಕರ ಸಮುದಾಯ ಭವನ ನಿರ್ಮಾಣ ಮಾಡಬೇಕು, ಹಲ್ಯೆಗೊಳಗಾದ ದಲಿತ ಕುಟುಂಬದವರಿಗೆ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಹಾಸ್ಟೇಲ್‌ನಲ್ಲಿ ಅಡುಗೆ ಕೆಲಸ ನೀಡಬೇಕು, ಮರಕುಂಬಿ ಪ್ರಕರಣದಲ್ಲಿ ಮನೆ ಕಳೆದುಕೊಂಡ ಫಲಾನುಭವಿಗಳಿಗೆ ಮನೆ ನಿರ್ಮಾಣ ಮಾಡಿಕೊಡಬೇಕು ಎಂಬುದು ನಮ್ಮ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಯ ಒತ್ತಾಯವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಸಮಿತಿಯ ಸದಸ್ಯರಾದ ಬಸವರಾಜ ಮರಕುಂಬಿ, ಗಂಗಾವತಿ ತಾಲೂಕ ಕಾರ್ಯದರ್ಶಿ ಹುಸೇನಪ್ಪ ಕೆ., ಶಾಖಾ ಕಾರ್ಯದಶಿ ಹುಲುಗಪ್ಪ ಮರುಕುಂಬಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
ª

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

7 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

7 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

7 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

7 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

7 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

7 hours ago