ಕಲ್ಯಾಣಸಿರಿ ವಿಶೇಷ

ನಧಾಫ್ ಪಿಂಜಾರ್ ಸಮುದಾಯಗಳಿಗೆ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹ,,

Demand to provide basic facilities to Nadaf Pinjar communities,

ವರದಿ : ಪಂಚಯ್ಯ ಹಿರೇಮಠ.

ಕಲ್ಯಾಣ ಸಿರಿ ವಾರ್ತೆ ಕೊಪ್ಪಳ.
ಕುಕನೂರು : ಪ್ರಸಕ್ತಸಾಲಿನ ಬಜೆಟ್ ನಲ್ಲಿ ನದಾಫ್ ಪಿಂಜಾರ ಸಮುದಾಯಗಳ ನಿಗಮ ಮಂಡಳಿಗೆ ಯಾವುದೇ ಅನುದಾನ ನೀಡದೇ ಇರುವುದು ನಮ್ಮ ಸಮುದಾಯವನ್ನು ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಾಜ್ಯ ನದಾಫ್ ಪಿಂಜಾರ್ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸಿರಾಜುದ್ದಿನ್ ಕೊಪ್ಪಳ ಹೇಳಿದರು.

ಅವರು ಪಟ್ಟಣದ ನಿರೀಕ್ಷಣಾ ಮಂದಿರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ
ರಾಜ್ಯದಲ್ಲಿ ನದಾಫ್, ಪಿಂಜಾರ ಸಮುದಾಯದಲ್ಲಿ ಒಟ್ಟು 13 ಉಪಜಾತಿ ಸಮುದಾಯಗಳಿದ್ದು ಸುಮಾರು 25 ಲಕ್ಷ ಜನಸಂಖ್ಯೆ ಇದೆ, ನಮ್ಮ ಜನಾಂಗದವರ ಕುಲ ಕಸುಬು ಹತ್ತಿಯಿಂದ ಹಾಸಿಗೆ, ದಿಂಬು, ಹಗ್ಗ, ಕಣ್ಣಿ ಇತ್ಯಾದಿ ಉತ್ಪನ್ನಗಳನ್ನು ಮಾಡಿ ಜೀವನೋಪಾಯ ಮಾಡುತ್ತಿದ್ದೇವೆ. ನಮ್ಮ ಸಮಾಜದವರು ಅರೆ ಅಲೆಮಾರಿಗಳಾಗಿದ್ದು, ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಾಗೂ ಸಾಮಾಜಿಕವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿರುತ್ತದೆ ಆದರೂ ನಮ್ಮ ಸಮುದಾಯವನ್ನು ಕಡೆಗಣಿಸಲಾಗಿದೆ ಎಂದರು.

ನಂತರ ಕುಕನೂರು ತಾಲೂಕಾಧ್ಯಕ್ಷ ದಸ್ತಗಿರಸಾಬ ರಾಜೂರ ಮಾತನಾಡಿ, ನಮ್ಮ ಸಮಾಜ ಅತ್ಯಂತ ಹಿಂದುಳಿದ ಸಮಾಜವೆಂದು ಸರ್ಕಾರ ಗುರುತಿಸಿ, 1993 ರಲ್ಲಿ ವೃತ್ತಿ ಆಧಾರದ ಮೇಲೆ ಪ್ರವರ್ಗ-1 ರಲ್ಲಿ ಮೀಸಲಾತಿಯನ್ನು ನೀಡಿತ್ತು. ಪ್ರವರ್ಗ-1 ರಲ್ಲಿ ಇತರೆ 117 ಜಾತಿಯವರೊಂದಿಗೆ ಶೇರ್ ಮಾಡಿ ಶೇ.4 ರ ಒಟ್ಟು ಮೀಸಲಾತಿಯಲ್ಲಿ ಸರಕಾರಿ ಹುದ್ದೆಗೆ ಆಯ್ಕೆಯಾಗುವುದು ಕಷ್ಟಸಾಧ್ಯವಾಗಿದ್ದು ನದಾಫ್, ಪಿಂಜಾರ ಜನಾಂಗದವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

2023 ರಲ್ಲಿ ಸರ್ಕಾರ ಹಿಂದುಳಿದ ವರ್ಗಗಳ ಪ್ರವರ್ಗ-1 ರ ನದಾಫ್, ಪಿಂಜಾರ ಹಾಗೂ ಇತರೆ 13 ಜಾತಿಗಳ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಆದೇಶವಾಗಿರುತ್ತದೆ. ಕಳೆದ 02 ವರ್ಷಗಳಿಂದ ಸಂಬಂಧಪಟ್ಟ ಸಚಿವರಿಗೆ ಅನೇಕ ಬಾರಿ ಮನವಿಗಳನ್ನು ಸಲ್ಲಿಸಿದರು ಪ್ರಯೋಜನವಾಗಿಲ್ಲಾ ಎಂದರು.

2024 ರಲ್ಲಿ ಹಾಗೂ 18.02 2025 ರಂದು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ 2025-26 ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯನ್ನು ಮುಖ್ಯಮಂತ್ರಿಗಳವರ ಅಧ್ಯಕ್ಷತೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಸಂಘಟನೆಗಳು ಹಾಗೂ ಮುಖಂಡರುಗಳೊಂದಿಗೆ ನಡೆದ ಸಭೆಯಲ್ಲಿ ಸಹ ಭಾಗಿಯಾಗಿ ವಿಷಯವನ್ನು ಪ್ರಸ್ತಾಪಿಸಲಾಗಿತ್ತು ಹಾಗೂ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಲಾಗಿತ್ತಾದರು ಪರಿಗಣಿಸದೇ ಯಾವುದೇ ಅನುದಾನ ನೀಡಿಲ್ಲಾ ಆದ್ದರಿಂದ ನಮ್ಮ ಸಮುದಾಯಗಳಿಗೆ ಮಾನ್ಯ ಮುಖ್ಯಮಂತ್ರಿಗಳು ನ್ಯಾಯ ದೊರಕಿಸಿಕೋಡಬೇಕು ಎಂದು ಆಗ್ರಹಿಸಿದರು.

ಒಂದು ವೇಳೆ ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ಮೂಲಕ ಗಮನ ಸೆಳೆಯಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಯಲಬುರ್ಗಾ ತಾಲೂಕಾಧ್ಯಕ್ಷ ಎಮ್.ಎಫ್ ನದಾಫ್, ಜಾಕೀರ್ ಹುಸೇನ್ ಕೊಪ್ಪಳ, ವಜೀರಸಾಬ ತಳಕಲ್, ಖಾಜಾಸಾಬ ನದಾಫ್, ಹುಸೇನ್ ಸಾಬ ನೂರಬಾಷಾ, ರಿಜ್ವಾನ ನದಾಫ್, ರಜಾಕ್ ಇಲಕಲ್, ಶಂಸದಾ ಬೇಗಂ, ರಜೀಯಾ ಬೇಗಂ ಸೇರಿದಂತೆ ಇನ್ನಿತರರು ಇದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

9 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

9 hours ago