ಕಲ್ಯಾಣಸಿರಿ ವಿಶೇಷ

ಹೊಸಕೇರಾ ಗ್ರಾಮ ಪಂಚಾಯಿತಿವ್ಯಾಪ್ತಿಯಲ್ಲಿಬರುವಕೋಟಯ್ಯಕ್ಯಾಂಪ್ ಗ್ರಾಮದಲ್ಲಿ ಅಕ್ರಮ ಮಧ್ಯಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ.

Protest demanding an end to illegal middlemen in Kotayya Camp village, which falls under the jurisdiction of Hosakera Gram Panchayat.

ಗಂಗಾವತಿ: ಇಂದು ತಾಲೂಕಿನ ಹೊಸಕೇರಾ ಗ್ರಾಮ ಪಂಚಾಯತಿ ಕಾರ್ಯಾಲಯ ಮುಂದೆ ಕೋಟಯ್ಯಕ್ಯಾಂಪಿನ ಗ್ರಾಮಸ್ಥರಿಂದ, ಗ್ರಾಮದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮ ಮಧ್ಯ ಮಾರಾಟ ಮಾಡಲಾಗುತ್ತಿದೆ. ಪ್ರತಿನಿತ್ಯ ರಾತ್ರಿ ಹೊತ್ತು ಓಡಾಡುವಾಗ ಮಹಿಳೆಯರು ಮಕ್ಕಳು ಇರುತ್ತಾರೆ. ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆ ಉಂಟಾಗುತ್ತಿದೆ. ಕುಡಿದ ಅಮಲಿನಲ್ಲಿ ಅವಾಚ್ಯ ಶಬ್ದಗಳಿಂದ ಬೈಯ್ಯುತ್ತಾ ಹಾಗೂ ಗ್ರಾಮದಲ್ಲಿ ಡಬ್ಬಿ ಅಂಗಡಿ ಹಾಗೂ ಕಿರಾಣಿ ಅಂಗಡಿಗಳಲ್ಲಿ ಹೋಟೆಲ್‌ಗಳಲ್ಲಿ ಮಧ್ಯ ಮಾರಾಟ ದಂಧೆ ಅಕ್ರಮವಾಗಿ ನಡೆಯುತ್ತದೆ. ಈಗಾಗಲೇ ಸಾಕಷ್ಟು ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರೂ ಯಾವುದೇ ಕ್ರಮ ಜರುಗಿಸಿರುವುದಿಲ್ಲ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹೊಸಕೇರಾ ಡಗ್ಗಿ, ಹೊಸಕೇರಾ ಕ್ಯಾಂಪ್, ಸವಳ ಕ್ಯಾಂಪ್ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅಕ್ರಮ ಮಧ್ಯ ಮಾರಾಟ ಹೆಚ್ಚಾಗಿ ನಡೆಯುತ್ತಿದೆ ಆದ್ದರಿಂದ ಇಂದು ಪ್ರತಿಭಟನೆ ಮೂಲಕ ಮಾನ್ಯ ತಸಿಲ್ದಾರರಿಗೆ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಮುಖಾಂತರ ಹೋರಾಟದ ಮೂಲಕ ಮನವಿ ಪತ್ರ ಸಲ್ಲಿಸಿ, ಆದಷ್ಟು ಬೇಗನೆ ನಮ್ಮ ಗ್ರಾಮಗಳಲ್ಲಿ ಮಧ್ಯ ಮಾರಾಟವನ್ನು ನಿಲ್ಲಿಸಬೇಕೆಂದು ಮಹಿಳೆಯರು ಹಾಗೂ ಯುವಕರು ಗ್ರಾಮದ ಸಾರ್ವಜನಿಕರು ಒತ್ತಾಯಿಸಿ ಮಹಿಳೆಯರಿಗೆ ಮಕ್ಕಳಿಗೆ ರಕ್ಷಣೆ ಕೊಡಿ ಎಂದು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಕಿರಣ್‌ಕುಮಾರ್ ರವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಸದಸ್ಯರಾದ ಶ್ರೀನಿವಾಸ್, ಶಿವಕುಮಾರ ಪಾಟೀಲ್, ಗ್ರಾಮ ಪಂಚಾಯಿತಿ ಸಿಬ್ಬಂದಿಗಳಾದ ವಿರುಪಯ್ಯಸ್ವಾಮಿ, ದೊಡ್ಡಬಸವ, ಮಾರುತಿ, ಊರಿನ ಗ್ರಾಮಸ್ಥರಾದ ಈರಣ್ಣ, ಅವುಲ್, ದೇವಪ್ಪ, ಅಶೋಕ, ದುರಗಪ್ಪ, ಕುಮಾರ, ವಿಜಯ, ಈರಮ್ಮ, ಲಕ್ಷ್ಮೀ, ಲಕ್ಷ್ಮೀ ಹರಿಜನ, ಹುಲಿಗೆಮ್ಮ ಸೇರಿದಂತೆ ಇನ್ನು ಮುಂತಾದವರು ಮಹಿಳೆಯರು ಯುವಕರು ಗ್ರಾಮಸ್ಥರು ಸೇರಿ ಪ್ರತಿಭಟನೆ ಮಾಡಿ ಮನವಿ ಪತ್ರ ಸಲ್ಲಿಸಿದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

8 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

8 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

8 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

8 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

8 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

8 hours ago