ಕಲ್ಯಾಣಸಿರಿ ವಿಶೇಷ

ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಸಹಿಸಲಾಗದೆ ಉದ್ದೇಶ ಪೂರ್ವಕವಾಗಿ ಪ್ರತಿಭಟನೆ: ರಂಗಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೊಸಳ್ಳಿ ವಿಶ್ವನಾಥ್.

Intentional protest as development of the Gram Panchayat could not be tolerated: Rangapur Gram Panchayat President Hosalli Vishwanath.

ಸೊಸೈಟಿ ಚುನಾವಣೆಯಲ್ಲಿ ಸೋತವರಿಂದ ಹತಾಶ ಹೇಳಿಕೆ.

ಕುಡಿಯುವ ನೀರಿನ ಮೋಟಾರ್ ಪಂಪ್ ಸೆಟ್ ಕಳ್ಳತನ ಆರೋಪ ಪ್ರತಿಭಟನೆ ಸುಳ್ಳು: ಸದಸ್ಯರ ಸ್ಪಷ್ಟನೆ.

ಅಧ್ಯಕ್ಷರ ತೇಜೋವಧೆಗೆ ಸದಸ್ಯರ ಆಕ್ರೋಶ.

ಗ್ರಾಮ ಪಂಚಾಯಿತಿಯಲ್ಲಿ ಯಾವುದೇ ಹಣ ದುರುಪಯೋಗವಾಗಿಲ್ಲ.ಸತ್ಯ ಸತ್ಯತೆ ಅರಿತು ಮಾತನಾಡಲಿ.

ತಿಪಟೂರು: ತಾಲೂಕಿನ ಕಸಬಾ ಹೋಬಳಿಯ ರಂಗಾಪುರ ಗ್ರಾಮ ಪಂಚಾಯಿತಿ ಮುಂದೆ ಕೆಲವು ಪ್ರಚಾರ ಪಡೆಯಲೆಂದು ಕುಡಿಯುವ ನೀರಿನ ಮೋಟಾರ್ ಪಂಪ್ ಸೆಟ್ ಕಳ್ಳತನವಾಗಿದೆ ಎಂದು ಆರೋಪಿಸಿ ಪ್ರತಿಭಟಿಸಿದ್ದು, ಸತ್ಯಕ್ಕೆ ದೂರವಾದ ಸಂಗತಿ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಹೊಸಳ್ಳಿ ವಿಶ್ವನಾಥ್ ತಿಳಿಸಿದರು.

ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಶ್ವನಾಥ್, ಇತ್ತೀಚೆಗೆ ನಮ್ಮ ರಂಗಾಪುರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗೆ ಸಹಕರಿಸಿದೆ ಎಂದು, ಸೋತ ಅಭ್ಯರ್ಥಿಗಳು ಮತ್ತು ಅಭಿವೃದ್ಧಿ ಸಹಿಸದೆ ಪ್ರಚಾರ ಪಡೆಯಲು ಕೆಲ ನಮ್ಮ ಪಂಚಾಯಿತಿಯ ಸದಸ್ಯರು ಇಲ್ಲಸಲ್ಲದ ಆರೋಪ ಮಾಡಿ ನನ್ನ ಮತ್ತು ಪಿಡಿಓ ಮೇಲೆ ಕುಡಿಯುವ ನೀರಿನ ಪಂಪ್ ಸೆಟ್ ಕಳ್ಳತನವಾಗಿದೆ ಎಂಬ ಆರೋಪಿಸಿ, ಪ್ರತಿಭಟನೆಗೆ ಮುಂದಾಗಿರುವುದು ಇವರ ಮನಸ್ಥಿತಿ ಯಾವ ಮಟ್ಟಿಗೆ ಇದೆ ಎಂಬುದು ನೀವೇ ಅರ್ಥೈಸಿಕೊಳ್ಳಿ. ಅಭಿವೃದ್ಧಿಗೆ ಅಡ್ಡಗಾಲು ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಹೊಸಹಳ್ಳಿ ಗ್ರಾಮದಲ್ಲಿರುವ ಸುಮಾರು ಎರಡು ವರ್ಷದಿಂದ ನಿಷ್ಕ್ರಿಯವಾಗಿದ್ದ ಕುಡಿಯುವ ನೀರಿನ ಕೊಳವೆ ಬಾವಿಯ ಪಂಪ್ ಸೆಟ್ ನ್ನು ತೆಗೆದು, ಉಪಯೋಗಕ್ಕೆ ಬರುವ ಕೊಳವೆ ಬಾವಿಗೆ ಬಿಡಲೆಂದು ತಿಳಿಸಿದ್ದು, ಯಾವುದೇ ಕಾರಣಕ್ಕೂ ಅದು ಕಳ್ಳತನ ಮಾರಾಟಕ್ಕೆ ಯತ್ನಿಸಿಲ್ಲ. ಇದರಲ್ಲಿ ಯಾವುದೇ ಅನುಮಾನ ಬಂದರೆ ಸಂಬಂಧಪಟ್ಟ ಪಿಡಿಓ ಮತ್ತು ತಾಲೂಕು ಪಂಚಾಯಿತಿ ಇಓ ರವರನ್ನು ಸಂಪರ್ಕಿಸಿ ಅವರೇ ಸ್ಪಷ್ಟವಾದ ಉತ್ತರ ನೀಡುತ್ತಾರೆ. ನನ್ನ ಹೆಸರಿಗೆ ಕಳಂಕ ತರಲೆಂದು, ಹೀಗೆ ಮುಂದುವರೆದರೆ ಅವರುಗಳ ಮೇಲೆ ಕಾನೂನು ಹೋರಾಟದ ಅಸ್ತ್ರ ಉಪಯೋಗಿಸುತ್ತೇನೆ ಎಂದು ತಿಳಿಸಿದರು.

ಬಿಜೆಪಿ ಮುಖಂಡ ಸುಗುಣೇಂದ್ರ ಪಾಟೀಲ್ ಮಾತನಾಡಿ, ರಂಗಾಪುರ ಸೊಸೈಟಿ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಹತಾಶೆಯಲ್ಲಿ ಈ ರೀತಿ ಹೇಳಿಕೆಗಳನ್ನು ನೀಡುತ್ತಾ, ಪ್ರತಿಭಟನೆಗೆ ಮುಂದಾಗಿರುವುದು ಹಾಸ್ಯಸ್ಪದವಾಗಿದೆ. ಪಂಚಾಯ್ತಿಯಲ್ಲಿ ಆಗುತ್ತಿರುವ ಅಭಿವೃದ್ಧಿ ಕೆಲಸಗಳನ್ನು ಸಹಿಸದೆ ಮತ್ತು ಅಧಿಕಾರ ಸಿಗಲಿಲ್ಲ ಎಂಬ ದುರುದ್ದೇಶದಿಂದ ಕೂಡಿದ್ದು, ಪಂಚಾಯಿತಿಯಲ್ಲಿ ಯಾವುದೇ ಹಣ ದುರುಪಯೋಗ ವಾಗಿರುವುದಿಲ್ಲ. ಸತ್ಯ ಸತ್ಯತೆ ಅರಿತು ಮಾತನಾಡಿದರೆ ಒಳ್ಳೆಯ ಬೆಳವಣಿಗೆ.
ಇವರದ್ದು ಕೀಳುಮಟ್ಟದ ರಾಜಕೀಯ ಪ್ರಜ್ಞೆಯಾಗಿದ್ದು, ಯಾವುದೋ ದುರುದ್ದೇಶ ಇಟ್ಟುಕೊಂಡು ಈ ರೀತಿ ಮಾಡುತ್ತಿರುವುದು ಗ್ರಾಮ ಅಭಿವೃದ್ಧಿಗೆ ಹಿನ್ನಡೆ ಆಗುತ್ತಿದೆ. ಬಿಜೆಪಿ ಪಕ್ಷದ ಹೆಸರಿಗೆ ಕಳಂಕ ತರಲೆಂದು ಯತ್ನಿಸುತ್ತಿರುವ ಅವಿವೇಕಿಗಳಿಗೆ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸುತ್ತೇನೆ ಎಂದು ತಿಳಿಸಿದರು.

ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ ಹರೀಶ್ ಮಾತನಾಡಿ, ನಮ್ಮ ಅವಧಿಯಲ್ಲಿ ಈ ರೀತಿ ಪ್ರತಿಭಟನೆ ಮತ್ತು ಸುಳ್ಳು ಆರೋಪಗಳು ನಡೆದಿರುವುದಿಲ್ಲ. ಆದರೆ ಈಗ ಅಧ್ಯಕ್ಷರಾಗಿ ವಿಶ್ವನಾಥ್ ಆಯ್ಕೆ ಆದ ಮೇಲೆ ಮತ್ತು ಪಿಡಿಓ ರವರ ಮೇಲೆ ಇಲ್ಲಸಲ್ಲದ ದುರುದ್ದೇಶದ ಹೇಳಿಕೆ ನೀಡುತ್ತಾ ಪ್ರತಿಭಟನೆ ಮುಂದಾಗಿರುವುದು ಸಮಂಜಸವಲ್ಲ. ಸೊಸೈಟಿ ಚುನಾವಣೆಯಲ್ಲಿ ಸೋತ ಅಭ್ಯರ್ಥಿ ನಕಲಿ ಬಿಲ್ ಮಾಡಿ ಕೊಡುವಂತೆ ಒತ್ತಾಯಿಸಿರುವ ಬಗ್ಗೆ ನಮ್ಮ ಗಮನಕ್ಕೆ ಬಂದಿದ್ದು, ಅಧ್ಯಕ್ಷರು ಒಪ್ಪದೇ ಇದ್ದಾಗ ಈ ಪ್ರತಿಭಟನೆ ಮಾಡಿರಬಹುದು ಎಂಬುದು ಗೊತ್ತಾಗುತ್ತದೆ. ಇದು ದುರುದ್ದೇಶದ ಪ್ರತಿಭಟನೆ. ನಮ್ಮ ಪಂಚಾಯಿತಿಗೆ ತಾಲೂಕಿನಲ್ಲಿ ಒಳ್ಳೆ ಹೆಸರಿದ್ದು, ಆ ಹೆಸರಿಗೆ ಯಾರೇ ಆಗಲಿ ಕೆಟ್ಟ ಹೆಸರನ್ನು ತರಲು ಯತ್ನಿಸಿದರೆ, ನಾವುಗಳು ಕಾನೂನಿನ ರುಚಿ ತೋರಿಸುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷೆ ಬಿಂದುಶ್ರೀ,ಮಾಜಿ ಅಧ್ಯಕ್ಷೆ ಮಮತ,ಮಾಜಿ ಉಪಾಧ್ಯಕ್ಷೆ ಇಂದ್ರಾಣಿ ಮತ್ತು ಸದಸ್ಯ ಆನಂದ್ ಕುಮಾರ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ದೇವರಾಜು ಕೆರಗೋಡಿ, ನಿರ್ದೇಶಕರಾದ ವಿಜಯಕುಮಾರ್,ವಿಶ್ವನಾಥ್, ಪರಮಶಿವಯ್ಯ, ಬಿಜೆಪಿ ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷ ಧ್ರುವ ಕುಮಾರ್, ಮುಖಂಡರಾದ ವಸಂತಕುಮಾರ್,ಆಲದಹಳ್ಳಿ ಹರೀಶ್ ಮತ್ತು ದಲಿತ ಮುಖಂಡ ಪುನೀತ್ ರಂಗಾಪುರ ಸೇರಿದಂತೆ ಸದಸ್ಯರು ಮತ್ತು ಮುಖಂಡರು ಹಾಜರಿದ್ದರು.
ವರದಿ ಮಂಜು ಗುರುಗದಹಳ್ಳಿ

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

15 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

15 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

15 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

15 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

15 hours ago