ಕಲ್ಯಾಣಸಿರಿ ವಿಶೇಷ

13ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕರ್ನಾಟಕದಸಾಂಸ್ಕೃತಿಕ ಭಾವಚಿತ್ರವನ್ನುಕೈಬಿಡಲಾಗಿದ್ದು, ಕೂಡಲೇ ಸರಿಪಡಿಸಿಕೊಳ್ಳಲು ಮನವಿ.

The cultural portrait of Karnataka was omitted from the 13th District Kannada Literary Conference, and a request is made to correct this immediately.

27 ಮತ್ತು 28 ರಂದು ಗಂಗಾವತಿಯಲ್ಲಿ ನಡೆಯುತ್ತಿರುವ 13ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಹೆಸರು ಮತ್ತು ಭಾವಚಿತ್ರವನ್ನು ಕೈಬಿಡಲಾಗಿದ್ದು, ಕೂಡಲೇ ಸರಿಪಡಿಸಿಕೊಳ್ಳಲು ಗಂಗಾವತಿ ರಾಷ್ಟ್ರೀಯ ಬಸವದಳ. ಮನವಿ.

ಗಂಗಾವತಿ,೨೫:13ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಗಂಗಾವತಿಯಲ್ಲಿ ನಡೆಯುತ್ತಿರುವುದು ಸಂತಸದ ವಿಷಯ. ಕರ್ನಾಟಕ ಸರ್ಕಾರ ಕಳೆದ ವರ್ಷ 12ನೇ ಶತಮಾನದಲ್ಲಿ ಸಮಾನತೆಯ ಅರಿವು ಮೂಡಿಸಿದ ಬಸವಣ್ಣನವರನ್ನು ನಾಡಿನ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುತ್ತದೆ.

Oplus_131072

ಆದರೆ ಪ್ರಸ್ತುತ ನಡೆಯುತ್ತಿರುವ ಜಿಲ್ಲಾ ಸಮ್ಮೇಳನದ ಆಹ್ವಾನ ಪತ್ರಿಕೆ. ಬ್ಯಾನರ್ ಹಾಗೂ ವೇದಿಕೆ ಮುಂತಾದವುಗಳಲ್ಲಿ ನಾಡಿನ ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರ ಹಾಗೂ ಹೆಸರನ್ನು ಕೈಬಿಟ್ಟಿರುವುದು ವಿಶ್ವಗುರು ಬಸವಣ್ಣನವರಿಗೆ ಮತ್ತು ಕನ್ನಡಿಗರಿಗೆ ಅಪಮಾನ ಮಾಡಿದಂತಾಗಿದೆ.

ಕೂಡಲೇ ತಾವು ಇದನ್ನು ಸರಿಪಡಿಸಿಕೊಳ್ಳಲು ಒತ್ತಾಯಿಸುತ್ತೇವೆ. ಒಂದುವೇಳೆ ಸರಿಪಡಿಸಲು ಸಾಧ್ಯವಾಗದಿದ್ದಲ್ಲಿ ಕನಿಷ್ಟಪಕ್ಷ ಸಮ್ಮೇಳನ ನಡೆಯುವ ವೇದಿಕೆಯಲ್ಲಿ ಬಸವಣ್ಣನವರ ಭಾವಚಿತ್ರ ಇರಿಸಲು ಕೋರುತ್ತಾ, ಸಮ್ಮೇಳನದ ಉದ್ಘಾಟನೆಯನ್ನು ತಾಯಿ ಭುವನೇಶ್ವರಿ ಭಾವಚಿತ್ರದೊಂದಿಗೆ, ಬಸವಣ್ಣನವರ ಭಾವಚಿತ್ರ ಅಥವಾ ಪುತ್ಥಳಿಗೆ ಗೌರವಪೂರ್ವಕವಾಗಿ ಪುಷ್ಪಾರ್ಪಣೆ ಮಾಡುವ ಮೂಲಕ ಸಮ್ಮೇಳನ ಉದ್ಘಾಟಿಸಲು ಕೋರುತ್ತೇವೆ.

ಒಂದುವೇಳೆ ತಾವು ನಿರ್ಲಕ್ಷ್ಯವಹಿಸಿದಲ್ಲಿ ತಾವು ಸ್ವಾಭಿಮಾನಿ ಕನ್ನಡಿಗರ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗುತ್ತೀರೆಂದು ತಿಳಿಸಲಿಚ್ಚಿಸುತ್ತೇವೆ.

.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

15 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

15 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

16 hours ago