Notable NREGA Information Center
ಬೂದು ನೀರು ನಿರ್ವಹಣಾ ಕಾರ್ಯಮಾದರಿ ಅಳವಡಿಕೆ
ಗಂಗಾವತಿ : ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನರೇಗಾ ಮಾಹಿತಿ ಕೇಂದ್ರ ತೆರೆದು ಬೂದು ನೀರು ನಿರ್ವಹಣಾ ಕಾರ್ಯಮಾದರಿ (ಲೈವ್ ಮಾಡೆಲ್ ) ಅಳವಡಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಿರುವುದು ವಿಶೇಷವಾಗಿ ಕಂಡು ಬಂತು.
ಕನ್ನಡಾಭಿಮಾನಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಮಾಹಿತಿ ಕೇಂದ್ರಕ್ಕೆ ಭೇಟಿ ನೀಡಿ ಬೂದು ನೀರು ನಿರ್ವಹಣಾ ಕಾರ್ಯಮಾದರಿ ವೀಕ್ಷಿಸಿ, ನರೇಗಾ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡರು. ಮನೆ- ಮನೆಗಳಿಂದ ಉತ್ಪತ್ತಿಯಾಗುವ ದ್ರವ ತಾಜ್ಯವನ್ನು ಸಂಸ್ಕರಿಸಿ ಬಿಡುವುದು ಬೂದು ನೀರು ನಿರ್ವಹಣೆ ಘಟಕದ ಪ್ರಮುಖ ಉದ್ದೇಶವಾಗಿದೆ. ಪ್ರಸ್ತುತ ರಾಜ್ಯದಲ್ಲಿ 500 ಗ್ರಾಮ ಪಂಚಾಯತ್ ಗಳಲ್ಲಿ ಬೂದು ನೀರು ನಿರ್ವಹಣಾ ಘಟಕ (ಜಿಡಬ್ಲ್ಯುಎಂ) ಕಾಮಗಾರಿಗಳು ನಿರ್ಮಾಣ ಹಂತದಲ್ಲಿವೆ. ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ಸಮ್ಮೇಳನದಲ್ಲಿ ಬೂದು ನೀರು ನಿರ್ವಹಣಾ ಕಾರ್ಯಮಾದರಿ ಅಳವಡಿಸಲಾಗಿತ್ತು.
ಸಾರ್ವಜನಿಕರಿಗೆ ನರೇಗಾ ಯೋಜನೆ ಮಾಹಿತಿ, ಸೌಲಭ್ಯಗಳ ಕುರಿತು ಮಾಹಿತಿ ನೀಡಲಾಯಿತು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…