ಕಲ್ಯಾಣಸಿರಿ ವಿಶೇಷ

ಜೈನ್ ಯುವಸಂಘಟನೆಯಿಂದ ಭಗವಾನ್ ಮಹಾವೀರರ 2624 ನೇ ಜಯಂತಿ : ಅಹಿಂಸಾ ಮತ್ತು ವಿಶ್ವಶಾಂತಿ ಸಮಾವೇಶಉದ್ಘಾಟಿಸಲಿರುವಉಪಮುಖ್ಯಮಂತ್ರಿಡಿ.ಕೆ.ಶಿವಕುಮಾರ್

Deputy Chief Minister D.K. Shivakumar to inaugurate Jain Youth Organisation’s 2624th Jayanti of Lord Mahavira: Non-Violence and World Peace Conference

ಬೆಂಗಳೂರು, ಏ, 7; ಭಗವಾನ್ ಮಹಾವೀರರ 2624 ನೇ ಜನ್ಮ ಜಯಂತಿ ಹಿನ್ನೆಲೆಯಲ್ಲಿ ಏಪ್ರಿಲ್ 10 ರಂದು ಜೈನ್ ಯುವ ಸಂಘಟನೆಯಿಂದ ಕಲ್ಯಾಣ ಮಹೋತ್ಸವವನ್ನು ಆಯೋಜಿಸಿದ್ದು, ಅಹಿಂಸಾ ಮತ್ತು ವಿಶ್ವಶಾಂತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಹಲವಾರು ಸಾಮಾಜಿಕ ಚಟುವಟಿಕೆಗಳ ಮೂಲಕ ಭಗವಾನ್ ಮಹಾವೀರರ ಕಲ್ಯಾಣ ಮಹೋತ್ಸವವನ್ನು ಸ್ಮರಣೀಯಗೊಳಿಸಲಾಗುವುದು ಎಂದು ಜೈನ್ ಯುವ ಸಂಘಟನೆಯ ಅಧ್ಯಕ್ಷ ಜೈನ್ ಮಹಾವೀರ್ ಮುನೋತ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಹಿಂಸಾ ಮತ್ತು ವಿಶ್ವಶಾಂತಿ ಸಮಾವೇಶ ಉದ್ಘಾಟಿಸಲಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತಿತರರು ಭಾಗಿಯಾಗಲಿದ್ದಾರೆ. ಫ್ರೀಡಂ ಪಾರ್ಕ್ ಸಮೀಪದ ಗಾಂಧಿನಗರದ ಕುಂಡಲಪುರದಲ್ಲಿ ಜೈನ ಧರ್ಮದ ಸಂದೇಶ ಹಾಗೂ ಧ್ಯೇಯಗಳನ್ನು ಪಸರಿಸಲು ಈ ಬಾರಿ ಕಲ್ಯಾಣ ಮಹೋತ್ಸವವನ್ನು ಮತ್ತಷ್ಟು ಆಕರ್ಷಣೀಯಗೊಳಿಸಲಾಗುತ್ತಿದೆ. ಮಹಾತ್ಮಾಗಾಂಧೀಜಿ, ಲೋಕಮಾನ್ಯ ತಿಲಕರ ಮೇಲೆಯೂ ಜೈನಧರ್ಮ ವ್ಯಾಪಕ ಪರಿಣಾಮ ಬೀರಿದ್ದು, ಅವರ ಬೋಧನೆಗಳು ಆತ್ಮದ ಅಂದವನ್ನು ಮತ್ತು ಐಕ್ಯತೆಯನ್ನು ಪ್ರತಿಬಿಂಬಿಸುತ್ತವೆ. “ಬದುಕು ಮತ್ತು ಬದುಕಲು ಬಿಡು” ಎಂಬ ಘೋಷವಾಕ್ಯ ಪ್ರಪಂಚದಾದ್ಯಂತ ಅತಿ ಹೆಚ್ಚು ಜನರು ಆಚರಿಸುವಂತೆ ಮಾಡಿದೆ ಎಂದರು.
ಈ ವರ್ಷದ ನಮ್ಮ ಧಾರ್ಮಿಕ ಮತ್ತು ಮಾನವತಾ ಸೇವೆಗಳಲ್ಲಿ ರಕ್ತದಾನ ಶಿಬಿರದ ಮೂಲಕ 500 ಯೂನಿಟ್ ಗಳಿಗಿಂತ ಅಧಿಕ ರಕ್ತ ಸಂಗ್ರಹ. ಉಚಿತ ಕಣ್ಣು ಪರೀಕ್ಷೆ, ಮಧುಮೇಹ, ರಕ್ತದೊತ್ತಡ ಮತ್ತಿತರೆ ಪರೀಕ್ಷೆಗಳನ್ನು ನಡೆಸಿ, ಅಶಕ್ತರಿಗೆ ಆಹಾರ ಪೂರೈಸಲಾಗುವುದು ಎಂದರು.

ಮಧ್ಯಾಹ್ನ 1.21ಕ್ಕೆ ಗುರುಭಗವಂತರಿಂದ ಮಹಾಮಂಗಳೀಕವನ್ನು ನೆರವೇರಿಸಲಾಗುವುದು. ರಾಜ್ಯ ಸಭಾ ಸದಸ್ಯರಾದ ಲಹರ್ ಸಿಂಗ್ ಸಿರೋಹಿಯ, ಸಂಸದರಾದ ಪಿ.ಸಿ. ಮೋಹನ್, ಸಮುದಾಯದ ಮುಖಂಡರಾದ ರಾಕೇಶ್ ಪುನ್ನೀಯ, ಮಾಜಿ ಮಹಾಪೌರರಾದ ಗೌತಮ್ಕುಮಾರ್ ಮಕಾನ, ಚಿಕ್ಕಪೇಟೆಯ ಶ್ರೀ ಆದಿನಾಥ ಜೈನ್ ಟೆಂಪಲ್ ಅಧ್ಯಕ್ಷರಾದ ಗೌತಮ್ ಸೊಲಂಕಿ, ಜೈನ್ ಕಾನ್ಸರೆನ್ಸ್ ಕರ್ನಾಟಕದ ಅಧ್ಯಕ್ಷ ಪ್ರಕಾಶಂದ್ ಭುರಡ್, ತೇರಾಪಂಥ್ ಸಭಾದ ಅಧ್ಯಕ್ಷ ಪಾರಸ್ ಭಂಸಾಲಿ, ಕರ್ನಾಟಕ ಜೈನ್ ಅಸೋಸಿಯೇಷನ್ ಅಧ್ಯಕ್ಷ ಪ್ರಸ್ಸನ್ನಯ್ಯ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಜೈನ್ ಯುವ ಸಂಘಟನೆಯ ಕಾರ್ಯದರ್ಶಿ ಜೈನ್ ನೀರಜ್ ಕಟಾರಿಯಾ, ಜೈನ್ ಹಿತೇಶ್ ಕಾಂಕಲಿಯ ಮಾಧ್ಯಮ ಸಂಚಾಲಕ ಚಂದ್ರಶೇಖರಯ್ಯ ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

19 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

19 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

19 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

20 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

20 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

20 hours ago