ಕಲ್ಯಾಣಸಿರಿ ವಿಶೇಷ

ಕಲ್ಯಾಣಿ ಸ್ಟೀಲ್ ಕಂಪನಿಯವರು ಗಿಣಿಗೇರಾ ಗ್ರಾಮದ ಪಕ್ಕದಲ್ಲಿ ಕರಿಬೂದಿ ಡಂಪ್ ಮಾಡುವುದನ್ನು ನಿಲ್ಲಿಸಲು ಮನವಿ

Appeal to Kalyani Steel Company to stop dumping black ash near Ginigera village

ಕೊಪ್ಪಳ ತಾಲೂಕಿನ ಗಿಣಿಗೇರಿ ಗ್ರಾಮದಲ್ಲಿ  ಕೈಗಾರಿಕೆಗಳಿಂದ ಈಗಾಗಲೇ ಪರಿಸರ ಮಾಲಿನ್ಯವಾಗುತ್ತಿದೆ. ಕಲ್ಯಾಣಿ ಸ್ಟೀಲ್ ಕಂಪನಿಯವರು  ಗಿಣಿಗೇರಾ ಗ್ರಾಮದ ಪಕ್ಕದಲ್ಲಿ  ಕರಿ ಬೂದಿಯನ್ನು ಟಿಪ್ಪರ್ ಮೂಲಕ  ತಂದು ಗುಡ್ಡ ದ ರೀತಿಯಲ್ಲಿ  ಡಂಪ್ ಮಾಡುತ್ತಿದ್ದಾರೆ . 30 ಮೀಟರ್ ಅಂತರದಲ್ಲಿರುವ  ಈ ಕರಿ ಬೂದಿಯಿಂದ  ಊರೊಳಗೆ ವ್ಯಾಪಾಕವಾಗಿ ದೂಳು ಬರುತ್ತಿದೆ. ಈ ವಿಷಕಾರಿ ದೂಳಿನಿಂದ  ಪಕ್ಕದ ಮನೆಗಳಲ್ಲಿ ವಾಸ ಮಾಡಲು ಆಗುತ್ತಿಲ್ಲ. ಗಾಳಿ ಬೀಸಿದರೆ ಊರಿನ ತುಂಬೆಲ್ಲ ಧೂಳಿನ ವಾತಾವರಣ ನಿರ್ಮಾಣವಾಗಿದೆ.
ಅಡುಗೆ ಮನೆಯಿಂದ ಹಿಡಿದು ಊಟ ಮಾಡುವ ತಾಟಿನವರೆಗೂ ದೂಳು ಆವರಿಸುತ್ತಿದೆ.
ಗ್ರಾಮದ ಪಕ್ಕದಲ್ಲಿ “ಪರಿಸರ ಬೆಳೆಸಿ ಗಿಡಗಳನ್ನು ನೆಡೆಸಿ” ದೂಳು ಬರೆದಂತ ಕ್ರಮ ಕೈಗೊಳ್ಳುವುದನ್ನು ಬಿಟ್ಟು ಕಂಪನಿಯವರು ಕರಿಬೂದಿ ಡಂಪ್ ಮಾಡಿ ಸಾರ್ವಜನಿಕರಿಗೆ ಮತ್ತು ಗ್ರಾಮಕ್ಕಾಗುವ ತೊಂದರೆ ಬಗ್ಗೆ ಕಿಂಚಿತ್ತೂ ಯೋಚನೆ ಮಾಡುತ್ತಿಲ್ಲ.
ಊರಿನಲ್ಲಿ ಸಾಕಷ್ಟು ಅಸ್ತಮಾ, ಟಿಬಿ, ಕ್ಯಾನ್ಸರ್, ಮುಂತಾದ ರೋಗಗಳಿಂದ ಮಕ್ಕಳು, ವೃದ್ಧರು, ಹಾಗೂ ಜನಸಾಮಾನ್ಯರು ಆಸ್ಪತ್ರೆ ಸೇರುವಂತ ಪರಿಸ್ಥಿತಿ ನಿರ್ಮಾಣವಾಗಿದೆ..
ಗ್ರಾಮದ ಪಕ್ಕದಲ್ಲಿ ಕರೀ ಬೂದಿ ಡಂಪ್ ಮಾಡದೆ ಬೇರೆ ಸ್ಥಳದಲ್ಲಿ  ಹಾಕಬೇಕೆಂದು ಗಿಣಿಗೇರಿ ನಾಗರಿಕ ಹೋರಾಟ ಸಮಿತಿಯಿಂದ ಕಂಪನಿಯವರಿಗೆ ಕೇಳಿಕೊಂಡರು ಯಾವುದಕ್ಕೂ ಕಿವಿ ಕೊಡುತ್ತಿಲ್ಲ.
ಕಾರ್ಖಾನೆಯಿಂದಾಗುವ ಮಾಲಿನ್ಯ  ಮತ್ತು ಪರಿಸರಕ್ಕೆ ಸಂಬಂಧಿಸಿದ ಯಾವುದೇ ಮುಂಜಾಗ್ರತ ಕ್ರಮ ಕೈಗೊಂಡಿಲ್ಲ
ಗ್ರಾಮದಲ್ಲಿ ಜನರ ಆರೋಗ್ಯದ ಕುರಿತು ಪ್ರತಿ ತಿಂಗಳು ಆರೋಗ್ಯ ತಪಾಸಣಾ ಕ್ಯಾಂಪುಗಳನ್ನು ಮಾಡಿ ಜನರಿಗಾಗಿರುವ ಆರೋಗ್ಯ ತೊಂದರೆಗಳಿಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಮಾನ್ಯ ಜಿಲ್ಲಾಧಿಕಾರಿಗಳಿಗೆ ಮತ್ತು ಮಾನ್ಯ ಪರಿಸರ ನಿಯಂತ್ರಣ ಅಧಿಕಾರಿಗಳಿಗೆ ಗಿಣಿಗೇರಿ ನಾಗರಿಕ ಹೋರಾಟ ಸಮಿತಿಯ ಮುಖಂಡರು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಸಂಚಾಲಕರಾದ ಶರಣು ಗಡ್ಡಿ , ಮಂಗಳೇಶ ರಾಥೋಡ್, ಹನುಮಂತ ಕಟಗಿ,ಅನುರಾಧ, ಇನ್ನಿತರರು ಭಾಗವಹಿಸಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

14 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

15 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

15 hours ago