Breaking News

ತಾಪಮಾನದ ಏರಿಕೆಗೆ ಜನತೆ ಹೈರಾಣ | ಗಗನಕ್ಕೇರುತ್ತಿದೆ ತಂಪು ಪಾನೀಯಗಳ ಬೆಲೆ

People are suffering due to rising temperatures | Prices of soft drinks are skyrocketing

ಜಾಹೀರಾತು
IMG 20250417 WA0024

ಸಚೀನ ಆರ್ ಜಾಧವ
ಸಾವಳಗಿ: ಬಾಗಲಕೋಟೆ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬೇಸಿಗೆ ಬಿಸಿ ಏರುತ್ತಿದ್ದು, ಜನತೆ ತಾಪ ತಾಳಲಾರದೆ ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಬೆಳಗ್ಗೆ 9.30ರಿಂದ ಆರಂಭವಾಗುವ ಬಿಸಿಲಿನ ಪ್ರಖರತೆಗೆ ಜನತೆ ರೋಸಿ ಹೋಗಿದ್ದಾರೆ. ಕಲ್ಲಂಗಡಿ, ದ್ರಾಕ್ಷಿ, ಮೋಸಂಬಿ, ಎಳನೀರು, ಮಜ್ಜಿಗಿ ಮತ್ತಿತರ ತಂಪು ಪಾನೀಯಗಳಿಗೆ ಬೇಡಿಕೆ ಅಧಿಕವಾಗುತ್ತಿದೆ.

ಗಗನಕ್ಕೇರಿದ ಬೆಲೆ: ಬಿಸಿಲಿನ ತಾಪದೊಂದಿಗೆ ತಂಪು ಪಾನೀಯಗಳ ಬೆಲೆಯೂ ಗಗನಕ್ಕೇರಿರುವುದರಿಂದ ಜನತೆಯ ಜೇಬಿಗೆ ಕತ್ತರಿ ಬೀಳುತ್ತಿದೆ. 35 ರೂ. ಇದ್ದ ಎಳನೀರು 45 ರೂ. ಆಗಿದೆ. ಕಲ್ಲಂಗಡಿ ಹಣ್ಣಿನ ಬೆಲೆ 50 ರಿಂದ 100 ರೂ.ವರೆಗೆ ಇದೆ. 10 ರೂ.ಗೆ 3 ನಿಂಬೆ ದೊರೆಯುತ್ತಿವೆ. ಹಣ್ಣು, ಲಸ್ಸಿ, ಮಜ್ಜಿಗೆ, ಕಬ್ಬಿನ ಹಾಲು ಮತ್ತಿತರ ಪಾನೀಯಗಳ ಬೆಲೆಯೂ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ.

ಬದುಕು ದುಸ್ತರ: ಈ ವರ್ಷ ಬಿಸಿಲಿನ ಜಳಕ್ಕೆ ಭೂಮಿ ಕಾದ ಕಬ್ಬಿಣದಂತಾಗಿದ್ದು, ಜನತೆ ಮನೆಯಿಂದ ಹೊರಬರಲು ಹಿಂಜರಿಯುತ್ತಿದ್ದಾರೆ. ಈ ಗರಿಷ್ಠ ತಾಪಮಾನ ದಾಖಲಾಗಿದ್ದು, ಮಧ್ಯಾಹ್ನದ ಹೊತ್ತಿನಲ್ಲಿ ಮನೆಯಲ್ಲಿ ಕುಳಿತುಕೊಳ್ಳಲು ಆಗದೆ ಜನತೆ ಗಿಡ-ಮರಗಳ ನೆರಳಿನಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ರಾತ್ರಿ ವೇಳೆ ಮನೆಯ ಮಾಳಿಗೆ ಮೇಲೆ ಮಲಗುವ ಪರಿಸ್ಥಿತಿ ಎದುರಾಗಿದೆ. ಬಿಸಿಲಿನ ಹೊಡೆತಕ್ಕೆ ಬದುಕು ನಡೆಸುವುದೆ ದುಸ್ತರವಾಗಿದೆ.

ಜನರಲ್ಲಿ ಅನಾರೋಗ್ಯದ ಆತಂಕ: ಬಿಸಿಲಿನ ಜಳದಿಂದ ಮಕ್ಕಳು ಹಾಗೂ ವೃದ್ಧರ ಅನಾರೋಗ್ಯದಲ್ಲಿ ವ್ಯತ್ಯಾಸ ಉಂಟಾಗುತ್ತಿದ್ದು, ಅನೇಕ ಕಾಯಿಲೆಗಳು ಕಾಣಿಸಿಕೊಳ್ಳುತ್ತಿವೆ. ಭೂಮಿಗೆ ಮಳೆ ಸುರಿದರೆ ಮಾತ್ರ ಬಿಸಿಲಿನ ಕಡಿಮೆಯಾಗಲಿದೆ. ತಾಪ ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದೆ.


ಈ ವರ್ಷ ಅಧಿಕ ಬಿಸಿಲಿನ ತಾಪ ಇದೆ ಎಂದು ಅನುಭವಕ್ಕೆ ಬರುತ್ತಿದೆ ಬಿಸಿಲಿನ ಪ್ರಖರತೆ ತಾಳಲಾರದೆ ನಾವೆಲ್ಲರು ಅತೀಯಾಗಿ ತಂಪುಪಾನೀಯ ಮೊರೆ ಹೋಗುತ್ತಿದ್ದೆವೆ.

ಹಣಮಂತ ರಾ ನ್ಯಾಮಗೌಡ.
ಚಿಕ್ಕಪಡಸಲಗಿ ಗ್ರಾಮದ ರೈತ.


ಬಿಸಿಲಿನ ಪ್ರಮಾಣ ಹೆಚ್ಚಾಗಿರುವುದರಿಂದ ಸಾರ್ವಜನಿಕರು ಬೆಳ್ಳಿಗ್ಗೆ ಮತ್ತು ಸಾಯಂಕಾಲದ ಹೊತ್ತಿಗೆ ತಮ್ಮ ಕೆಲಸಗಳನ್ನು ಮಾಡಬೇಕು ಬಿಸಿಲಿನ ಸಮಯದಲ್ಲಿ ಮೆನಯಲ್ಲಿರಬೇಕು ವೃದ್ಧರು ತಂಪಾದ ವಾತಾವರಣದಲ್ಲಿ ಇರಬೇಕು. ಶುದ್ಧ ನೀರು ಕುಡಿಯಬೇಕು. ಹೆಚ್ಚಾಗಿ ಮಜ್ಜಿಗೆ, ಎಳನೀರು, ಕಲ್ಲಂಗಡಿ ಹಣ್ಣು ಸೇವನೆ ಮಾಡಬೇಕು. ಹೊರಗಡೆ ಎಣ್ಣೆಯಲ್ಲಿ ಕರಿದ ಮಸಾಲೆ ತಿಂಡಿ ಪದಾರ್ಥಗಳನ್ನು ಸೇವಿಸಬಾರದು.

ಮುಕುಂದ ಕಾಂಬಳೆ.
ಮುಖ್ಯ ವೈದ್ಯಾಧಿಕಾರಿಗಳು ಪ್ರಾಥಮಿಕ ಆರೋಗ್ಯ ಕೇಂದ್ರ ಚಿಕ್ಕಲಕಿ ಕ್ರಾಸ್.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.