Breaking News

ಕೂಕನಪಳ್ಳಿಯಲ್ಲಿ ಕುರಿಸಂತೆ; ಶಾಸಕ ರಾಘವೇಂದ್ರ ಹಿಟ್ನಾಳ್ ಸ್ಪಷ್ಟನೆ

There is no cow in Kookanapalli; MLA Raghavendra Hitnal clarifies

ಜಾಹೀರಾತು
Screenshot 2025 04 23 20 14 39 40 E307a3f9df9f380ebaf106e1dc980bb6

ಕೊಪ್ಪಳ ಎಪ್ರಿಲ್ 23 : ತಾಲೂಕಿನ ಕೂಕನಪಳ್ಳಿ ಗ್ರಾಮದಲ್ಲಿ ಅಧಿಕೃತ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಇರುವುದರಿಂದ ಕೂಕನಪಳ್ಳಿ ಗ್ರಾಮದಲ್ಲಿ ಕುರಿಸಂತೆ ನಡೆಯುತ್ತೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದರು.

ಸೋಮವಾರ ನಗರದ ಪ್ರವಾಸಿ ಮಂದಿರದಲ್ಲಿ ಕೊಪ್ಪಳ ಶಾಸಕ ಕೆ ರಾಘವೇಂದ್ರ ಹಿಟ್ನಾಳ್ ರವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, 2025-26ನೇ ಸಾಲಿನ ರಾಜ್ಯದ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಬೂದುಗುಂಪ ಗ್ರಾಮದ ಕುರಿಸಂತೆಗೆ 25 ಕೋಟಿ ಅನುದಾನ ಘೋಷಣೆಯಲ್ಲಿ ಅಧಿಕಾರಿಗಳ ಕಣ್ಣ್ ತಪ್ಪಿನಿಂದ ಆಗಿದೆ. ನಾನು ಮಾಜಿ ಸಂಸದರಾದ ಸಂಗಣ್ಣ ಕರಡಿ ಅರ್ಬರ ಜೊತೆ ಮಾತನಾಡಿದ್ದೇನೆ. ಅದನ್ನ ಸರಿಪಡಿಸುವ ಕೆಲಸವನ್ನ ಮಾಡುತ್ತೇನೆ ಜೊತೆಗೆ ಕೂಕನಪಳ್ಳಿ ಗ್ರಾಮದಲ್ಲೇ ಅಧಿಕೃತ ಕುರಿ ಮತ್ತು ಮೇಕೆ ಸಂತೆ ಮುಂದುವರೆಯಲಿದೆ ಎಂದು ಸ್ವಷ್ಟನೆ ನೀಡಿದರು. ಈ ಸಂದರ್ಭದಲ್ಲಿ ಕೊಪ್ಪಳ ಸಂಸದ ಕೆ ರಾಜಶೇಖರ್ ಹಿಟ್ನಾಳ್, ಕೊಪ್ಪಳ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೋಳಪ್ಪ ಹಲಗೇರಿ, ಕೊಪ್ಪಳ ಕಾಂಗ್ರೆಸ್ ಮುಖಂಡರಾದ ಗಾಳೆಪ್ಪ ಪೂಜಾರ್, ಕೆ ಎಮ್ ಸೈಯದ್, ಮಲ್ಲಿಕಾರ್ಜುನ್ ಪೂಜಾರ, ಕೃಷ್ಣ ಇಟ್ಟಂಗಿ, ಶರಣಪ್ಪ ಸಜ್ಜನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.