ಕಲ್ಯಾಣಸಿರಿ ವಿಶೇಷ

ಶೂದ್ರ ಭಕ್ತರೆ ಬರುವ ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನಮುಕ್ತಪ್ರದೆಶವಾಗಲಿದೆ : ಸಿ.ಎಂ.ಘೋಷಣೆ

Malai Mahadeshwar hill, where Shudra devotees come, will henceforth be a water-free area: CM announces


ವರದಿ : ಬಂಗಾರಪ್ಪ .ಸಿ .
ಹನೂರು :ತಾಲ್ಲೂಕಿನ ಮಾದಪ್ಪನ ಸನ್ನಿಧಿಯಲ್ಲಿ
ಇಲ್ಲಿಯವರೆಗೂ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಮಾಡಲಾಗುವುದು ಎಂದು ಸಿ.ಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು
ಪ್ರಾಧಿಕಾರದ ಕಛೇರಿಯಲ್ಲಿ ಮಾತನಾಡಿದ ಅವರು
ಮಲೈ ಮಹದೇಶ್ವರ ಲಾಡು ಪ್ರಸಾದಕ್ಕೂ ತಿರುಪತಿ ಮಾದರಿಯಲ್ಲಿ ನಂದಿನಿ ತುಪ್ಪ ಬಳಕೆಗೆ ಸಭೆ ನಿರ್ಣಯ
ಮಲೈ ಮಹದೇಶ್ವರ ಏ24: ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ಇತರೆ ನಿರ್ಣಯಗಳು…
ಹಿಂದಿನ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಒಂದೂವರೆ ವರ್ಷದಿಂದ ಜಾರಿ ಆಗದೇ ಇರುವುದಕ್ಕೆ ಮುಖ್ಯಮಂತ್ರಿಗಳು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರನ್ನು ತೀವ್ರವಾಗಿ ಪ್ರಶ್ನಿಸಿದರು.
ಪ್ರಾಧಿಕಾರದ ಕೆಲಸ ಕಾರ್ಯಗಳು, ಕಾಮಗಾರಿಗಳು ಸೂಕ್ತವಾಗಿ, ವೇಗವಾಗಿ ನಡೆಯಲು ಒಬ್ಬ AEE ಯನ್ನು ಪ್ರಾಧಿಕಾರಕ್ಕೇ ನೇಮಿಸಲು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಅವರಿಗೆ ಸೂಚಿಸಿದರು.
ಹಿಂದಿನ‌ ಸಭೆಯ ನಿರ್ಣಯದಂತೆ ಪ್ರವಾಸಿಗರ ಶೆಲ್ಟರ್ ಮತ್ತು ಶೌಚಾಲಯಗಳ ಕಾಮಗಾರಿ ಪೂರ್ಣಗೊಳ್ಳದ ಬಗ್ಗೆ ಸಿಎಂ ತರಾಟೆಗೆ ತೆಗೆದುಕೊಂಡರು.
ಪ್ರಾಧಿಕಾರ ಮತ್ತು ಮಹದೇಶ್ವರ ಬೆಟ್ಟಕ್ಕೆ ಸೇರಿದ ಜಾಗದಲ್ಲಿ ನೆಲೆಸಿರುವ 13 ಕುಟುಂಬಗಳಿಗೆ ಪರ್ಯಾಯ ಸ್ಥಳ ಒದಗಿಸಿ ಸ್ಥಳಾಂತರಿಸುವ ಮತ್ತು ಉಳಿದಿರುವವರನ್ನು ಹಾಗೇ ಉಳಿಸಿ, ಹೊಸದಾಗಿ ವಾಣಿಜ್ಯ ಉದ್ದೇಶದ ನಿರ್ಮಾಣಗಳಿಗೆ ಅವಕಾಶ ಆಗದಂತೆ ಖಚಿತವಾಗಿ ತಡೆಯುವ ಬಗ್ಗೆ ಚರ್ಚೆ ನಡೆಸಲಾಯಿತು.
ಮಲೈ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಆಗುವುದನ್ನು ಸಂಪೂರ್ಣ ತಡೆಯಬೇಕು. ಚಾಳಿ ಬಿದ್ದ ಆರೋಪಿಯೊಬ್ಬ ಗಡಿಪಾರು ಆದರೂ ಅಕ್ರಮ ಮಾರಾಟ ಮಾಡುತ್ತಿರುವುದನ್ನು ಅಧಿಕಾರಿಗಳಿಂದ ತಿಳಿದ ಸಿಎಂ ಅವರನ್ನು ತಕ್ಷಣ ಕಠಿಣ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.
ಪ್ರಾಧಿಕಾರದಲ್ಲಿ ಕೆಲಸ ಮಾಡುವ 66 ಕಾರ್ಮಿಕ ಕುಟುಂಬಗಳಿಗೆ ತಲಾ 20 ಲಕ್ಷ ವೆಚ್ಚದಲ್ಲಿ, ಒಟ್ಟು 12-13 ಕೋಟಿ ವೆಚ್ಚದಲ್ಲಿ ಆದಷ್ಟು ಬೇಗ ನೂತನ ಮನೆ ಕಟ್ಟಿ ಕೊಡಲು ಸಭೆ ನಿರ್ಣಯ.
ಮಲೈ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ , ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸುವುದು. ಮದಿನ ದಿನಗಳಲ್ಲಿ 100 ಗ್ರಾಂ ತೂಕದ ಪ್ರಸಾದ ಲಾಡುವನ್ನು ಕೇವಲ 35 ರೂಪಾಯಿಗೆ ವಿತರಿಸುವ ಬಗ್ಗೆ ಸಭೆ ನಿರ್ಣಯಿಸಿತು.
ಮಲೈ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಬಳಿಕ ಮುಖ್ಯಮಂತ್ರಿ ಅವರು ನೀಡಿದ ಸೂಚನೆಗಳು…
2500 ರಿಂದ 4000 ಭಕ್ತರು ಒಟ್ಟಿಗೇ ಕುಳಿತು ನಿತ್ಯ ಪ್ರಸಾದ ಸ್ವೀಕರಿಸುವ ದಾಸೋಹ ಭವನ ನಿರ್ಮಿಸಲು ಪರಿಷ್ಕರಿಸಿದ ಯೋಜನೆ ಸಿದ್ದಪಡಿಸಿ ಪ್ರಸ್ತುತ ಪಡಿಸಲು ಸೂಚನೆ.
ಮಹದೇಶ್ವರ ಸನ್ನಿದಿಗೆ ಬರುವ ಭಕ್ತರು ಶೂದ್ರ ಸಮುದಾಯದವರು, ಬಡವರು. ಇವರಿಗೆ ಉತ್ತಮ ವ್ಯವಸ್ಥೆ ಕಲ್ಪಿಸಲು ಹಿಂದೆ ಮುಂದೆ ನೋಡಬಾರದು.
ಭಕ್ತಾಧಿಗಳಿಗೆ ಉತ್ತಮ‌ ಕುಡಿಯುವ ನೀರು, ಶುಚಿತ್ವದ ಶೌಚಾಲಯ, ಸೌಂದರ್ಯೀಕರಣ, ಉಳಿಯಲು ಸೂಕ್ತ ವ್ಯವಸ್ಥೆ ಕಲ್ಪಿಸುವಲ್ಲಿ ರಾಜಿ ಮಾಡಿಕೊಳ್ಳಬಾರದು.
ಹೆಚ್ಚಿನ ಸಂಖ್ಯೆಯ ಶೌಚಾಲಯಗಳನ್ನು ನಿರ್ಮಿಸಬೇಕೆಂದರು. ಇದೇ ಸಂದರ್ಭದಲ್ಲಿ ಸಾಲೂರು ಶ್ರೀ ಗಳಾದ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮಿಜೀಗಳು ,ಸಚಿವರುಗಳಾದ ವೆಂಕಟೇಶ್ . ಹೆಚ್ ಸಿ ಮಹದೇವಪ್ಪ ,ಶಾಸಕರಾದ ಎಮ್ ಆರ್ ಮಂಜುನಾಥ್ . ಪುಟ್ಟರಂಗಶೆಟ್ಟಿ. ಅಧಿಕಾರಿಗಳು ಸೇರಿದಂತೆ ಇನ್ನಿತರರು ಹಾಜರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

18 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

18 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

18 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago