ಕಲ್ಯಾಣಸಿರಿ ವಿಶೇಷ

ಸದಸ್ಯತ್ವ ಅಭಿಯಾನ ಆರಂಭಿಸಿ:ಅಶೋಕಸ್ವಾಮಿ ಹೇರೂರ.

Membership campaign launched: Ashoka Swamy Herura.

ಗಂಗಾವತಿ: ಅಖಿಲ ಭಾರತ ವೀರಶೈವ ಮಹಾಸಭಾ ಸಂಸ್ಥೆಯವತಿಯಿಂದ ಸದಸ್ಯತ್ವ ಅಭಿಯಾನ ಆರಂಭಿಸಬೇಕೆಂದು ಗಂಗಾವತಿ ತಾಲೂಕು ವೀರಶೈವ ಮಹಾಸಭಾದ ನಿಕಟ ಪೂರ್ವ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಕರೆ ನೀಡಿದರು.ಅವರು ಗಂಗಾವತಿ ನಗರದ ಶ್ರೀ ಚನ್ನಬಸವಸ್ವಾಮಿ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದ ಮಹಿಳಾ ಘಟಕದ ವತಿಯಿಂದ ಹಮ್ಮಿಕೊಳ್ಳಲಾದ ಔತಣ ಕೂಟದ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಮುಖ್ಯ ಘಟಕ, ಮಹಿಳಾ ಮತ್ತು ಯುವ ಘಟಕದವತಿಯಿಂದ ವಾರ್ಡ ಮತ್ತು ಗ್ರಾಮಗಳಲ್ಲಿ ಸಂಚಾಲಕರನ್ನು ನೇಮಕ ಮಾಡಿಕೊಳ್ಳುವ ಮೂಲಕ ಸದಸ್ಯತ್ವ ಕಾರ್ಯವನ್ನು ಆರಂಭಿಸಬೇಕೆಂದು ಮೂರು ಘಟಕದ ಪದಾಧಿಕಾರಿಗಳನ್ನು ಕೋರಿದರು. ಪದಾಧಿಕಾರಿಗಳು ಮತ್ತು ಸದಸ್ಯರು ಒಳ ಪಂಗಡದಲ್ಲಿ ಪದಾಧಿಕಾರಿಗಳಾಗಿ ಗುರುತಿಸಿ ಕೊಳ್ಳದೆ ವೀರಶೈವ-ಲಿಂಗಾಯತ ಮಹಾ ಸಭಾದ ಕಾರ್ಯಕ್ರಮಗಳನ್ನು ನಡೆಸಬೇಕೆಂದು ಸೂಚಿಸಿದರು.

ಗಂಗಾವತಿ ತಾಲೂಕು ಮುಖ್ಯ ಘಟಕದ ಅಧ್ಯಕ್ಷ ಎಚ್.ಗಿರೇಗೌಡ,ಪ್ರಧಾನ ಕಾರ್ಯದರ್ಶಿ ಮನೋಹರ ಸ್ವಾಮಿ ಮುದೇನೂರ ಹಿರೇಮಠ,ಪದಾಧಿಕಾರಿಗಳಾದ ಕರಬಸಪ್ಪ ಬೂದಗುಂಪಾ,ನಾಗೂರು,ಯುವ ಘಟಕದ ಅಧ್ಯಕ್ಷ ಶರಣಬಸವ ಹುಲಿಹೈದರ್,ಪ್ರಧಾನ ಕಾರ್ಯದರ್ಶಿ ಬಸವರಾಜ ಹಿರೇಮಠ ಮುದೇನೂರ, ಮಹಿಳಾ ಘಟಕದ ಅಧ್ಯಕ್ಷೆ ನಂದಿನಿ ಮುದಗಲ್ ಮತ್ತು ಕಾರ್ಯದರ್ಶಿ ಶಿಲ್ಪಾ ಶ್ರೀನಿವಾಸ್ ವೇದಿಕೆಯ ಮೇಲೆ ಉಪಸ್ಥಿತರಿದ್ದರು.

ಪಿಕಾರ್ಡ ಬ್ಯಾಂಕ್ ಅಧ್ಯಕ್ಷ ದೊಡ್ಡಪ್ಪ ದೇಸಾಯಿ, ಮನೋಹರಗೌಡ ಹೇರೂರ,ಅನಿತಾ ರಾಜೇಂದ್ರ ಪ್ರಸಾದ,ಡಾ.ಮಂಜುನಾಥ ಪಾಟೀಲ್ ಮುಂತಾದವರು ಮಾತನಾಡಿದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago