Koppal District Congress pays tribute by lighting candles
ಕೊಪ್ಪಳ: ನಗರದ ಕೇಂದ್ರ ಬಸ್ ನಿಲ್ದಾಣದ ಕನಕ ವೃತ್ತದ ಮೂಲಕ ಅಶೋಕ ವೃತ್ತದವರೆಗೆ ಮೆರವಣಿಗೆ ನಡೆಸಿ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಮೂಲಕ ಶೋಕಾಚರಣೆ ಮಾಡಿದರು.
ಜಿಲ್ಲಾ ಕಾಂಗ್ರೆಸ್ನ ಅಧ್ಯಕ್ಷರಾದ ಅಮರೇಗೌಡ ಬಯ್ಯಾಪುರ ನೇತೃತ್ವದಲ್ಲಿ ಮೆರವಣಿಗೆ ಮೂಲಕ ದೇಶದ ಐಕ್ಯತೆ ಭ್ರಾತೃತ್ವ ಮತ್ತು ಭಯೋತ್ಪಾದನೆ ನಿರ್ಮೂಲನೆಗೆ ಒತ್ತಾಯಿಸಿ ಘೋಷಣೆ ಕೂಗಿದರು ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ, ಕೇಂದ್ರದಲ್ಲಿ ಇರುವ ಪಕ್ಷ ಲೋಪಗಳನ್ನು ಸರಿಪಡಿಸಿಕೊಳ್ಳಬೇಕು, ಪಕ್ಷ ಯಾವುದೇ ಇದ್ದರೂ ಅದಕ್ಕೆ ಇಂತಹ ದೇಶದ ಭದ್ರತೆ ವಿಚಾರವಾಗಿ ಸಹಕಾರ ನೀಡಲಾಗುತ್ತದೆ. ಧರ್ಮವನ್ನು ಎಳೆದು ತರುವ ಅಥವಾ ರಾಜಕೀಯ ಬೆರೆಸುವ ಕೆಲಸ ಮಾಡಬಾರದು ಎಂದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಸದಸ್ಯರಾದ ಮುತ್ತುರಾಜ್ ಕುಷ್ಟಗಿ, ಗುರುರಾಜ್ ಹಲಗೇರಿ, ಅಜಿಮ್ ಅತ್ತಾರ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಇಟ್ಟಂಗಿ, ಕಾಂಗ್ರೆಸ್ ಮುಖಂಡರಾದ ಅಜ್ಜಪ್ಪ ಸ್ವಾಮಿ, ಜ್ಯೋತಿ ಎಂ. ಗೊಂಡಬಾಳ, ಕಿಶೋರಿ ಬೂದನೂರ, ಪದ್ಮಾ ಕಂಬಳಿ, ಸವಿತಾ ಗೋರಂಟ್ಲಿ, ರೇಷ್ಮಾ ಖಾಜಾವಲಿ, ಗಾಳೆಪ್ಪ ಪೂಜಾರ, ಅಶೋಕ ಗೋರಂಟ್ಲಿ, ಸುರೇಶ ದಾಸರಡ್ಡಿ ಅನೇಕರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…