ಕಲ್ಯಾಣಸಿರಿ ವಿಶೇಷ

ನಾರಾಯಣ ಸೇವಾ ಸಂಸ್ಥಾನದಿಂದ ದಕ್ಷಿಣ ಭಾರತದ 700 ಕ್ಕೂ ಹೆಚ್ಚು ದಿವ್ಯಾಂಗರಿಗೆ ಕೃತಕ ಅಂಗಾಂಗ ಜೋಡಣೆ

Narayana Seva Sansthan provides prosthetic limbs to over 700 differently-abled people in South India

ಬೆಂಗಳೂರು, ಏ, 27; ನಾರಾಯಣ ಸೇವಾ ಸಂಸ್ಥಾನದಿಂದ ಬೆಂಗಳೂರಿನಲ್ಲಿ ಉಚಿತ ನಾರಾಯಣ್ ಉಚಿತ ಕೃತಕ ಅಂಗಾಂಗ ಮತ್ತು ಕ್ಯಾಲಿಪರ್ ಜೋಡಣಾ ಶಿಬಿರದಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ 700 ಕ್ಕೂ ಅಧಿಕ ಮಂದಿಗೆ ಕೃತಕ ಅಂಗಾಂಗ ಜೋಡಣೆ ಮಾಡಲಾಯಿತು.
ಬಸವನಗುಡಿಯ ಬುಲ್ ಟೆಂಪಲ್ ರಸ್ತೆಯ ಮರಾಠಾ ಹಾಸ್ಟೆಲ್ ಮೈದಾನದಲ್ಲಿ ಮೊದಲೇ ನೋಂದಾಯಿಸಿಕೊಂಡ ಅಂಗವಿಕಲರಿಗೆ ಉಚಿತವಾಗಿ ಕೃತಕ ಅಂಗಗಳನ್ನು ಜೋಡಿಸಲಾಯಿತು.
ನಾರಾಯಣ ಸೇವಾ ಸಂಸ್ಥಾನದ ಬೆಂಗಳೂರು ಶಾಖೆಯ ಮುಖ್ಯಸ್ಥ ವಿನೋದ್ ಜೈನ್. ನಿರ್ದೇಶಕ ಭಗವಾನ್ ಪ್ರಸಾದ್ ಗೌರ್ ನೇತೃತ್ವದಲ್ಲಿ ಕೃತಕ ಅಂಗಾಂಗ ಜೋಡಿಸಲಾಯಿತು. ದಿವ್ಯಾಂಗರು ಮತ್ತವರ ಕುಟುಂಬಕ್ಕೆ ಬೆಳಿಗ್ಗೆ ಉಪಹಾರ, ಮಧ್ಯಾಹ್ನ ಭೋಜನ ವ್ಯವಸ್ಥೆ ಮಾಡಲಾಗಿತ್ತು. ನಾರಾಯಣ ಸೇವಾ ಸಂಸ್ಥಾನದ ಬೆಂಗಳೂರು ಉಸ್ತುವಾರಿ ಖುಬಿಲಾಲ್ ಮೆನಾರಿಯಾ, ಮುಂಬೈ ಶಾಖೆ ಮುಖ್ಯಸ್ಥ ಲಲಿತ್ ಲೋಹರ್, ಸಾಮಾಜಿಕ ಕಾರ್ಯಕರ್ತ ರಾಕೇಶ್ ವೈಷ್ಣವ್, ಗಾನವಿ ಮತ್ತು ಮಾಧ್ಯಮ ಸಂಯೋಜಕರಾದ ಚಂದ್ರಶೇಖರಯ್ಯ ಮತ್ತಿತರರು ದಿವ್ಯಾಂಗರಿಗೆ ನೆರವಾದರು.
ನಾರಾಯಣ ಸೇವಾ ಸಂಸ್ಥೆ 4 ದಶಕಗಳಿಂದ ದಿವ್ಯಾಂಗರ ಪರವಾಗಿ ಕೆಲಸ ಮಾಡುತ್ತಿದೆ. ಫೆಬ್ರವರಿ 2 ರಂದು ಬೆಂಗಳೂರಿನಲ್ಲಿ 1,050 ಕ್ಕೂ ಹೆಚ್ಚು ಮಂದಿ ಕೃತಕ ಅಂಗಾಂಗ ಜೋಡಣೆಗಾಗಿ ಹೆಸರು ನೋಂದಾಯಿಸಿಕೊಂಡಿದ್ದರು. ರಸ್ತೆ ಅಥವಾ ಇತರ ಅಪಘಾತಗಳಿಂದಾಗಿ ಕೈಕಾಲುಗಳನ್ನು ಕಳೆದುಕೊಂಡ 700 ಮಂದಿಯನ್ನು ಅಂಗಾಂಗ ಜೋಡಣೆಗಾಗಿ ಹೆಸರು ನೋಂದಾಯಿಸಿಕೊಳ್ಳಾಗಿತ್ತು. ಜರ್ಮನ್ ತಂತ್ರಜ್ಞಾನದಿಂದ ತಯಾರಿಸಿದ ನಾರಾಯಣ್ ಲಿಂಬ್ಸ್ ಅಳವಡಿಸಲಾಯಿತು. ಫಿಟ್ಮೆಂಟ್ ನಂತರ ಸಂಸ್ಥಾನದ 60 ಸದಸ್ಯರ ಸಮರ್ಪಿತ ತಂಡದ ಮಾರ್ಗದರ್ಶನದಲ್ಲಿ ಸರಿಯಾದ ನಡಿಗೆ ತರಬೇತಿ ನೀಡಲಾಯಿತು. ಈ ಮಾನವೀಯ ಸೇವೆಗಾಗಿ 500 ಕ್ಕೂ ಹೆಚ್ಚು ಸಾಮಾಜಿಕ ಕಾರ್ಯಕರ್ತರು, ಸಮುದಾಯ ಮುಖಂಡರು ಮತ್ತು ಪ್ರಮುಖ ನಾಗರಿಕರು ಭಾಗವಹಿಸಲಿದ್ದಾರೆ.

ನಾರಾಯಣ ಸೇವಾ ಸಂಸ್ಥಾನವು ದೇಶದ ವಿವಿಧ ಪ್ರದೇಶಗಳಲ್ಲಿ ಪ್ರತಿ ವಾರ ಇದೇ ರೀತಿಯ ಶಿಬಿರಗಳನ್ನು ನಡೆಸುತ್ತದೆ. ಅಂತರರಾಷ್ಟ್ರೀಯವಾಗಿ, ಕೀನ್ಯಾ, ಉಗಾಂಡಾ, ಮೇರು, ತಾಂಜಾನಿಯಾ ಮತ್ತು ನೇಪಾಳದಂತಹ ದೇಶಗಳಲ್ಲಿಯೂ ಶಿಬಿರಗಳನ್ನು ಆಯೋಜಿಸಲಾಗಿದೆ. ಪ್ರತಿ ತಿಂಗಳು ಸರಾಸರಿ 1,800 ಕೃತಕ ಅಂಗಗಳನ್ನು ಅಳವಡಿಸಲಾಗುತ್ತದೆ.
ನಾರಾಯಣ ಸೇವಾ ಸಂಸ್ಥಾನವು ಎಲ್ಲಾ ಸಹಾನುಭೂತಿಯುಳ್ಳ ವ್ಯಕ್ತಿಗಳು ಮುಂದೆ ಬಂದು ಈ ಉದಾತ್ತ ಉದ್ದೇಶವನ್ನು ಬೆಂಬಲಿಸುವಂತೆ ಮನವಿ ಮಾಡುತ್ತದೆ. ಉದ್ಘಾಟನಾ ಸಮಾರಂಭ ಬೆಳಿಗ್ಗೆ 11:00 ಗಂಟೆಗೆ ಪ್ರಾರಂಭವಾಗಲಿದೆ. ಈ ಸೇವೆ ಮತ್ತು ಮನ್ನಣೆಯ ಕಾರ್ಯಕ್ರಮವು ಅನೇಕರಿಗೆ ಸ್ಫೂರ್ತಿ ನೀಡುವ ನಿರೀಕ್ಷೆಯಿದೆ.
1985 ರಲ್ಲಿ “ಮಾನವೀಯತೆಯ ಸೇವೆಯೇ ದೇವರ ಸೇವೆ” ಎಂಬ ಮನೋಭಾವದೊಂದಿಗೆ ಸ್ಥಾಪನೆಯಾದ ನಾರಾಯಣ ಸೇವಾ ಸಂಸ್ಥಾಪಕ ಕೈಲಾಶ್ ಮಾನವ್ ಅವರನ್ನು ನಿಸ್ವಾರ್ಥ ಸೇವೆಗಾಗಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದರು. ಸಂಸ್ಥಾನದ ಅಧ್ಯಕ್ಷ ಪ್ರಶಾಂತ್ ಅಗರ್ವಾಲ್ ಅವರು ವೈದ್ಯಕೀಯ ನೆರವು, ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಮತ್ತು ಕ್ರೀಡಾ ಅಕಾಡೆಮಿಗಳ ಮೂಲಕ ಲಕ್ಷಾಂತರ ಅಂಗವಿಕಲರನ್ನು ಮಾನಸಿಕವಾಗಿ, ದೈಹಿಕವಾಗಿ ಮತ್ತು ಆರ್ಥಿಕವಾಗಿ ಬಲಪಡಿಸುವ ಮೂಲಕ ಸಬಲೀಕರಣಗೊಳಿಸಿದ್ದಾರೆ. 2023 ರಲ್ಲಿ, ಅವರಿಗೆ ರಾಷ್ಟ್ರಪತಿಗಳು ರಾಷ್ಟ್ರೀಯ ಪ್ರಶಸ್ತಿಯನ್ನು ಸಹ ನೀಡಿ ಗೌರವಿಸಿದರು. ಇಲ್ಲಿಯವರೆಗೆ, ಸಂಸ್ಥೆಯು 40,000 ಕ್ಕೂ ಹೆಚ್ಚು ಕೃತಕ ಅಂಗಗಳನ್ನು ಅಳವಡಿಸಿದೆ.

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

3 hours ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

22 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

22 hours ago