Breaking News

ಚಿಕ್ಕಪಡಸಲಗಿ ಶ್ರಮಬಿಂದು ಬ್ಯಾರೇಜ್ ಗೆ ನೀರು

Water to Chikkapadasalagi Shramabindu Barrage

ಜಾಹೀರಾತು

ಸಾವಳಗಿ: ಹಿಪ್ಪರಗಿ ಜಲಾಶಯದಿಂದ ಹರಿಸಲಾದ ನೀರು ಗ್ರಾಮದ ಶ್ರಮಬಿಂದು ಸಾಗರವರೆಗೆ ಹರಿದು ಬಂದಿದ್ದರಿಂದ ಈ ಭಾಗದ ರೈತರು ಸಂತಸಗೊಂಡಿದ್ದಾರೆ.
ಕೃಷ್ಣಾ ನದಿ ತೀರದ ಗ್ರಾಮಗಳ ಜನ ಜಾನುವಾರುಗಳ ಕುಡಿಯುವ ನೀರಿನ ಅನುಕೂಲಕ್ಕಾಗಿ ಹಿಪ್ಪರಗಿ ಜಲಾಶಯದಿಂದ ನೀರು ಬಿಡುವಂತೆ ಕ.ನೀ.ನಿ. ಅಧೀಕ್ಷಕ ಅಭಿಯಂತರರು ಆದೇಶಿಸಿದ್ದರು.

ಸೋಮವಾರ ಸಂಜೆ 0.30 ಟಿಎಂಸಿ ನೀರು ಬಿಡಲಾಗಿತ್ತು. ಈ ನೀರು ಮಂಗಳವಾರ ಬೆಳಗ್ಗೆ ಚಿಕ್ಕಪಡಸಲಗಿ ಶ್ರಮಬಿಂದು ಸಾಗರ ತಲುಪಿದ್ದು, ಸುತ್ತಲಿನ ಗ್ರಾಮಸ್ಥರು ಸಂತಸಗೊಂಡಿದ್ದಾರೆ. ಕೇವಲ ಕುಡಿವ ನೀರಿನ ಉದ್ದೇಶಕ್ಕಾಗಿ ನೀರು ಹರಿಸಲಾಗಿದ್ದು, ರೈತರು ಪಂಪ್ ಸೆಟ್ ಮೂಲಕ ಕೃಷಿಗೆ ನೀರು ಬಳಸುವಂತಿಲ್ಲ ಎಂದು ಸೂಚಿಸಲಾಗಿದೆ.

About Mallikarjun

Check Also

ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಲು ಬೇಸಿಗೆ ಶಿಬಿರ ಸಹಕಾರಿ ,ಮಂಜುಳಾ ಶಿವಪ್ಪ ಹ್ತತಿಮರದ ಅಭಿಮತ

Summer camps help in engaging in creative activities, says Manjula Shivappa ವಡ್ಡರಹಟ್ಟಿಯಲ್ಲಿ ಚಿಣ್ಣರಿಗಾಗಿ ಬೇಸಿಗೆ ಶಿಬಿರ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.