ಕಲ್ಯಾಣಸಿರಿ ವಿಶೇಷ

ಎಪಿಎಸ್ ಶಿಕ್ಷಣ ಸಂಸ್ಥೆ ಆವರಣದಲ್ಲಿ ಬೃಹತ್ ಉದ್ಯೋಗ ಮೇಳ


A huge job fair is being held on the premises of APS Educational Institute.

ಬೆಂಗಳೂರು, ಮೇ, 3; ಎಪಿಎಸ್ ಶಿಕ್ಷಣ ಸಂಸ್ಥೆಯಿಂದ ಮಹಾ ಶಿಕ್ಷಣ ಎಕ್ಸ್ ಪೋ ಮತ್ತು ಬೃಹತ್ ಉದ್ಯೋಗ ಮೇಳವನ್ನು 3 ಮೇ ರಂದು ಎನ್.ಆರ್. ಕಾಲೊನಿಯ ಎಪಿಎಸ್ ಜನನ ದೇಗುಲ ಕ್ಯಾಂಪಸ್ ನಲ್ಲಿ ಆಯೋಜಿಸಿತ್ತು.
ಈ ಕಾರ್ಯಕ್ರಮವನ್ನು ಎಐಸಿಟಿಇ ಅಧ್ಯಕ್ಷ ಪ್ರೊ. ಟಿ. ಜಿ. ಸೀತಾರಾಮ್ ಉದ್ಘಾಟಿಸಿ, ವಿದ್ಯಾರ್ಥಿಗಳಲ್ಲಿ ಭವಿಷ್ಯದ ಬಗ್ಗೆ ನೈತಿಕ ಬದ್ಧತೆ ಇದ್ದು, ಇದನ್ನು ಸಕಾರಗೊಳಿಸಲು ಅವಿರತವಾಗಿ ಶ್ರಮಿಸುವ ಅಗತ್ಯವಿದೆ. ಈ ಕನಸು ನನಸು ಮಾಡಲು ಯಾವುದೇ ನೋಂದಣಿ ಶುಲ್ಕವಿಲ್ಲದೇ ಉದ್ಯೋಗ ಮೇಳ ಆಯೋಜಿಸಿರುವುದು ಉತ್ತಮ ಬೆಳವಣಿಗೆ ಎಂದರು.
ಎಪಿಎಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ವಿಷ್ಣು ಭಾರತ ಅಲಂಪಲ್ಲಿ ಮಾತನಾಡಿ, ನಮ್ಮ ಸಂಸ್ಥೆ ಶೈಕ್ಷಣಿಕ ಚಟುವಟಿಕೆ ಜೊತೆಗೆ ಜಾಗತೀಕರಣ ಯುಗದಲ್ಲಿ ಉತ್ತಮ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲು ತಯಾರಾಗುವಂತೆ ಮಾರ್ಗದರ್ಶನ ನೀಡುವುದು ನಮ್ಮ ನೈತಿಕ ಜವಾಬ್ದಾರಿಯಾಗಿದೆ. ಇಂದಿನ ಯುವಶಕ್ತಿ ಕೇವಲ ಬುದ್ಧಿಮತ್ತೆ ಅಷ್ಟೇ ಅಲ್ಲದೆ ಭಾವನಾತ್ಮಕ ಬಲ ಹೊಂದಿರುವ ಶ್ರೇಷ್ಠ ಸಾಮರ್ಥ್ಯವನ್ನು ಹೊಂದಿದೆ ಎಂದರು.
ಪ್ರತಿಷ್ಠಿತ ಕಂಪನಿಗಳ 100ಕ್ಕೂ ಹೆಚ್ಚು ಸಂಸ್ಥೆಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದವು. ಕೆಲವರಿಗೆ ಸ್ಥಳದಲ್ಲಿಯೇ ನೇಮಕಾತಿ ಆದೇಶ ನೀಡಲಾಯಿತು. ಸಮಾಜ ಸೇವೆ ಮತ್ತು ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಈ ಸಂದರ್ಭದಲ್ಲಿ ‘ದಿ ರೋಡ್ ಅಹೆಡ್ 2.0” ಎಂಬ ಪುಸ್ತಕವನ್ನು, ಪ್ರೊ. ಟಿ.ಜಿ. ಸೀತಾರಾಮ್ ಮತ್ತು ಯೋಗಿ ಕೊಚ್ಚಾರ್ ಬಿಡುಗಡೆ ಮಾಡಿದರು.
ಉದ್ಯೋಗ ಮೇಳದಲ್ಲಿ ಬ್ರೋಸ್ ಜಾಬ್ ಸಿಇಒ ಕೃಷ್ಣ ಭಾರ್ಗವ್, ಪರಿಸರವಾದಿಗಳಾದ ರೇವತಿ ಕಾಮತ್, ಹರಿ ಕೇಶವ್ ಮಾಧವ್ ಮತ್ತು ನಟಿ ಬೃಂದಾ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

18 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

18 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

18 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

18 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago