ಕಲ್ಯಾಣಸಿರಿ ವಿಶೇಷ

ಕೊಟಯ್ಯ ಕ್ಯಾಂಪ್ ನಲ್ಲಿ ಜಾಗೃತಿ ಕಾರ್ಯಕ್ರಮ

ದುಡಿಯೋಣ ಬಾ & ಸ್ತ್ರೀ ಚೇತನ ಅಭಿಯಾನದ ಲಾಭ ಪಡೆಯಿರಿ,ತಾ.ಪಂ. ಐಇಸಿ ಸಂಯೋಜಕರಾದ ಬಾಳಪ್ಪ ತಾಳಕೇರಿ ಮಾಹಿತಿ

Awareness program at Kotaiya Camp

ಗಂಗಾವತಿ : ತಾಲೂಕಿನ ಹೊಸ್ಕೇರಾ ಗ್ರಾಮದ ಆಂಜನೇಯ ದೇವಸ್ಥಾಳ ಬಳಿ ಹಾಗೂ ಕೊಟಯ್ಯ ಕ್ಯಾಂಪ್ ನಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ದುಡಿಯೋಣ ಬಾ ಹಾಗೂ ಸ್ತ್ರೀ ಚೇತನ ಅಭಿಯಾನ ನಡೆಸಿ ಶುಕ್ರವಾರ ಕೂಲಿಕಾರರಿಗೆ ನರೇಗಾ ಜಾಗೃತಿ ಕರಪತ್ರ ವಿತರಿಸಿ ಮಾಹಿತಿ ನೀಡಲಾಯಿತು.

ಈ ವೇಳೆ, ತಾಪಂ ಐಇಸಿ ಸಂಯೋಜಕರಾದ ಬಾಳಪ್ಪ ತಾಳಕೇರಿ ಅವರು ಮಾತನಾಡಿ, ಬೇಸಿಗೆ ಹಿನ್ನೆಲೆಯಲ್ಲಿ ದುಡಿಯೋಣ ಬಾ ಅಭಿಯಾನ ಶುರುವಾಗಿದ್ದು, ಕೂಲಿಕಾರರಿಗೆ ನಿರಂತರ ಕೆಲಸ ನೀಡಲಾಗುತ್ತಿದೆ. ಜೊತೆಗೆ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ ಕೈಗೊಳ್ಳಲಾಗಿದೆ. ಎಲ್ಲರೂ ಈ ಅಭಿಯಾನಗಳ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು. ಗ್ರಾಪಂ ನಮೂನೆ 6 ಸಲ್ಲಿಸಿ ಕೆಲಸ ಪಡೆಯುವಂತೆ ತಿಳಿಸಿದರು.

ಏ.1 ರಿಂದ ನರೇಗಾ ಕೂಲಿ ಮೊತ್ತ 349 ರಿಂದ 370 ರೂ.ಗೆ ಹೆಚ್ಚಿಸಲಾಗಿದೆ. ವರ್ಷಕ್ಕೆ 100 ಮಾನವ ದಿನಗಳ ಅವಕಾಶವಿದೆ. ವೃದ್ಧರು, ವಿಕಲಚೇತನರು, ಗರ್ಬಿಣಿಯರು, ಬಾಣಂತಿಯರಿಗೆ ಕೆಲಸದಲ್ಲಿ ರಿಯಾಯಿತಿ ಸೌಲಭ್ಯವಿರುತ್ತದೆ. ಇನ್ನೂ ಮೇ ತಿಂಗಳ ಬೇಸಿಗೆ ಅವಧಿಯಲ್ಲಿ ಕೆಲಸದಲ್ಲಿ ಶೇ.30 ವಿನಾಯತಿ ಇರುತ್ತದೆ ಎಂದರು.

ಗ್ರಾಪಂ ಸಿಬ್ಬಂದಿಗಳು ದಿನಕ್ಕೆ ಎರಡು ಬಾರಿ ಎನ್ ಎಂಎಂಎಸ್ ಹಾಜರಿ ಕಡ್ಡಾಯ & ಪಾರದರ್ಶಕವಾಗಿ ಹಾಕಬೇಕು. ಸಾರ್ವಜನಿಕರ ಕುಂದುಕೊರತೆಗಾಗಿ ಏಕೀಕೃತ ಸಹಾಯವಾಣಿ ಸಂಖ್ಯೆ 82775 06000 ಗೆ ಕರೆ ಮಾಡಬಹುದು ಎಂದು ಮಾಹಿತಿ ನೀಡಿದರು.

ತಾಂತ್ರಿಕ ಸಹಾಯಕರಾದ ಶರಣಯ್ಯ ಅವರು, ಕೂಲಿಕಾರರು ತಮಗೆ ಅಳತೆ ನೀಡಿರುವ ಪ್ರಕಾರ ಕೆಲಸ ನೀರ್ವಹಿಸಬೇಕು. ಕೆಲಸದ ಪ್ರಮಾಣದ ಮೇಲೆ ಕೂಲಿ ದೊರೆಯಲಿದೆ ಎಂದು ಮಾಹಿತಿ ನೀಡಿದರು.

ಗ್ರಾ.ಪಂ. ಕಾರ್ಯದರ್ಶಿಗಳಾದ ವಿರುಪಾಕ್ಷಯ್ಯಸ್ವಾಮಿ,ಎನ್ ಆರ್ ಎಲ್ ಎಂ ಸಂಜೀವಿನಿ ಯೋಜನೆಯ ಕೃಷಿ ತಾಲೂಕು ವ್ಯವಸ್ಥಾಪಕರಾದ ಮುದ್ದಾನೇಶ, ತಾ.ಪಂ. ನರೇಗಾ ಡಿಇಓ ಹನುಮೇಶ, ಗ್ರಾಪಂ
ಸಿಬ್ಬಂದಿಗಳಾದ ದೊಡ್ಡಬಸವ, ಲಕ್ಷ್ಮಣ, ಮಲ್ಲಿಕಾರ್ಜುನ, ಬಿಎಫ್ ಟಿ ಮಂಜುನಾಥ, ವಿಆರ್ ಡಬ್ಲ್ಯೂ ಮಂಜುನಾಥ, ಡಣಾಪುರ ಗ್ರಾಪಂ ಗ್ರಾಮ ಕಾಯಕ ಮಿತ್ರರಾದ ಮಲ್ಲಮ್ಮ, ಸಂಜೀವಿನಿ ಯೋಜನೆಯ
ಎಂ.ಬಿ.ಕೆ. ದ್ರಾಕ್ಷಾಯಣಿ, ಎಲ್ ಸಿಆರ್ ಪಿಗಳಾದ ಅನಿತಾ, ಅನಂತ ಲಕ್ಷ್ಮಿ, ಪಶುಸಖಿ ಜ್ಯೋತಿ, ಸ್ವಸಹಾಯ ಸಂಘದ ಮಹಿಳೆಯರು, ಕೂಲಿಕಾರರು ಇದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

11 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

11 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

11 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

11 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

11 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

11 hours ago