ಕಲ್ಯಾಣಸಿರಿ ವಿಶೇಷ

ಅನ್ಸಾರಿಯವರಿಂದ ಮಾತ್ರ ಕ್ಷೇತ್ರದ ಅಭಿವೃದ್ಧಿ ಸಾಧ್ಯ: ರಮೇಶ ಕಾಳೆ

The development of the constituency is possible only through the Ansaris: Ramesh Kale

ಮತದಾರರು ಜನಮನದ ನಾಯಕನ ಗೆಲ್ಲಿಸುವ ದೃಢ ಸಂಕಲ್ಪ ಮಾಡಬೇಕಿದೆ

ಗಂಗಾವತಿ, ಮೇ.12: ಸುಳ್ಳು ಭರವಸೆಗಳನ್ನು ನೀಡಿ ಶಾಸಕರಾಗಿ ಆಯ್ಕೆಯಾದ ಮಾಜಿ ಸಚಿವ ಜನಾರ್ಧನ ರೆಡ್ಡಿ ಸದ್ಯಕ್ಕೆ ಗಣಿ ಹಗರಣ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಕಳೆದ ಎರಡು ವರ್ಷಗಳ ಇವರ ಆಡಳಿತಾವಧಿಯಲ್ಲಿ ಅಭಿವೃದ್ಧಿ ಕುಂಠಿತವಾಗಿ ಗಂಗಾವತಿ ವಿಧಾನಸಭಾ ಕ್ಷೇತ್ರವು 20 ವರ್ಷಗಳಷ್ಟು ಹಿಂದಕ್ಕೆ ಹೋಗಿದೆ. ಹಗರಣದಲ್ಲಿ ಏಳು ವರ್ಷಗಳ ಕಾಲ ಶಿಕ್ಷೆಗೆ ಗುರಿಯಾಗಿರುವ ಜನಾರ್ಧನ ರೆಡ್ಡಿಯವರ ಶಾಸಕತ್ವ ರದ್ದಾಗಿದ್ದು ಮುಂಬರುವ ದಿನಗಳಲ್ಲಿ ಉಪಚುನಾವಣೆ ಎದುರಾಗಲಿದೆ. ಇನ್ನಾದರೂ ಕ್ಷೇತ್ರದ ಮತದಾರರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಅಭಿವೃದ್ಧಿಯ ಹರಿಕಾರ ಇಕ್ಬಾಲ್ ಅನ್ಸಾರಿಯವರ ಬೆಂಬಲಕ್ಕೆ ನಿಂತು ಅವರನ್ನು ಗೆಲ್ಲಿಸುವ ಮೂಲಕ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಮುನ್ನುಡಿ ಬರೆಯಬೇಕಿದೆ ಎಂದು ಕಾಂಗ್ರೆಸ್ ಯುವ ದಲಿತ ಮುಖಂಡ ರಮೇಶ ಕಾಳೆ ಕರೆ ನೀಡಿದ್ದಾರೆ.
ಈ ಕುರಿತಂತೆ ಪತ್ರಿಕಾ ಮಾಧ್ಯಮಗಳಿಗೆ ಪ್ರಕಟಣೆ ನೀಡಿರುವ ರಮೇಶ ಕಾಳೆ ಅವರು, ಬಳ್ಳಾರಿಯಿಂದ ನಿರ್ಬಂಧನೆಗೆ ಒಳಗಾಗಿ ಗಂಗಾವತಿ ಪ್ರವೇಶಿಸಿದ್ದ ಜನಾರ್ಧನ ರೆಡ್ಡಿ ಚುನಾವಣೆ ಸಂದರ್ಭದಲ್ಲಿ ಸಾವಿರಾರು ಸುಳ್ಳು ಭರವಸೆಗಳು ಹಾಗೂ ಹುಸಿ ಕನಸುಗಳನ್ನು ಬಿತ್ತುವ ಮೂಲಕ ಜನರನ್ನು ಮರಳು ಮಾಡಿ ಶಾಸಕರಾಗಿ ಆಯ್ಕೆಯಾಗಿದ್ದರು. ಆ ಸಂದರ್ಭದಲ್ಲಿಯೇ ರೆಡ್ಡಿಯವರ ಅಸಲಿ ವ್ಯಕ್ತಿತ್ವದ ಬಗ್ಗೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿಯವರು ಜನರನ್ನು ಎಚ್ಚರಿಸಿದ್ದರು. ಆದರೆ, ಆಮೀಷಗಳಿಂದಾಗಿ ಮೈಮರೆತ ಜನ ರೆಡ್ಡಿಯನ್ನು ಬೆಂಬಲಿಸಿ ಇಂದು ಪಶ್ಚತಾಪ ಪಡುವಂತಾಗಿದೆ. ಕಳೆದ ನಾಲ್ಕು ದಶಕಗಳಿಂದ ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಾಜಕೀಯವಾಗಿ ಸಕ್ರೀಯವಾಗಿದ್ದ ಇಕ್ಬಾಲ್ ಅನ್ಸಾರಿಯವರು ಸಚಿವರಾದ ಸಮಯದಲ್ಲಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಮತ್ತು ಅವರ ಅಭಿವೃದ್ಧಿ ಕಾರ್ಯಗಳು ರಾಜ್ಯದ ಗಮನ ಸೆಳೆದಿವೆ. ಯಾವತ್ತೂ ಹುಸಿ ಭರವಸೆ ನೀಡಿದವರಲ್ಲ. ಜನರನ್ನು ಮರಳು ಮಾಡುವ ಪ್ರಯತ್ನವನ್ನೂ ಮಾಡಿದವರಲ್ಲ. ಅಂತಹ ಪಾರದರ್ಶಕ ವ್ಯಕ್ತಿತ್ವದ ಅನ್ಸಾರಿಯವರಿಂದಾಗಿ ಕ್ಷೇತ್ರ ತೀವ್ರಗತಿಯಲ್ಲಿ ಅಭಿವೃದ್ಧಿ ಹೊಂದಿತ್ತು. ಆದರೆ, ರೆಡ್ಡಿಯ ಪ್ರವೇಶದ ನಂತರ ಅಭಿವೃದ್ಧಿ ಕುಂಠಿತವಾಗಿ ಮತ್ತೆ 20 ವರ್ಷ ಹಿಂದಕ್ಕೆ ಹೋಗಿದೆ. ಆದ್ದರಿಂದ ಮುಂದೆ ನಡೆಯಲಿರುವ ಉಪಚುನಾವಣೆಯಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿಯವರನ್ನು ಏಕಮುಖವಾಗಿ ಅತ್ಯಂತ ಹೆಚ್ಚಿನ ಬಹುಮತದಲ್ಲಿ ಗೆಲ್ಲಿಸುವ ಸಂಕಲ್ಪವನ್ನು ಈ ಕ್ಷೇತ್ರದ ಜನತೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕಿದೆ ಎಂದರು.
ಮುಂದುವರೆದು ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ರೆಡ್ಡಿಯ ಕುರಿತಂತೆ ನಾನೂ ಕೂಡ ಸಾರ್ವಜನಿಕವಾಗಿ ಹೇಳಿಕೆ ನೀಡುವ ಮೂಲಕ ಮತದಾರರನ್ನು ಎಚ್ಚರಿಸಿದ್ದೆ. ಬಣ್ಣದ ಮಾತುಗಳಿಗೆ, ಸುಳ್ಳು ಭರವಸೆ, ಆಮೀಷಗಳಿಗೆ ಬಲಿಯಾಗದಂತೆ ಕೂಡ ಮನವಿ ಮಾಡಿದ್ದೆ. ಆದರೆ, ದೀಪದ ಬೆಳಕಿಗೆ ಆಕರ್ಷಣೆಗೆ ಒಳಗಾಗುವ ಮಿಂಚು ಹುಳುಗಳಂತೆ ಕೆಲವರು ಆದನ ಆಮೀಷಕ್ಕೆ ಬಲಿಯಾಗಿದ್ದು ಇಂದು ಎಲ್ಲರ ಕಣ್ಣಮುಂದೆ ಇದೆ. ಇನ್ನಾದರೂ ಕ್ಷೇತ್ರದ ಮತದಾರರು ಜಾಗೃತರಾಗಿ ಜನನಾಯಕರ ಆಯ್ಕೆ ವಿಚಾರದಲ್ಲಿ ಸದೃಢ ನಿಲುವು ತೋರಬೇಕಿದೆ. ಕಳೆದ ಎರಡು ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಯನ್ನು ಗಮನಿಸಿದರೆ ಅನ್ಸಾರಿಯನ್ನು ಬಿಟ್ಟರೆ ಈ ಕ್ಷೇತ್ರದ ಅಭಿವೃದ್ಧ ಬೇರೆ ಯಾರಿಂದಲೂ ಸಾಧ್ಯವಿಲ್ಲ ಎಂಬುವುದು ಸಾಬೀತಾಗಿದೆ. ಆದ್ದರಿಂದ ಗಂಗಾವತಿ ವಿಧಾನಸಭಾ ಕ್ಷೇತ್ರದ ಜನಮನದ ನಾಯಕ ಅನ್ಸಾರಿಯವರನ್ನು ಬೆಂಬಲಿಸಿ ಅಭೂತಪೂರ್ವ ಪ್ರಚಂಡ ಬಹುಮತದಿಂದ ಗೆಲ್ಲಿಸಬೇಕು ಎಂದು ರಮೇಶ ಕಾಳೆ ಮನವಿ ಮಾಡಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

8 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

9 hours ago