ಕಲ್ಯಾಣಸಿರಿ ವಿಶೇಷ

“ಬಿಕ್ಕಿ ಮರಡಿ ದುರ್ಗಮ್ಮ ದೇವಿಯ ಪಲ್ಲಕ್ಕಿ ಮಹೋತ್ಸವ”

Bikki Maradi Durgamma Devi’s Palanki Mahotsav”


ಕೊಟ್ಟೂರು ಪಟ್ಟಣದಲ್ಲಿ ಶನಿವಾರ ಬೆಳಿಗ್ಗೆ ಬಿಕ್ಕಿಮರಡಿ ದುರ್ಗಮ್ಮ ದೇವಿಯ ಪಲ್ಲಕ್ಕಿ ಮಹೋತ್ಸವ ಭಕ್ತರ ಸಡಗರದೊಂದಿಗೆ ಸಾಗುತ್ತಿದ್ದಂತೆ ಮಹಿಳೆಯರು ರಸ್ತೆಯುದ್ದಕ್ಕೂ ಮಲಗಿ ದೇವಿಗೆ ನಮಿಸಿ ಭಕ್ತಿ ಸಮರ್ಪಿಸಿದರು.
ಬಿಕ್ಕಿಮರಡಿ ದುರ್ಗಮ್ಮ ದೇವಿಯ ಪಲ್ಲಕ್ಕಿ ಮಹೋತ್ಸವ ಬುಧವಾರ ಪಟ್ಟಣ ಪ್ರವೇಶ ಮಾಡುವ ಮೂಲಕ ಭಕ್ತರ ಸಡಗರ ಸಂಭ್ರಮದೊಂದಿಗೆ ನೆರೆವೇರಿತು.
ಜೀವಂತ ಕೋಳಿಗಳನ್ನು ಭಕ್ತರು ತೂರುವ ಏಕೈಕ ರಥೋತ್ಸವ ಎಂದೇ ಹೆಗ್ಗಳಿಕೆ ಹೊಂದಿರುವ ಬಿಕ್ಕಿಮರಡಿ ದುರ್ಗಮ್ಮನ ರಥೋತ್ಸವ ಸೋಮವಾರ ನಡೆದ ಹಿನ್ನಲೆಯಲ್ಲಿ ದೇವಿಯ ಮೂರ್ತಿಯನ್ನು ಪಟ್ಟಣದೊಳಕ್ಕೆ ರಥೋತ್ಸವ ಜರುಗಿದ ಮೂರು ದಿನದಲ್ಲಿ ಪಲ್ಲಕ್ಕಿ ಮಹೋತ್ಸವ ಜರುಗುವುದು ಬಹಳ ವರ್ಷಗಳಿಂದ ನಡೆದುಕೊಂಡು ಬಂದ ಧಾರ್ಮಿಕ ವಿಧಿವಿಧಾನವಾಗಿದೆ.
ದುರ್ಗಮ್ಮ ದೇವಿಯ ದೇವಸ್ಥಾನದಿಂದ ಬೆಳಿಗ್ಗೆ ದೇವಿಯ ಮೂರ್ತಿಯನ್ನು ಹೊತ್ತ ಪಲ್ಲಕ್ಕಿ ಉತ್ಸವ ಕೆಳಗೇರಿ ಮೂಲಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿತು. ಪಲ್ಲಕ್ಕಿ ಉತ್ಸವದುದ್ದಕ್ಕೂ ವಾಲ್ಮೀಕಿ ಜನಾಂಗದವರು ಮತ್ತು ಆಯಾಗಾರ ಬಳಗದವರು ಪಾಲ್ಗೊಂಡು ಪರಸ್ಪರ ಕುಂಕುಮ, ಗುಲಾಲು ಇತ್ಯಾದಿಗಳನ್ನು ಮುಖಕ್ಕೆ ಹಚ್ಚಿಕೊಂಡು ಸಂಭ್ರಮಿಸಿದರು. ಪಲ್ಲಕ್ಕಿ ಮಹೋತ್ಸವ ಸಾಗುತ್ತಿದ್ದಂತೆ ಕೊಟ್ಟೂರೇಶ್ವರ ದೇವಸ್ಥಾನ, ಗಾಂಧಿ ವೃತ್ತ ಮತ್ತಿತರ ಕಡೆ ಮಹಿಳಾ ಭಕ್ತರು ರಸ್ತೆಯುದ್ದಕ್ಕೂ ಮಲಗಿಕೊಂಡು ಭಕ್ತಿ ಸಮರ್ಪಿಸಿದರು. ಪಟ್ಟಣದ ಕೆಲವೊಂದು ಓಣಿಗಳಲ್ಲಿ ಭಕ್ತರು ಭೂತಪ್ಪಗಳಿಗೆ ಅಹಾರ ಭಕ್ಷö್ಯ ವನ್ನು ಇಟ್ಟು ಸಂಬ್ರಮಿಸುತ್ತಾರೆ ಭಕ್ತರು ನೀಡಿದ ಬೆಲ್ಲ, ಮೈಸೂರು ಪಾಕು, ಲಾಡು ಇನ್ನು ಇತರೆ ಸಿಹಿ ತಿನುಸುಗಳನ್ನು ಭೂತಪ್ಪಗಳು ತಿಂದು ಖಾಲಿ ಮಾಡುತ್ತವೆ ನಂತರ ಭಕ್ತರು ದೇವಿಯ ಪಲ್ಲಕ್ಕಿ ತಮ್ಮ ಮೇಲೆ ಹಾದು ಹೋದರೆ ಒಳ್ಳೆಯದಾಗುತ್ತದೆಂಬ ನಂಬಿಕೆವಿರಿಸಿಕೊಂಡು ಬಹಳಷ್ಟು ಮಹಿಳೆಯರು ಮತ್ತು ಮಕ್ಕಳು ಈ ರೀತಿ ನಮಿಸಿದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

6 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

6 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

6 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

6 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

7 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

7 hours ago