ಕಲ್ಯಾಣಸಿರಿ ವಿಶೇಷ

ಬಲ್ಡೋಟಾ ಕಾರ್ಖಾನೆ ಒದ್ದೋಡಿಸಲುಜನರನ್ನು ಸಜ್ಜುಗೊಳಿಸೋಣ

Let’s mobilize the people to protest the Baldota factory.



ಕೊಪ್ಪಳ: ನಗರದ ಪಕ್ಕದಲ್ಲಿಯೇ ಬಂದು ಬಲ್ಡೋಟಾ ಕಾರ್ಖಾನೆ ಹಾಕುತ್ತಿರುವದನ್ನು ವಿರೋಧಿಸಿ ಹಲವು ಹಂತದ ಹೋರಾಟ ಜರುಗಿದ್ದು, ಜನರಿಗೆ ಮಾರಕವಾಗಿರುವ ಎಲ್ಲಾ ಕಂಪನಿಗಳನ್ನು ಕೊಪ್ಪಳದಿಂದ ಒದ್ದೋಡಿಸಲು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಮತ್ತು ಪರಿಸರ ಹಿತರಕ್ಷಣಾ ವೇದಿಕೆ ಜಂಟಿ ಕ್ರಿಯಾ ವೇದಿಕೆ ಸಭೆಯಲ್ಲಿ ನಿರ್ಣಯಿಸಲಾಯಿತು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಜಂಟಿ ಕ್ರಿಯಾ ವೇದಿಕೆ ಸಭೆಯಲ್ಲಿ ಬಲ್ಡೋಟಾದ ಎಂಎಸ್‌ಪಿಲ್‌ನ ಬಿಎಸ್‌ಪಿಎಲ್ ಕಾರ್ಖಾನೆ ವಿರುದ್ಧ ಹೋರಾಟದ ರೂಪರೇಷೆ ಸಿದ್ದಪಡಿಸುವ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಅಂತಿಮ ನಿರ್ಣಯ ತೆಗೆದುಕೊಂಡಿದ್ದು ಹಲವು ಹೋರಾಟಕ್ಕೆ ಕೊಪ್ಪಳ ಮತ್ತು ಭಾದಿತ ಪ್ರದೇಶದ ಜನರನ್ನು ಸಜ್ಜುಗೊಳಿಸಲು ನಿರ್ಣಯ ತೆಗೆದುಕೊಳ್ಳಲಾಯಿತು.
ಕೊಪ್ಪಳದ ೩೧ ಮತ್ತು ಭಾಗ್ಯನಗರದ ೧೯ ಹಾಗೂ ಸುಮಾರು ೩೦ ಗ್ರಾಮಗಳಲ್ಲಿ ಪರಿಸರ ಜಾಗೃತಿ ಸಭೆ ನಡೆಸುವದು. ನಗರದ ಅಶೋಕ ವೃತ್ತದಲ್ಲಿ ನಿರಂತರ ಧರಣಿ ಸತ್ಯಾಗ್ರಹ ಹಮ್ಮಿಕೊಂಡು ಪ್ರತಿಯೊಂದು ಸಂಘಟನೆಗಳನ್ನು ಅದರಲ್ಲಿ ತೊಡಗಿಸಿಕೊಳ್ಳುವದು. ಕ್ಷೇತ್ರದ ಸುಮಾರು ೩೦ ಸಾವಿರ ಕುಟುಂಬಗಳಿAದ, ವಿದ್ಯಾರ್ಥಿಗಳಿಂದ ರಾಷ್ಟçಪತಿಗಳು, ಮುಖ್ಯಮಂತ್ರಿಗಳು, ಹಸಿರು ನ್ಯಾಯಾಧಿಕರಣಕ್ಕೆ ಮತ್ತು ಬಲ್ಡೋಟಾ ಮಾಲಿಕರಿಗೆ ಸುಮಾರು ಒಂದು ಲಕ್ಷ ಪತ್ರ ಬರೆಸುವ ಮೂಲಕ ಪತ್ರ ಚಳುವಳಿ ನಡೆಸುವದು.
ಕೊಪ್ಪಳ ಜಿಲ್ಲಾ ಆಫ್‌ಸೆಟ್ ಪ್ರಿಂರ‍್ಸ್ ಅಸೋಸಿಯೇಷನ್ ಅವರಿಂದ ಪೋಸ್ಟರ್ ಜಾಗೃತಿ ಅಭಿಯಾನ ನಡೆಸುವದು. ಕೊಪ್ಪಳದಿಂದ ಗಿಣಿಗೇರಾವರೆಗೆ ಸೈಕಲ್ ಜಾಥಾ ಹಾಗೂ ಕೊಪ್ಪಳ ಕಾರ್ಖಾನೆಗಳಿಂದ ಆಗುತ್ತಿರುವ ಪರಿಸರ ಹಾನಿ ಕುರಿತು ರಾಜ್ಯಮಟ್ಟದ ಕಿರುಚಿತ್ರ ಸ್ಪರ್ಧೆ ಏರ್ಪಡಿಸುವದು ಸೇರಿದಂತೆ ಹಲವು ನಿರ್ಣಯಗಳನ್ನು ಅಂಗೀಕರಿಸಲಾಗಿದ್ದು, ಪೇಂಟ್ ಅಭಿಯಾನ ಮುಗಿದ ತಕ್ಷಣ ಹಂತ ಹಂತವಾಗಿ ಜಾರಿಗೆ ತರಲು ಸಭೆ ಒಕ್ಕೋರಲ ನಿರ್ಣಯ ತೆಗೆದುಕೊಂಡಿದ್ದು, ವಿವಿಧ ಕಾರ್ಯಕ್ರಮಗಳಿಗೆ ಪ್ರತ್ಯೇಕ ಸಮಿತಿ ರಚಿಸಿ ಜವಾಬ್ದಾರಿ ನೀಡಲು ಸಭೆ ಒಪ್ಪಿದೆ.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಮತ್ತು ಪರಿಸರ ಹಿತರಕ್ಷಣಾ ವೇದಿಕೆಯ ಪ್ರಮುಖರುಗಳಾದ ಪ್ರೊ. ಅಲ್ಲಮಪ್ರಭು ಬೆಟ್ಟದೂರು, ಸೋಮರಡ್ಡಿ ಅಳವಂಡಿ, ಬಸವರಾಜ ಶೀಲವಂತರ, ರಮೇಶ ತುಪ್ಪದ, ಮಹಾಂತೇಶ ಕೊತಬಾಳ, ಮಂಜುನಾಥ ಜಿ. ಗೊಂಡಬಾಳ, ಶರಣು ಗಡ್ಡಿ, ಡಾ. ಮಂಜುನಾಥ ಸಜ್ಜನ್, ಸಂತೋಷ ದೇಶಪಾಂಡೆ, ಮುದುಕಪ್ಪ ಹೊಸಮನಿ, ಶಿವಕುಮಾರ ಕುಕನೂರ, ಶರಣು ಪಾಟೀಲ, ಶರಣು ಡೊಳ್ಳಿನ, ಕೇಶವ ಕಟ್ಟಿಮನಿ, ಎಸ್. ಎ. ಗಫಾರ್, ಮಖಬುಲ್ ರಾಯಚೂರ ಇತರರು ಇದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

9 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

9 hours ago