State-level cricket tournament kicks off
ಗಂಗಾವತಿ. ನಗರದ ಕುರು ಹಿನಶೆಟ್ಟಿ ಸಮಾಜದ ಕುರುಹಿನ ಶೆಟ್ಟಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಮಿತಿ ನೇತೃತ್ವದಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಪ್ರೀಮಿಯರ್ ಲೀಗ್ ಸೀಸನ್ 1 ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಶ್ರೀ ಚನ್ನಬಸವ ಸ್ವಾಮಿ ತಾಲೂಕ ಕ್ರೀಡಾಂಗಣದಲ್ಲಿ ಗುರುವಾರದಂದು ಬಸವರಾಜ್ ಕುರುಗೋಡು ಚಾಲನೆ ನೀಡಿದರು. ಬಳಿಕ ಮಾತನಾಡಿದ ಬಸವರಾಜ ಕುರುಗೋಡು ಅವರು ಸಮಾಜದ ಯುವಕರು ಒಂದೆಡೆ ಸೇರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಮಿತಿಯನ್ನು ರಚಿಸಿಕೊಂಡು ಅತ್ಯಂತ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಸಂತಸದಾಯಕ. ಪ್ರಥಮ ಬಾರಿಗೆ ಕ್ರಿಕೆಟ್ ಪಂದ್ಯಾವಳಿಗೆ ರಾಜ್ಯದ ನಾನಾ ಭಾಗಗಳಿಂದ ಸಮಾಜದ 19 ತಂಡಗಳು ಭಾಗವಹಿಸಿರುವುದು ಸಮಾಜದ ಸಂಘಟನೆಗೆ ಅತ್ಯಂತ ಪೂರಕವಾಗಿದೆ ಎಂದು ತಿಳಿಸಿದರು. ಸಮಿತಿಯ ಗೌರವಾಧ್ಯಕ್ಷ ಮಲ್ಲಿಕಾರ್ಜುನ್ ತಟ್ಟಿ ಮಾತನಾಡಿ. ಸಮಾಜದ ಯುವಕರಲ್ಲಿ ಕ್ರೀಡಾ ಮನೋಭಾವನೆ ಬೆಳೆಸುವುದರ ಜೊತೆಗೆ ನಮ್ಮ ಕಲೆ ಪರಂಪರೆ ಸಾಂಸ್ಕೃತಿಕ ಉಳಿಸಿ ಬೆಳೆಸುವ ಉದ್ದೇಶ ಹೊಂದಿರುವುದಾಗಿ ಜೊತೆಗೆ ಒಟ್ಟು ನಾಲ್ಕು ದಿನಗಳ ಕಾಲ ಜರುಗುಲಿರುವ ಪಂದಾವಳಿಗೆ ಆಟಗಾರರಿಗೆ ವಸತಿ ಸೇರಿದಂತೆ ಊಟ ಉಪಚಾರದ ವ್ಯವಸ್ಥೆಯನ್ನು ಸಹ ಮಾಡಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಮಾಜದ ಹಿರಿಯರಾದ ಶಾವಿ ತಿಪ್ಪಣ್ಣ ಎಲ್ಲಪ್ಪ ಪೋಳ್ಕಲ್ ಐಲಿ ನಾರಾಯಣಪ್ಪಐಲಿ ಮಹೇಶ್ ಮಹೇಶ ಉಪಸ್ಥಿತರಿದ್ದರು..
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…