Former MLA R Narendra paid tribute to the deceased activists by paying homage to their portraits and becoming a role model.

ವರದಿ : ಬಂಗಾರಪ್ಪ .ಸಿ .
ಹನೂರು : ನಮ್ಮ ಪಕ್ಷದ ಪ್ರತಿಯೊಬ್ಬರೂ ಸಹ ನಮ್ಮ ಮನೆಯವರು ಸದಾಕಾಲವೂ ಅವರ ಕಷ್ಟಸುಖಗಳಿಗೆ ಸ್ಪಂದಿಸುವ ಕಾರ್ಯ ಮಾಡಬೇಕೆಂದು ಮಾಜಿ ಶಾಸಕರಾದ ಆರ್ ನರೇಂದ್ರ ತಿಳಿಸಿದರು.
ಹನೂರು ತಾಲ್ಲೂಕಿನ ಗೋಪಿನಾಥಂ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡರಾದ ಚಿನ್ನಪ್ಪಯ್ಯ ಕೌಂಡರ್ ರವರು ನಿಧನ ಹೊಂದಿದ ವಿಷಯ ತಿಳಿದ ಹನೂರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರಾದ ಆರ್ ನರೇಂದ್ರ ರಾಜುಗೌಡ ಅವರ ನಿವಾಸಕ್ಕೆ ತೆರಳಿ ಅವರ ಕುಟುಂಬಕ್ಕೆ ಧೈರ್ಯ ತುಂಬಿ ಅವರ ಫೋಟೋಗೆ ಪೂಜೆ ಸಲ್ಲಿಸುವ ಮೂಲಕ ಪಕ್ಷದ ಪ್ರತಿಯೊಬ್ಬರು ನಮ್ಮಮನೆಯವರು ಅವರ ನಿಧನದಿಂದ ನಮ್ಮ ಪಕ್ಷಕ್ಕೆ ತುಂಬಲಾರದ ನಷ್ಠವಾಗಿದೆ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು.
ಹಾಗೂ ಇದೇ ಗ್ರಾಮದ ಮತ್ತೋಬ್ಬ ಹಿರಿಯ ಕಾಂಗ್ರೆಸ್ ಮುಖಂಡರಾದ ಭೂಪಾಲ್ ಕೌಂಡರ್ ರವರು ನಿಧನ ಹೊಂದಿದ ವಿಷಯ ತಿಳಿದು ಮನೆಗೆ ತೆರಳಿ ಅವರ ಕುಟುಂಬಕ್ಕೆ ಧೈರ್ಯ ತುಂಬಿ ಫೋಟೋಗೆ ಅಂತಿಮ ನಮನ ಸಲ್ಲಿಸಿ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು .ಇದೇ ಸಮಯದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಮುಖಂಡರು ಸೇರಿದಂತೆ ಇನ್ನಿತರರು ಹಾಜರಿದ್ದರು.