MLA Jagadish Gudagunti performs Bhoomi Puja for road works

ಸಾವಳಗಿ: ಗ್ರಾಮೀಣ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಸುಗಮ ಸಂಚಾರ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ರಸ್ತೆ ನಿರ್ಮಿಸಲಾಗುತ್ತಿದೆ ಎಂದು ಜಮಖಂಡಿ ಶಾಸಕ ಜಗದೀಶ ಗುಡಗುಂಟಿ ಹೇಳಿದರು.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ನಗರದಲ್ಲಿ ಶುಕ್ರವಾರ ರಾಜ್ಯ ಹೆದ್ದಾರಿ ಕಕಮರಿ ಖಾನಾಪುರ ಕಿ.ಮೀ 26.60 ರಿಂದ ಕಿ. ಮೀ. 27.70 ಮತ್ತು ಕಿ. ಮೀ 39.50 ರಿಂದ ಕಿ. ಮೀ 45.80 ರವರೆಗೆ 508 ಲಕ್ಷಗಳ ವೆಚ್ಚದಲ್ಲಿ ರಸ್ತೆ ಸುಧಾರಣೆ ಕಾಮಗಾರಿಯನ್ನು ಜಮಖಂಡಿ ಶಾಸಕ ಜಗದೀಶ ಗುಡಗುಂಟಿ ಅವರು ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಜಮಖಂಡಿ, ಮಿರಜ, ಮಹಾರಾಷ್ಟ್ರ ಸೇರಿದಂತೆ ನೂರಾರು ವಾಹನಗಳು ಸಂಚಾರ ಮಾಡುತ್ತಿದ್ದು ಹಾಗಾಗಿ ಈ ರಸ್ತೆಯು ತಗ್ಗು, ರಸ್ತೆ ಹದಗೆಟ್ಟಿದ್ದು ಈ ರಸ್ತೆ ನಿರ್ಮಾಣ ಮಾಡಲು ಇಂದು ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಲಾಯಿತು ಎಂದರು.
ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮದ ಜನಪ್ರತಿನಿಧಿಗಳು, ಗ್ರಾಮದ ಹಿರಿಯರು ಉಪಸ್ಥಿತರಿದ್ದರು.