Breaking News

ರಸ್ತೆ ಕಾಮಗಾರಿಗೆ ಶಾಸಕ ಜಗದೀಶ ಗುಡಗುಂಟಿ ಇವರಿಂದ ಭೂಮಿ ಪೂಜೆ

MLA Jagadish Gudagunti performs Bhoomi Puja for road works

ಜಾಹೀರಾತು

ಸಾವಳಗಿ: ಗ್ರಾಮೀಣ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಸುಗಮ ಸಂಚಾರ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ರಸ್ತೆ ನಿರ್ಮಿಸಲಾಗುತ್ತಿದೆ ಎಂದು ಜಮಖಂಡಿ ಶಾಸಕ ಜಗದೀಶ ಗುಡಗುಂಟಿ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ನಗರದಲ್ಲಿ ಶುಕ್ರವಾರ ರಾಜ್ಯ ಹೆದ್ದಾರಿ ಕಕಮರಿ ಖಾನಾಪುರ ಕಿ.ಮೀ 26.60 ರಿಂದ ಕಿ‌. ಮೀ. 27.70 ಮತ್ತು ಕಿ. ಮೀ 39.50 ರಿಂದ ಕಿ. ಮೀ 45.80 ರವರೆಗೆ 508 ಲಕ್ಷಗಳ ವೆಚ್ಚದಲ್ಲಿ ರಸ್ತೆ ಸುಧಾರಣೆ ಕಾಮಗಾರಿಯನ್ನು ಜಮಖಂಡಿ ಶಾಸಕ ಜಗದೀಶ ಗುಡಗುಂಟಿ ಅವರು ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಜಮಖಂಡಿ, ಮಿರಜ, ಮಹಾರಾಷ್ಟ್ರ ಸೇರಿದಂತೆ ನೂರಾರು ವಾಹನಗಳು ಸಂಚಾರ ಮಾಡುತ್ತಿದ್ದು ಹಾಗಾಗಿ ಈ ರಸ್ತೆಯು ತಗ್ಗು, ರಸ್ತೆ ಹದಗೆಟ್ಟಿದ್ದು ಈ ರಸ್ತೆ ನಿರ್ಮಾಣ ಮಾಡಲು ಇಂದು ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಲಾಯಿತು ಎಂದರು.

ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮದ ಜನಪ್ರತಿನಿಧಿಗಳು, ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

About Mallikarjun

Check Also

screenshot 2025 07 30 13 52 28 88 6012fa4d4ddec268fc5c7112cbb265e7.jpg

ಕ್ರಿಸ್ತರಾಜ ವಿದ್ಯಾಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆದ “ಗ್ರೀನ್ ಕ್ಯಾಂಪಸ್ ಕ್ಲೀನ್ ಕ್ಯಾಂಪಸ್” ಉದ್ಘಾಟನಾ ಕಾರ್ಯಕ್ರಮ.

The inauguration program of "Green Campus Clean Campus" was successfully held at Christaraja Educational Institution. …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.